Prakash Raj: ನಿನ್ನ ಆ ದಾರಿ ತಪ್ಪಿದ ಮಗ ಎಲ್ಲಿದ್ದಾನೆ? ಕುಮಾರಸ್ವಾಮಿಗೆ ಪ್ರಕಾಶ್ ರಾಜ್ ಪ್ರಶ್ನೆ
ಬೆಂಗಳೂರು, ಏಪ್ರಿಲ್ 29: ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ವಿಶೇಷ ತನಿಖಾ ತಂಡ ತನಿಖೆ ಆರಂಭಿಸಿದೆ. ಹಾಸನ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು, ಕಾಂಗ್ರೆಸ್ ನಾಯಕರು ಜೆಡಿಎಸ್ ವಿರುದ್ಧ ಕ್ಷಣ ಕ್ಷಣಕ್ಕೂ ಕಿಡಿಕಾರುತ್ತಿದ್ದಾರೆ.
ಇದರ ನಡುವೆಯೇ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡ ಬಿಜೆಪಿ ವಿರುದ್ಧ ನಟ ಪ್ರಕಾಶ್ ರಾಜ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಯಚೂರಿನ ಸಮಾವೇಶದಲ್ಲಿ ಮಾತನಾಡಿದ ನಟ ಪ್ರಕಾಶ್ ರಾಜ್, ನಮ್ಮ ಪ್ರತಿನಿಧಿಗಳನ್ನು ನಾವೇ ಆರಿಸಬೇಕು ಎಂದು ಮಾತನಾಡುತ್ತಾ ಹಾಸನ ಪ್ರಜ್ವಲ್ ರೇವಣ್ಣ ಅವರ ಪ್ರಕರಣವನ್ನು ಪ್ರಸ್ತಾಪಿಸಿ, ಬಿಜೆಪಿ ನಾಯಕರು ಹಾಗೂ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.

ನಾನು ಮಹಾಪ್ರಭುಗಳಿಗೆ ಕೇಳಬೇಕು ಅಂದುಕೊಂಡಿದ್ದೆ ಎಂದು ಪರೋಕ್ಷವಾಗಿ ಪ್ರಧಾನಿ ನರೇದ್ರ ಮೋದಿ ಅವರ ಮೇಲೆ ಕಿಡಿಕಾರಿದ ಪ್ರಕಾಶ್ ರಾಜ್, ನಿನ್ನ ಜೊತೆ ಮೈತ್ರಿ ಮಾಡಿಕೊಂಡ ಅಣ್ಣ ಇದಾನಲ್ಲ. ಆ ಅಣ್ಣ ಹೆಣ್ಣು ಮಕ್ಕಳಿಗೆ ಉಚಿತ ಬಸ್ ಕೊಟ್ಟರೆ ದಾರಿ ತಪ್ಪಿದ್ರು ಅಂದ್ರು. ಆದ್ರೆ ನಿನ್ನ ಆ ದಾರಿ ತಪ್ಪಿದ ಮಗ ಈಗ ಎಲ್ಲವ್ನೆ ವಸಿ ಹೇಳಪ್ಪಾ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಪ್ರಕಾಶ್ ರಾಜ್ ವ್ಯಂಗ್ಯವಾಡಿದರು.
ಹುಬ್ಬಳ್ಳಿಯಲ್ಲಿ ಹತ್ಯೆಯಾದ ವಿದ್ಯಾರ್ಥಿನಿ ನೇಹಾ ಹಿರೇಮಠ ಪ್ರಕರಣದಲ್ಲಿ ಬಿಜೆಪಿಗರು ಎಷ್ಟೆಲ್ಲಾ ಮಾಡಿದರು. ಆದರೆ ದಾರಿ ತಪ್ಪಿದ ಮಗನಿಂದ ಹಾಳಾದ ಹೆಣ್ಣುಮಕ್ಕಳು ಹಿಂದೂ ಮಹಿಳೆಯರಲ್ವಾ? ದಾರಿ ತಪ್ಪಿದ ಮಗನಿಂದ ಹಾಳಾದ 2,000ಕ್ಕೂ ಹೆಚ್ಚು ಮಹಿಳೆಯರಿಗೋಸ್ಕರ ನಿಮಗೆ ಆಕ್ರೋಶ ಬರಲ್ವಾ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿಮ್ಮ ರಾಜಕಾರಣ ನಮಗೆ ಅರ್ಥ ಆಗುವುದಿಲ್ಲ ಎಂದು ಕೊಂಡಿದ್ದೀರಾ..? ದೊಡ್ಡ ಮನಸ್ಸಿನವರು ನಾವು ಕ್ಷಮಿಸಬಹುದು ಆದರೆ ಮರೆಯಲ್ಲ. ಪ್ರಜಾಪ್ರಭುತ್ವದಲ್ಲಿ ಪ್ರಜೆಗಳಾದ ನಮ್ಮ ಜವಾಬ್ದಾರಿ ಮುಖ್ಯ. ಸೂಕ್ತ ವ್ಯಕ್ತಿಯನ್ನು ಆರಿಸುವುದು ನಮ್ಮ ಜವಾಬ್ದಾರಿ. ಅವರನ್ನು ಯಾರನ್ನು ಬೈಬೇಡಿ ನೀವು. ಅಂಧ ಭಕ್ತರು ಅಂತೆಲ್ಲಾ ಬೈಬೇಡಿ. ಅವರು ನಮ್ಮವರೇ, ಅವರಿಗೆ ಮತ್ತೆ ಮತ್ತೆ ತಿಳಿ ಹೇಳೋಣ. ಇಲ್ಲಿಂದ ಹೋಗಿ ನೀವು ನಿಮ್ಮ ಗೆಳೆಯರಿಗೆ ಸಾಧ್ಯವಾದಷ್ಟು ಮೇ ಏಳನೇ ತಾರೀಕಿನವರೆಗೆ ಮೊದಲು ಈ ಪ್ರತಿನಿಧಿಗಳನ್ನು ಇಳಿಸುವ ಕೆಲಸ ಮಾಡೋಣ ಎಂದು ಅರ್ಥ ಮಾಡಿಸಿ.
ಇದಾದ ನಂತರ ಬರುವ ಯಾವುದೇ ಸರ್ಕಾರವಿದ್ದರೂ, ನಾವು ಮತ್ತೆ ಹೀಗೆ ಸೇರಿ ಹಿರಿಯರೊಂದಿಗೆ ಚರ್ಚಿಸಿ ನಮ್ಮ ಬೇಡಿಕೆಯನ್ನು ಇನ್ನೂ ತೀವ್ರವಾಗಿ ಇಡೋಣ ಅವರ ಮುಂದೆ ಎಂದು ಮತದಾರರಿಗೆ ಕರೆ ಕೊಟ್ಟಿದ್ದಾರೆ.
-
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications