ಹಾನಗಲ್ ನಲ್ಲಿ ಮನುಷ್ಯನ ದುರಾಸೆಗೆ ಕಾಡು ಪ್ರಾಣಿಗಳು ಬಲಿ
ಹಾವೇರಿ, ಅಕ್ಟೋಬರ್ 10: ಕಳೆದ ನಾಲ್ಕು ದಿನಗಳ ಹಿಂದೆ ದುಡ್ಡಿನ ಆಸೆಗಾಗಿ ಚಿರತೆಯ ರುಂಡ ಕತ್ತರಿ ಕಳ್ಳರು ಪರಾರಿಯಾಗಿರುವುದು ವರದಿಯಾಗಿತ್ತು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಪ್ರಾಣಿಯನ್ನು ಬೇಟೆಗಾರರು ಬೇಟೆ ಆಡಿದ್ದಾರೆ. ಅದೂ ಮಾಂಸಕ್ಕಾಗಿ!
ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಕೊಂಡೋಜಿ-ವಡ್ಡಗೇರಿ ಅರಣ್ಯ ಪ್ರದೇಶದಲ್ಲಿ ನಾಲ್ಕು ಜನ ಸೇರಿ ಜಿಂಕೆಯನ್ನು ಬೇಟೆಯಾಡಿದ್ದರು. ಖಚಿತ ಮಾಹಿತಿ ಮೇರೆಗೆ ಈ ಬೇಟೆಯ ಬೆನ್ನತ್ತಿದ ಅರಣ್ಯ ಅಧಿಕಾರಿಗಳು ಒಬ್ಬ ಬೇಟಗಾರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ದೇವೇಂದ್ರಪ್ಪ 35 ವರ್ಷ ವಯಸ್ಸು ಎಂದು ಗುರುತಿಸಲಾಗಿದೆ. ಇನ್ನುಳಿದ ಮೂವರು ಆರೋಪಿಗಳಾದ ಹನುಮಂತಪ್ಪ, ರವಿ ಮತ್ತು ಸುರೇಶ ಎಂಬುವರು ಪರಾರಿಯಾಗಿದ್ದಾರೆ.
ಜಿಂಕೆಯ ಕೊರಳಿಗೆ ಕೇಬಲ್ ವೈಯರ್ ನಿಂದ ಉರುಳು ಹಾಕಿ ದುಷ್ಕರ್ಮಿಗಳು ಜಿಂಕೆಯನ್ನು ಹತ್ಯೆ ಮಾಡಿದ್ದಾರೆ. ಜಿಂಕೆ ಹತ್ಯೆ ಮಾಡಿ ಚರ್ಮ ಸುಲಿಯುತ್ತಿದ್ದ ವೇಳೆ ಅರಣ್ಯ ಪ್ರದೇಶದಲ್ಲಿ ಆರಣ್ಯಾಧಿಕಾರಿಗಳ ಕೈಗೆ ಆರೋಪಿ ಸಿಕ್ಕಿ ಬಿದ್ದಿದ್ದಾನೆ.
ತಲೆಮರೆಸಿಕೊಂಡ ಮೂರು ಆರೋಪಿಗಳಿಗೆ ಅರಣ್ಯಾಧಿಕಾರಿಗಳು ಶೋಧ ಮುಂದುವರಿಸಿದ್ದಾರೆ. ಹಾನಗಲ್ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು ಈ ಪ್ರದೇಶದಲ್ಲಿ ನಿರಂತರವಾಗಿ ಮನುಷ್ಯನ ದುರಾಸೆಗಾಗಿ ಪ್ರಾಣಿಗಳ ಹತ್ಯೆ ನಡೆಯುತಿದೆ. ಇನ್ನಾದರೂ ಅಧಿಕಾರಿಗಳು ಮುಂಜಾಗ್ರತೆಯ ಕ್ರಮ ಕೈಗೊಳ್ಳಲಿ ಎನ್ನುವುದು ಇಲ್ಲಿನ ಜನರ ಆಗ್ರಹವಾಗಿದೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications