ಹೆಚ್.ಡಿ ರೇವಣ್ಣಗೆ ಲುಕ್ಔಟ್ ನೋಟಿಸ್: ಪುತ್ರನಂತೆ ವಿದೇಶಕ್ಕೆ ಹಾರಿದರಾ ಜೆಡಿಎಸ್ ನಾಯಕ?
ಬೆಂಗಳೂರು, ಮೇ 04: : ಹಾಸನದಲ್ಲಿ ಹರಿದಾಡುತ್ತಿರುವ ಅಶ್ಲೀಲ ವಿಡಿಯೋ ಪ್ರಕರಣ ದೇಶದಾದ್ಯಂತ ಸಂಚಲನ ಮೂಡಿಸಿದೆ. ಈಗಾಗಲೇ ಪ್ರಕರಣದ ತನಿಖೆಗೆ ಎಸ್ಐಟಿ ತಂಡ ರಚಿಸಲಾಗಿದ್ದು, ತನಿಖೆ ಕೂಡ ಆರಂಭವಾಗಿದೆ. ಪ್ರಕರಣದಲ್ಲಿ ಎ1 ಆರೋಪಿ ಮಾಜಿ ಸಚಿವ ಹೆಚ್.ಡಿ ರೇವಣ್ಣ, ಎ2 ಆರೋಪಿ ಪ್ರಜ್ವಲ್ ರೇವಣ್ಣ ಎಂದು ದಾಖಲಿಸಲಾಗಿದೆ.
ಆದರೆ ಪ್ರಕರಣ ಸಂಬಂಧ ಈವರೆಗೂ ಯಾರೋಬ್ಬ ಆರೋಪಿಯ ಬಂಧನವಾಗಿಲ್ಲ. ಪ್ರಕರಣದ ಎ1 ಆರೋಪಿ ಹಾಗೂ ಎ2 ಆರೋಪಿ ಬಂಧನವಾಗಿಲ್ಲ. ಎ2 ಆರೋಪಿ ಪ್ರಜ್ವಲ್ ರೇವಣ್ಣ ವಿಚಾರಣೆಗೆ ಹಾಜರಾಗದೇ ಜರ್ಮಿನಿಯಲ್ಲಿರುವ ಕಾರಣ ಲುಕ್ಔಟ್ ನೋಟಿಸ್ ನೀಡಲಾಗಿತ್ತು. ಇದೀಗ ಹೆಚ್.ಡಿ ರೇವಣ್ಣ ಕೂಡ ದಿಢೀರ್ ನಾಪತ್ತೆ ಆಗಿದ್ದು, ವಿಚಾರಣೆಗೆ ನೋಟಿಸ್ ನೀಡಿದರೂ ಯಾವುದೇ ಉತ್ತರವಿಲ್ಲ. ಹೀಗಾಗಿ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಎಸ್ಐಟಿ ಲುಕ್ಔಟ್ ನೋಟಿಸ್ ಜಾರಿ ಮಾಡಿದೆ.

ಪ್ರಕರಣ ಸಂಬಂಧ ಎಸ್ಐಟಿ ತನಿಖೆ ಚುರುಕುಗೊಂಡಿದ್ದು, ಪ್ರಕರಣ ಇಷ್ಟೊಂದು ಗಂಭೀರವಾಗಿದ್ದರೂ ಎ1 ಆರೋಪಿ ಹೆಚ್.ಡಿ ರೇವಣ್ಣ ಹಾಗೂ ಎ2 ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ಯಾಕೆ ಬಂಧಿಸಿಲ್ಲ ಎನ್ನುವ ಪ್ರಶ್ನೆ ರಾಜ್ಯ ಸರ್ಕಾರದ ಮುಂದಿದೆ. ಇನ್ನು ಪ್ರಕರಣದ ಎ1 ಆರೋಪಿ ಕೂಡ ಈಗ ಕಣ್ಮರೆಯಾಗಿದ್ದು, ಮಗನಂತೆ ತಂದೆ ಕೂಡ ವಿದೇಶಕ್ಕೆ ಹಾರಿದರಾ ಎನ್ನುವ ಪ್ರಶ್ನೆ ಉದ್ಭವವಾಗಿದೆ.
ಆರೋಪಿಗಳ ಬಂಧನದ ಬಗ್ಗೆ ಗೃಹ ಸಚಿವರ ಉತ್ತರವೇನು..?
ಇನ್ನು ಪ್ರಕರಣ ಸಂಬಂಧ ಆರೋಪಿಗಳನ್ನು ಯಾಕೆ ಬಂಧಿಸಿಲ್ಲ ಎನ್ನುವ ಪ್ರಶ್ನೆಗೆ ಈ ಹಿಂದೆಯೇ ಉತ್ತರಿಸಿದ್ದ ಗೃಹ ಸಚಿವ ಜಿ.ಪರಮೇಶ್ವರ್, ಪ್ರಕರಣಕ್ಕೆ ಸಂಬಂಧಿಸಿದಂತೆ ಪುರಾವೆಗಳು, ದೂರಿನಲ್ಲಿ ಏನು ಹೇಳಿರುತ್ತಾರೆ ಎನ್ನುವುದೆಲ್ಲಾ ಮುಖ್ಯವಾಗುತ್ತವೆ. ಪ್ರಕರಣ ಯಾವ ಸೆಕ್ಷನ್ ಅಡಿಯಲ್ಲಿ ಬರುತ್ತದೆ? ಅದರಲ್ಲಿ ಬಂಧಿಸಲು ಅವಕಾಶ ಇದೆಯೇ? ಜಾಮೀನು ಪಡೆಯುವಂಥ ಪ್ರಕರಣವೇ? ಅಥವಾ ಜಾಮೀನು ಸಿಗದಂತಹ ಪ್ರಕರಣವೇ? ಈ ಅಂಶಗಳನ್ನೆಲ್ಲ ನೋಡಬೇಕಾಗುತ್ತದೆ ಎಂದು ಹೇಳಿದ್ದರು.
ಇಂದು ಕೂಡ ಆರೋಪಿಗಳ ಬಂಧನದ ಬಗ್ಗೆ ಮಾತನಾಡಿದ ಅವರು, ಪ್ರಜ್ವಲ್ನಂತೆ ಬೇರೆ ದೇಶಕ್ಕೆ ಹೋಗುವುದನ್ನು ತಡೆಯಲು ರೇವಣ್ಣ ಅವರಿಗೆ ನೋಟೀಸ್ ಕೊಟ್ಟಾಗಿದ್ದು, ಎರಡನೇ ನೋಟಿಸ್ಗೆ ಪ್ರತಿಕ್ರಿಯಿಸಲು ಸಂಜೆಯವರೆಗೆ ಸಮಯವಿದೆ. ಅವರು ಮೈಸೂರು ಅಪಹರಣ ಪ್ರಕರಣದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ತನಿಖೆ ಆಗುತ್ತಿದೆ. ಬಂಧನ ಆಗುತ್ತದೆ ಎಂದು ಹೇಳಿದರು.
-
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ











Click it and Unblock the Notifications