Leopard Spotted: ಹಾವೇರಿಯಲ್ಲಿ ಚಿರತೆ ಪ್ರತ್ಯಕ್ಷ! ಮನೆಯಿಂದ ಓಡಿದ ಗ್ರಾಮಸ್ಥರು...
ಹಾವೇರಿ, ಆಗಸ್ಟ್ 06: ಹಾವೇರಿ ಜಿಲ್ಲೆಯ ವಿವಿಧ ತಾಲೂಕುಗಳ ವ್ಯಾಪ್ತಿಯಲ್ಲಿ ಆಗಾಗ ಚಿರತೆಗಳು ಪ್ರತ್ಯಕ್ಷವಾಗುತ್ತಿವೆ. ಅರೆಮಲೆನಾಡು ಜಿಲ್ಲೆಯಾಗಿರುವ ಇಲ್ಲಿ ಕಳೆದ ಕೆಲವು ತಿಂಗಳುಗಳಿಂದ ಈ ಘಟನೆ ಮರುಕಳಿಸುತ್ತಿದೆ. ಇದೀಗ ಕಾಡಲ್ಲಿರಬೇಕಾದ ಚಿರತೆಯೊಂದು ಗ್ರಾಮದ ಮನೆಯೊಂದಕ್ಕೆ ನುಗ್ಗಿದ ಘಟನೆ ರಾಣೆಬೆನ್ನೂರು ತಾಲೂಕಿನ ನಾಡಿಗೇರ ಓಣಿಯಲ್ಲಿ ನಡೆದಿದೆ. ಓಣಿಯ ನಿವಾಸಿಗಳು ಭಯಭೀತರಾಗಿದ್ದಾರೆ.
ಇಂದು ಬುಧವಾರ ಬೆಳಗ್ಗೆ ಈ ಘಟನೆ ನಡೆದಿದೆ. ಕಾಡಿನಲ್ಲಿ, ಕಾಡಂಚಿನ ಪ್ರದೇಶಗಳಲ್ಲಿ, ಜಮೀನುಗಳಲ್ಲಿ ಕಂಡು ಬರುವ ಚಿರತೆಯು ನಗರದ ಮನೆಯೊಂದಲ್ಲಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ. ರಾಣೆಬೆನ್ನೂರಿನ ನಾಡಿಗೇರಿ ಓಣಿಯಲ್ಲಿರುವ ಪಿಟಿ ಕಾಕಿ ಅವರ ಮನೆಯಲ್ಲಿ ಮೆಟ್ಟಿಲುಗಳ ಮೇಲೆ ಚಿರತೆ ಕೂತಿದ್ದು ನೋಡಿ ಜನರ ಗಾಬರಿಗೊಂಡಿದ್ದಾರೆ. ಮನೆ ಮಾಲೀಕರು ಕೂಡಲೇ ಮನೆಯಿಂದ ಹೊರ ಓಡಿದ್ದಾರೆ. ಇಡೀ ಓಣಿಯ ಜನರು ಆತಂಕಗೊಂಡಿದ್ದು, ಕೂಡಲೇ ಚಿರತೆ ಹಿಡಿಯುವಂತೆ ಆಗ್ರಹಿಸಿ ಅರಣ್ಯ ಇಲಾಖೆಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ.

ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆ ಸಿಬ್ಬಂದಿ
ಜನರು ಗುಂಪು ಸೇರುತ್ತಿದ್ದಂತೆ ಅಲ್ಲಿಂದ ಪಕ್ಕದ ಕುರುಬಗೇರಿ ಓಣಿಗೆ ಈ ಚಿರತೆ ನುಗ್ಗಿದೆ. ಅಲ್ಲಿಯ ನಿವಾಸಿಗಳು ಜೀವ ಭಯದಿಂದ ಮನೆಯಿಂದ ಕಾಲ್ಕಿತ್ತಿದ್ದಾರೆ. ಇದನ್ನು ಕಂಡು ಸಾರ್ವಜನಿಕರು ಸರ್ಕಾರ, ಅರಣ್ಯ ಇಲಾಖೆ ಕೂಡಲೇ ಚಿರತೆ ಸೆರೆ ಹಿಡಿದು ಸಂಭವನೀಯ ಅನಾಹುತಗಳು, ಜೀವನ ಹಾನಿ ತಪ್ಪಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ. ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿದ್ದಾರೆ.
ಕೆಲವು ತಿಂಗಳ ಹಿಂದೆ ಬ್ಯಾಡಗಿ ತಾಲೂಕಿನ ಬಿಸಲಹಳ್ಳಿ ಬಳಿ ಗುರುವಾರ ಬೆಳಗ್ಗೆ ಚಿರತೆ ಪ್ರತ್ಯಕ್ಷವಾಗಿತ್ತು. ಬೆಳಗ್ಗೆ ಮೆಕ್ಕೆ ಜೋಳಕ್ಕೆ ನೀರು ಹಾಯಿಸಲು ಹೋದಾಗ ರೈತನಿಗೆ ಚಿರತೆ ಕಾಣಿಸಿದೆ. ಚಿರತೆ ಹಿಡಿಯಲು ಬೋನ್ ಅಳವಡಿಸುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಗ್ರಾಮಸ್ಥರದಲ್ಲಿ ಆತಂಕ ಮನೆ ಮಾಡಿತ್ತು. ಈ ಗ್ರಾಮದಲ್ಲಿ ಕಾಣಿಸಿಕೊಳ್ಳು ಮೊದಲು ಚಿರತೆ ಬೆಳಕೇರಿ, ಅಣೂರು, ಬನ್ನಿಹಟ್ಟಿ, ಗಡ್ಡದಹೊಸಳ್ಳಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಸಹ ಚಿರತೆ ಕಾಣಿಸಿಕೊಂಡಿತ್ತು. ಇದೇ ಗ್ರಾಮಗಳ ಸುತ್ತಮುತ್ತಲಿನ ಭಾಗಗಳಲ್ಲಿ ಚಿರತೆ ಓಡಾಡುತ್ತಿದೆ.
ಸದ್ಯ ರಾಣೆಬೆನ್ನೂರಲ್ಲಿ ಕಾಣಿಸಿಕೊಂಡಿದೆ. ಇದೇನು ಮೊದಲಲ್ಲ ಹಾವೇರಿ ಜಿಲ್ಲೆ ವ್ಯಾಪ್ತಿಯ ವಿವಿಧ ಭಾಗಗಳಲ್ಲಿ ಆಗಾಗ ಚಿರತೆ ಕಾಣುವುದು ಸಾಮಾನ್ಯ ಎಂಬಂತಾಗಿದೆ. ಈ ಬಗ್ಗೆ ಜಿಲ್ಲಾ ಅರಣ್ಯ ಇಲಾಖೆ ಅಧಿಕಾರಿಗಳು ಅಗತ್ಯ ಎಚ್ಚರಿಕೆ ವಹಿಸಬೇಕಿದೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications