ಜಗದೀಶ್ ಶೆಟ್ಟರ್ಗೆ ಹಾವೇರಿ, ಸವದಿಗೆ ಬಾಗಲಕೋಟೆ: ಲಿಂಗಾಯತರನ್ನು ಸೆಳೆಯಲು ಅಪ್ಪ-ಮಗನ ಮಹಾತಂತ್ರ
ಬೆಂಗಳೂರು, ಫೆಬ್ರವರಿ 01: ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಟಿಕೆಟ್ ಸಿಗದ ಹಿನ್ನಲೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದದದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಮತ್ತೆ ಪಕ್ಷಕ್ಕೆ ಕರೆತರುವ ನಿಟ್ಟಿನಲ್ಲಿ ನಡೆಸಿದ್ದ ಮಹಾತಂತ್ರದಲ್ಲಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹಾಗೂ ಬಿ ವೈ ವಿಜಯೇಂದ್ರ ಯಶಸ್ವಿಯಾಗಿದ್ದಾರೆ.
ಹೌದು, ಲೋಕಸಭಾ ಚುನಾವಣೆಯ ಹೊಣೆ ಹೊತ್ತಿರುವ ವಿಜಯೇಂದ್ರ ತಂದೆಯೊಂದಿಗೆ ಹಲವು ಲಿಂಗಾಯತ ನಾಯಕರನ್ನ ಸೆಳೆಯುವ ತಂತ್ರಗಾರಿಕೆಯನ್ನ ನಡೆಸಿದ್ದು, ಇದು ಲೋಕಸಭೆ ಚುನಾವಣೆ ಮೊದಲೇ ಕಾಂಗ್ರೆಸ್ಗೆ ಮರ್ಮಾಘಾತ ನೀಡಿದಂತಾಗಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದ ಕಾರಣಕ್ಕೆ ಮುನಿಸುಕೊಂಡು ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಿದ್ದರು, ಜಗದೀಶ್ ಶೆಟ್ಟರ್ ಜೊತೆ ಜೊತೆಗೆ ಲಕ್ಷ್ಮಣ್ ಸವದಿ ಕೂಡ ಕಾಂಗ್ರೆಸ್ ಸೇರ್ಪಡೆಯಾಗಿದ್ದರು, ಇದು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಭಾರಿ ಪೆಟ್ಟು ಕೊಟ್ಟಿತ್ತು, ಇದರ ಪರಿಣಾಮ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಹೀನಾಯವಾಗಿ ಸೋಲನ್ನು ಅನುಭವಿಸಿತು. ಇದೆಲ್ಲದವನ್ನು ಮನಗಂಡ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರು ಲಿಂಗಾಯತ ನಾಯಕರನ್ನ ಮರಳಿ ಪಕ್ಷಕ್ಕೆ ಕರೆತರುವ ನಿಟ್ಟಿನಲ್ಲಿ ಶಪಥ ಮಾಡಿದ್ರು, ಅದರಂತೆ. ಇದೀಗ ಜಗದೀಶ್ ಶೆಟ್ಟರ್ ಅವರನ್ನ ಕರೆತರುವಲ್ಲಿ ರಾಜಾಹುಲಿ ಹಾಗೂ ಮರಿ ರಾಜಾಹುಲಿ ಸಕ್ಕಸ್ ಕಂಡಿದ್ದಾರೆ.
ಇನ್ನೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ತಕ್ಕ ಪಾಠ ಕಲಿಸುವ ನಿಟ್ಟಿನಲ್ಲಿ ಬಿ ಎಸ್ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ರಾಜಕೀಯ ತಂತ್ರಗಾರಿಕೆಯನ್ನ ತಂದೆ ಹಾಗೂ ಮಗ ಎಣೆದಿದ್ದು, ಪ್ರಮುಖವಾಗಿ ಲಿಂಗಾಯತ ನಾಯಕರನ್ನ ಕಾಂಗ್ರೆಸ್ ಪಕ್ಷದಿಂದ ಕರೆತರುವ ನಿಟ್ಟಿನಲ್ಲಿ ಹಲವು ಲೆಕ್ಕಾಚಾರಗಳನ್ನ ಹಾಕಿಕೊಂಡಿದ್ದು, ಜಗದೀಶ್ ಶೆಟ್ಟರ್ ಬೆನ್ನಲ್ಲೇ ಲಕ್ಷ್ಮಣ್ ಸವದಿ ಅವರಿಗೆ ಗಾಳ ಹಾಕಿದ್ದಾರೆ. ಲಕ್ಷ್ಮಣ್ ಸವದಿ ಅವರು ಸಹ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿ ಶಾಸಕರಾಗಿ ಗೆಲುವು ಸಾಧಿಸಿದ್ರು.
ಶಾಸಕರು ಹಾಗೂ ಹಿರಿಯ ಪ್ರಭಾವಿ ನಾಯಕರಾದ ಲಕ್ಷ್ಮಣ್ ಸವದಿ ಅವರನ್ನ ಕರೆತರುವ ಜವಾಬ್ದಾರಿಯನ್ನ ಈಗಾಗಲೇ ಬೆಳಗಾವಿ ಬಿಜೆಪಿ ನಾಯಕರಿಗೆ ಬಿಜೆಪಿ ಹೈಕಮಾಂಡ್ ನೀಡಿದ್ದು, ಈಗಾಗಲೇ ಎರಡು ಸುತ್ತಿನ ಮಾತುಕತೆ ನಡೆದಿದೆ. ಇತ್ತ ಬಿ ಎಸ್ ಯಡಿಯೂರಪ್ಪ ಅವರು ಸಹ ಲಕ್ಷ್ಮಣ್ ಸವದಿ ಹಾಗೂ ಜಗದೀಶ್ ಶೆಟ್ಟರ್ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವ ಆಫರ್ ನೀಡಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.

ಈಗಾಗಲೇ ಬಿಜೆಪಿ ಹಾಲಿ ಸಂಸದರ ಪೈಕಿ ಕೆಲವು ಸಂಸದರು ವೈಯಕ್ತಿಕವಾಗಿಯೇ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದು, ಕಾಂಗ್ರೆಸ್ ನಿಂದ ಮರಳಿ ಕರೆತಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನ ಹಾವೇರಿ ಲೋಕಸಭಾ ಕ್ಷೇತ್ರದಿಂದ ಹಾಗೂ ಲಕ್ಷ್ಮಣ್ ಸವದಿ ಅವರನ್ನ ಪಕ್ಷಕ್ಕೆ ಕರೆತರುವ ಮೂಲಕ ಬಾಗಲಕೋಟೆ ಕ್ಷೇತ್ರದಿಂದ ಕಣಕ್ಕಿಸುವ ಲೆಕ್ಕಾಚಾರವನ್ನ ಬಿಜೆಪಿ ಹಿರಿಯ ನಾಯಕರು ಹಾಕಿಕೊಂಡಿದ್ದಾರೆ ಎನ್ನಲಾಗಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications