Cm Siddaramaiah: ಹಾವೇರಿ ಜಿಲ್ಲಾಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಢೀರ್ ಭೇಟಿ! ಸ್ಥಳದಲ್ಲೇ ಅಧಿಕಾರಿ ಅಮಾನತು! ಆಗಿದ್ದೇನು?

ಹಾವೇರಿ, ಜುಲೈ 25: ಹಾವೇರಿಗೆ ಪ್ರವೇಶ ಪಡೆಯುತ್ತಿದ್ದಂತೆ ಜಿಲ್ಲಾ ಆಸ್ಪತ್ರೆಗೆ ದಿಡೀರ್ ಭೇಟಿ ನೀಡಿದ ಮುಖ್ಯಮಂತ್ರಿಗಳು ಮಳೆಗೆ ನೀರು ಸೋರುತ್ತಿದ್ದರೂ ಅದೇ ವಾರ್ಡ್ ನಲ್ಲಿ ತಾಯಿ ಮಕ್ಕಳಿಗೆ ಚಿಕಿತ್ಸೆ ಕೊಡುತ್ತಿದ್ದದ್ದನ್ನು ಮತ್ತು ಅಲ್ಲಿನ ಅವ್ಯವಸ್ಥೆಗಳನ್ನು ನೋಡಿ ಅಧಿಕಾರಿಗಳಿಗೆ ಹಿಗ್ಗಾಮುಗ್ಗಾ ಕ್ಲಾಸ್‌ ತೆಗೆದುಕೊಂಡರು.

ಜಿಲ್ಲಾಆಸ್ಪತ್ರೆಯ ಅವ್ಯವಸ್ಥೆಯನ್ನ ನೋಡಿ ಕಾರ್ಯಪಾಲಕ‌ ಅಭಿಯಂತರರಿಗೆ, ಜಿಲ್ಲಾ ಸರ್ಜನ್ ಅವರಿಗೆ ಮುಖ್ಯಮಂತ್ರಿಗಳು ತರಾಟೆಗೆ ತೆಗೆದುಕೊಂಡರು. ಬಳಿಕ ಕರ್ತವ್ಯಲೋಪಕ್ಕಾಗಿ ಆರೋಗ್ಯ ಇಲಾಖೆ ಕಾಮಗಾರಿ ವಿಭಾಗದ AEE ಮಂಜಪ್ಪ ಅವರನ್ನು ಅಮಾನತುಗೊಳಿಸಿ ಸ್ಥಳದಲ್ಲೇ ಆದೇಶ ಹೊರಡಿಸಿದರು.

haveri-progress-review-cm-siddaramaiah

ಹಾವೇರಿ ಜಿಲ್ಲೆ ಆರೋಗ್ಯ, ಆದಾಯ, ಮಾನವ ಅಭಿವೃದ್ಧಿ, ಶಿಕ್ಷಣ ಸೂಚ್ಯಂಕದಲ್ಲಿ ರಾಜ್ಯದ ಸರಾಸರಿಗಿಂತ ಅತ್ಯಂತ ಹಿಂದುಳಿದಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯು ಈ ಎಲ್ಲ ವಲಯಗಳ ಸೂಚ್ಯಂಕಗಳಲ್ಲಿ ಪ್ರಗತಿ ಕಾಣುವಂತೆ ಕೆಲಸ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾವೇರಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಹಾವೇರಿ ಜಿಲ್ಲೆಯು ಆರೋಗ್ಯ ಸೂಚ್ಯಂಕದಲ್ಲಿ 17ನೇ ಸ್ಥಾನ, ಆದಾಯ ಸೂಚ್ಯಂಕದಲ್ಲಿ 21ನೇ ಸ್ಥಾನ, ಮಾನವ ಅಭಿವೃದ್ದಿ ಸೂಚ್ಯಂಕದಲ್ಲಿ 27 ನೇ ಸ್ಥಾನ, ಶಿಕ್ಷಣ ಸೂಚ್ಯಂಕದಲ್ಲಿ 28ನೇ ಸ್ಥಾನದಲ್ಲಿದೆ. ರಾಜ್ಯದ ಸರಾಸರಿ ಆದಾಯಕ್ಕಿಂತ ಹಾವೇರಿ ಜಿಲ್ಲೆಯ ಸರಾಸರಿ ಆದಾಯ ಬಹಳ ಕಡಿಮೆ ಇದೆ. ಹೀಗಾಗಿ ಹಾವೇರಿ ಜಿಲ್ಲೆ ಅತ್ಯಂತ ಹಿಂದುಳಿದಿದೆ ಎಂಬುದನ್ನು ಗಮನಿಸಿದ ಮುಖ್ಯಮಂತ್ರಿಗಳು ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಜಿಲ್ಲೆಯನ್ನು ಪ್ರಗತಿ ಪಥದಲ್ಲಿ ಮುನ್ನಡೆಸುವಂತೆ ಸೂಚನೆ ನೀಡಿದರು.

ಈ ಜಿಲ್ಲೆ ಮುಖ್ಯವಾಗಿ ಕೃಷಿ ಮತ್ತು ಪಶುಸಂಗೋಪನೆಯನ್ನು ಅವಲಂಬಿಸಿದೆ. ಸಣ್ಣ ರೈತರೇ ಇಲ್ಲಿ ಹೆಚ್ಚಾಗಿದ್ದಾರೆ. ಉದ್ಯೋಗ ಸೃಷ್ಟಿಸದೆ ಬೇರೆ ದಾರಿ ಇಲ್ಲ. ಈ ಕುರಿತು ಕ್ರಿಯಾ ಯೋಜನೆ ಸಿದ್ದಪಡಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

haveri-progress-review-cm-siddaramaiah

ನಾಡಿನ ಜನತೆ ಬಹಳ ನಿರೀಕ್ಷೆಗಳನ್ನು ಇಟ್ಟುಕೊಂಡು ನಮ್ಮನ್ನು ಅಧಿಕಾರಕ್ಕೆ ತಂದಿದ್ದಾರೆ. ಈ ನಿರೀಕ್ಷೆಗಳಿಗೆ ತಕ್ಕಂತೆ ಅಧಿಕಾರಿಗಳು ಕ್ರಿಯಾಶಿಲವಾಗಿ ಕೆಲಸ ಮಾಡಬೇಕು. ಉದಾಸೀನ, ಬೇಜವಾಬ್ದಾರಿಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಸೂಕ್ತ ಕ್ರಮ ಎದುರಿಸಬೇಕಾಗುತ್ತದೆ. ಜನರ ನಿರೀಕ್ಷೆಗಳಿಗೆ ತಕ್ಕಂತೆ ಚುರುಕಾಗಿ, ದಕ್ಷವಾಗಿ ಕಾರ್ಯ ನಿರ್ವಹಿಸಿ ಎಂದು ಎಚ್ಚರಿಕೆ ನೀಡಿದರು.

ಕಳಪೆ ಬೀಜದ ದೂರು ವಿರುದ್ಧ ಕ್ರಮಕ್ಕೆ ಸೂಚನೆ

ಜಿಲ್ಲೆಯಲ್ಲಿ ಕೃಷಿ ಮತ್ತು ಕೃಷಿ ಪೂರಕ ಚಟುವಟಿಕೆಗಳಿಗೆ ಸಮಸ್ಯೆ ಆಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಔಷಧ, ಗೊಬ್ಬರದ ಜತೆಗೆ ಗುಣಮಟ್ಟದ ಬೀಜ ಸರಬರಾಜು ಅಗಬೇಕು. ಕಳಪೆ ಬೀಜದ ದೂರುಗಳು ಬಂದರೆ ಕೂಡಲೇ ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಬೇಕು. ರೈತರಿಂದ ದೂರು ಬಂದರೆ ನಿಮ್ಮನ್ನೇ ನೇರವಾಗಿ ಹೊಣೆ ಮಾಡಲಾಗುವುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಮತ್ತು ಉಪ ನಿರ್ದೇಶಕರಿಗೆ ಎಚ್ಚರಿಕೆ ನೀಡಿದರು.

ಡಿಸಿಸಿ ಬ್ಯಾಂಕ್‍ ಎಂಡಿ ಮತ್ತು ಸಹಕಾರ ಸಂಘಗಳ ಜಂಟಿ ನಿಬಂಧಕರು ಸಭೆಯಲ್ಲಿ ಹಾಜರಿಲ್ಲದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ಸಭೆಯ ಸೂಚನೆ ಕೊಟ್ಟರೂ ಅವರು ಗೈರಾಗಿರುವುದಕ್ಕೆ ಕಾರಣ ಕೇಳಿ ನೋಟಿಸ್‍ ನೀಡಿ, ಮೂರು ದಿನಗಳಲ್ಲಿ ಸಮರ್ಪಕ ಉತ್ತರ ಬರದಿದ್ದರೆ ಅಮಾನತು ಮಾಡಿ ಎಂದು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್ ಅವರಿಗೆ ಸಭೆಯಲ್ಲೇ ಸೂಚನೆ ನೀಡಿದರು.

ಆಯವ್ಯಯ ಜಾರಿ

ಆಗಸ್ಟ್‌ 1 ರಿಂದ ಬಜೆಟ್‍ ಜಾರಿಗೆ ಬರುತ್ತದೆ. ರೈತರ ಬಡ್ಡಿ ರಹಿತ ಸಾಲವನ್ನು 3 ರಿಂದ 5 ಲಕ್ಷಕ್ಕೆ ಏರಿಸಿರುವುದನ್ನು ರೈತರ ಗಮನಕ್ಕೆ ತರಬೇಕು. ರೈತರಿಗೆ ಸಮಸ್ಯೆ ಆಗದಂತೆ 5 ಲಕ್ಷದವರೆಗೂ ಬಡ್ಡಿ ರಹಿತ ಸಾಲ ನೀಡಬೇಕು. ವಾರ್ಷಿಕ ಶೇ.3 ಬಡ್ಡಿ ದರದಲ್ಲಿ 15 ಲಕ್ಷದವರೆಗೂ ಸಾಲಸೌಲಭ್ಯವನ್ನು ರೈತರಿಗೆ ಒದಗಿಸಿಕೊಡಬೇಕು ಎಂದು ಸೂಚಿಸಿದರು.

ಆಯವ್ಯಯದಲ್ಲಿ ಘೋಷಿಸಿದಂತೆ ಆಗಸ್ಟ್‌ 1 ರಿಂದ ಕೃಷಿಭಾಗ್ಯ ಯೋಜನೆಗೆ ಮರು ಚಾಲನೆ ನೀಡಬೇಕು. ಕರ್ನಾಟಕ ಮೌಲ್ಯಮಾಪನ ಪ್ರಾಧಿಕಾರ ನಡೆಸಿರುವ ಮೌಲ್ಯಮಾಪನದಲ್ಲಿ ಕೃಷಿಹೊಂಡಗಳಿಂದ ರೈತ ಸಮುದಾಯಕ್ಕೆ ಬಹಳ ಅನುಕೂಲವಾಗಿದೆ ಎನ್ನುವ ವರದಿ ಬಂದಿದೆ. ಆದ್ದರಿಂದ ಇದನ್ನು ಮತ್ತೆ ಚಾಲನೆ ನೀಡಬೇಕು ಹಾಗೂ ಕೃಷಿ ಯಂತ್ರಧಾರೆ ಯೋಜನೆ ಪರಿಣಾಮಕಾರಿ ಜಾರಿ ಆಗುವಂತೆ ನೋಡಿಕೊಳ್ಳಲು ಸೂಚನೆ ನೀಡಲಾಯಿತು.

ಗ್ಯಾರಂಟಿ ಯೋಜನೆಗಳು

ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಯಾವ ಪ್ರಮಾಣದಲ್ಲಿದೆ? ಅನುಷ್ಠಾನ ಮಾಡಲು ಏನಾದರೂ ತೊಂದರೆಗಳಿವೆಯೇ ಎಂದು ಆಹಾರ ಇಲಾಖೆ, ಸಾರಿಗೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ಚೆಸ್ಕಾಂ ಅಧಿಕಾರಿಗಳನ್ನು ಒಬ್ಬೊಬ್ಬರನ್ನಾಗಿ ವಿವರವಾಗಿ ಪ್ರಶ್ನಿಸಿ ಸಮರ್ಪಕ ಜಾರಿಗೆ ಸ್ಪಷ್ಟ ಸೂಚನೆ ನೀಡಿದರು.

ಜಿಲ್ಲಾ ಆಸ್ಪತ್ರೆ, ಶಿಗ್ಗಾಂವಿ ಬಸ್‍ ನಿಲ್ದಾಣದ ಅವ್ಯವಸ್ಥೆ, ಅಂಗನವಾಡಿಗಳಿಗೆ ಕಳಪೆ ಮೊಟ್ಟೆ ಪೂರೈಕೆ, ಸೈಬರ್‍ ಅಪರಾಧ ಪ್ರಕರಣಗಳ ಹೆಚ್ಚಳ, ಚರಂಡಿ ದುರವಸ್ಥೆ, ಕುಡಿಯುವ ನೀರಿನ ಸಮಸ್ಯೆ ಸೇರಿ ಮಾಧ್ಯಮಗಳಲ್ಲಿ ಬಂದ ವರದಿಗಳನ್ನು ಓದಿ ಸಂಬಂಧಪಟ್ಟ ಅಧಿಕಾರಿಗಳಿಗೆ ಆ ಕುರಿತಾಗಿ ಪ್ರಶ್ನಿಸಿ ಏನು ಕ್ರಮ ಕೈಗೊಂಡಿದ್ದೀರಿ ಎಂದು ಉತ್ತರ ಕೇಳಿದರು. ಸೂಕ್ತವಾಗಿ ಉತ್ತರಿಸದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ತಕ್ಷಣ ಸಮಸ್ಯೆಗಳನ್ನು ಬಗೆಹರಿಸುವಂತೆ ಸೂಚಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+