ತಾಯಿಯನ್ನು ಶೌಚಾಲಯದಲ್ಲಿ ಕೂಡಿಹಾಕಿದ ಮಗ
ಹಾಸನ, ಜು. 14 : ಮನೆಯ ಆಸೆಗಾಗಿ ತಾಯಿಯನ್ನು ಶೌಚಾಲಯದಲ್ಲಿ ಕೂಡಿಹಾಕಿದ್ದ ಮಗನೊಬ್ಬನ ಪಾಪ ಕೃತ್ಯ ಹಾಸನದಲ್ಲಿ ಬೆಳಕಿಗೆ ಬಂದಿದೆ. ಸ್ಥಳೀಯರು ಮತ್ತು ಪೊಲೀಸರು ಸಹಕಾರದಿಂದ ಮಹಿಳೆಯನ್ನು ರಕ್ಷಿಸಲಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹಾಸನ ಜಿಲ್ಲೆ ಚನ್ನರಾಯಪಟ್ಟಣದ ತಾಲೂಕಿನ ಸುಗ್ಗನಹಳ್ಳಿ ಜನತಾ ಕಾಲೋನಿ ನಿವಾಸಿ ಜಯಮ್ಮನನ್ನು (67), ಮಗ ರಮೇಶ್ ಮೂರು ದಿನದಿಂದ ಅನ್ನ, ನೀರು ಕೊಡದೆ ಶೌಚಾಲಯದಲ್ಲಿ ಕೂಡಿ ಹಾಕಿದ್ದ. ತಾಯಿಯನ್ನು ಪೊಲೀಸರು ಮತ್ತು ಸ್ಥಳೀಯರ ಸಹಕಾರದಿಂದ ರಕ್ಷಿಸಿರುವ ಪುತ್ರಿ ಪದ್ಮಾ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪ್ರಕರಣ ಬೆಳಕಿಗೆ ಬಂದ ನಂತರ ಆರೋಪಿ ರಮೇಶ್ ತಲೆಮರಿಸಿಕೊಂಡಿದ್ದು ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಜಯಮ್ಮ ವಾಸಿಸುತ್ತಿದ್ದ ಮನೆಯನ್ನು ರಮೇಶ್ ಹೆಸರಿಗೆ ಬರೆದುಕೊಡಲು ಆಕೆ ನಿರಾಕರಿಸಿದ್ದರಿಂದ ಆಕೆಯನ್ನು ಕೂಡಿಹಾಕಿ, ಅನ್ನ, ನೀರು ಕೊಡದೆ ಹಿಂಸೆ ನೀಡುತ್ತಿದ್ದ ಎಂದು ಸ್ಥಳೀಯರು ಹೇಳಿದ್ದಾರೆ. [ರಾಜ್ಯದ ಗೃಹ ಬಂಧನ ಪ್ರಕರಣಗಳು]
ಕಡಲೆಕಾಯಿ ಜಯಮ್ಮ : ಮೂವತ್ತು ವರ್ಷಗಳಿಂದ ಕಡಲೆಕಾಯಿ ವ್ಯಾಪಾರ ಮಾಡುತ್ತಿದ್ದ ಜಯಮ್ಮ ಅವರು ಕಡಲೆ ಕಾಯಿ ಜಯಮ್ಮ ಎಂದು ಎಲ್ಲರಿಗೂ ಪರಿಚಿತರು. ಇವರಿಗೆ ಮೂವರು ಪುತ್ರರು ಮತ್ತು ಇಬ್ಬರು ಪುತ್ರಿಯರು. ಜಯಮ್ಮ ಪತಿ ಸುಮಾರು 20 ವರ್ಷಗಳ ಹಿಂದೆ ಸಾವನ್ನಪ್ಪಿದ್ದಾರೆ.
ಸರ್ಕಾರದಿಂದ ಮಂಜೂರಾಗಿದ್ದ ಜನತಾ ಮನೆಯಲ್ಲಿ ಜಯಮ್ಮ ಅವರು ವಾಸಿಸುತ್ತಿದ್ದರು ಪತಿ ತೀರಿಕೊಂಡಿದ್ದ ಮಗಳು ಪದ್ಮ ಸಹ ಜಯಮ್ಮ ಜೊತೆ ನೆಲೆಸಿದ್ದರು. ಹಿರಿಯ ಮಗನಾದ ರಮೇಶ್ ಮನೆಯನ್ನು ತನ್ನ ಹೆಸರಿಗೆ ಬರೆದುಕೊಡು ಎಂದು ಜಯಮ್ಮ ಅವರಿಗೆ ಒತ್ತಾಯ ಮಾಡುತ್ತಿದ್ದ. ಈ ವಿಚಾರವಾಗಿ ತಾಯಿ ಮತ್ತು ಸಹೋದರಿ ಪದ್ಮಾ ಮೇಲೆ ಹಲ್ಲೆ ನಡೆಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಮಗನ ಈ ವರ್ತನೆ ಕುರಿತು ಜಯಮ್ಮ ಅವರಿಗೆ ಪೊಲೀಸರಿಗೂ ಮಾಹಿತಿ ನೀಡಿದ್ದರು. ಆದರೂ ಆತನ ತನ್ನ ಒತ್ತಾಯವನ್ನು ಮುಂದುವರೆಸಿದ್ದ. ಇದರಿಂದ ಬೇಸತ್ತ ಪದ್ಮಾ ಬೇರೆ ಮನೆ ಮಾಡಿದ್ದರು. ಗುರುವಾರ ಜಯಮ್ಮ ಮನೆಗೆ ಬಂದ ರಮೇಶ್ ತಾಯಿಯೊಂದಿಗೆ ಜಗಳವಾಡಿ, ನಂತರ ಆಕೆಯನ್ನು ಶೌಚಾಲಯದಲ್ಲಿ ಕೂಡಿಹಾಕಿ ಮನೆಗೆ ಬೀಗಹಾಕಿಕೊಂಡು ಹೋಗಿದ್ದ.
ರಮೇಶ್ ನ ಬಗ್ಗೆ ತಿಳಿದಿದ್ದ ಸ್ಥಳೀಯರು ಸಹಾಯಕ್ಕೆ ಬರದೆ ಸುಮ್ಮನಿದ್ದರು. ಶನಿವಾರ ಜಯಮ್ಮ ಪುತ್ರಿ ಪದ್ಮಾ ಅವರಿಗೆ ಈ ವಿಷಯ ತಿಳಿದಿದೆ. ಪೊಲೀಸರು ಮತ್ತು ಸ್ಥಳೀಯರ ಸಹಕಾರದಿಂದ ಆಕೆ ಮನೆಯ ಬೀಗ ಮುರಿದು ತಾಯಿಯನ್ನು ರಕ್ಷಿಸಿದ್ದಾರೆ. ಮೂರು ದಿನಗಳಿಂದ ಊಟ, ನೀರು ಇಲ್ಲದೆ ನಿತ್ರಾಣರಾಗಿದ್ದ ಜಯಮ್ಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications