ಹಾವೇರಿ-ಶಿರಸಿ ರೈಲು ಮಾರ್ಗಕ್ಕೆ ಒಪ್ಪಿಗೆ ಸಿಗಲಿದೆಯೇ?
ಉತ್ತರ ಕನ್ನಡ, ಜನವರಿ 20 : 'ಹಾವೇರಿ-ಶಿರಸಿ ರೈಲು ಮಾರ್ಗ ನಿರ್ಮಾಣ ಮಾಡುವ ಕುರಿತು ಕೇಂದ್ರ ಸರ್ಕಾರದ ಜೊತೆ ಸಮಾಲೋಚನೆ ನಡೆಸುತ್ತೇನೆ' ಎಂದು ಎಂದು ಕೇಂದ್ರ ಸಚಿವ ಶ್ರೀಪಾದ ನಾಯ್ಕ ಹೇಳಿದ್ದಾರೆ. 2012ರಿಂದ ಹಾವೇರಿ-ಶಿರಸಿ ರೈಲು ಮಾರ್ಗ ನಿರ್ಮಿಸುವ ಪ್ರಸ್ತಾವನೆ ನೆನೆಗುದಿಗೆ ಬಿದ್ದಿದೆ.
ಶಿರಸಿಯಲ್ಲಿ ಮಂಗಳವಾರ ಮಾತನಾಡಿದ ಕೇಂದ್ರ ಆಯುಷ್ ಸಚಿವ ಶ್ರೀಪಾದ ನಾಯ್ಕ ಅವರು, 'ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ನಿರ್ಮಾಣಕ್ಕೆ ಪರಿಸರ ರಕ್ಷಣೆಯಂತಹ ಬಹು ದೊಡ್ಡ ಸಮಸ್ಯೆಗಳಿವೆ. ಆದರೆ, ಹಾವೇರಿ-ಶಿರಸಿ ರೈಲು ಮಾರ್ಗ ನಿರ್ಮಾಣ ಸುಲಭವಾಗಿದ್ದು, ಈ ಕುರಿತು ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲಾಗುತ್ತದೆ' ಎಂದರು. [ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗದ ಕನಸು ನನಸಾಗುವುದೇ?]

2012ರ ರೈಲ್ವೆ ಬಜೆಟ್ನಲ್ಲಿ ಹಾವೇರಿ-ಶಿರಸಿ ರೈಲು ಮಾರ್ಗದ ಸಮೀಕ್ಷೆ ನಡೆಸುವುದಾಗಿ ಘೋಷಣೆ ಮಾಡಲಾಗಿತ್ತು. ಜಿಲ್ಲೆಯ ಹುಬ್ಬಳ್ಳಿ-ಅಂಕೋಲಾ, ತಾಳಗುಪ್ಪ-ಹೊನ್ನಾವರ ರೈಲ್ವೆ ಯೋಜನೆಗಳಂತೆ ಈ ಯೋಜನೆಯೂ ನೆನೆಗುದಿಗೆ ಬಿದ್ದಿದೆ. [ಗದಗ-ಕೂಡಗಿ-ಹುಟಗಿ ಜೋಡಿ ಮಾರ್ಗಕ್ಕೆ ಒಪ್ಪಿಗೆ]
ಶಿರಸಿಗೆ ಆಯುರ್ವೇದ ಸಂಶೋಧನಾ ಕೇಂದ್ರ : 'ಪಶ್ಚಿಮ ಘಟ್ಟದ ವ್ಯಾಪ್ತಿಯಲ್ಲಿರುವ ಶಿರಸಿಯಲ್ಲಿ ಕೇಂದ್ರ ಸರ್ಕಾರದ ಆಯುರ್ವೇದ ಸಂಶೋಧನಾ ಕೇಂದ್ರ ಸ್ಥಾಪಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ' ಎಂದು ಕೇಂದ್ರ ಸಚಿವ ಶ್ರೀಪಾದ ನಾಯ್ಕ ಹೇಳಿದ್ದಾರೆ. [ಕುಡಚಿ-ಬಾಗಲಕೋಟೆ ರೈಲು ಮಾರ್ಗ 2019ಕ್ಕೆ ಪೂರ್ಣ]
ಮಂಗಳವಾರ ಶಿರಸಿಯಲ್ಲಿ ಮಾತನಾಡಿದ ಅವರು, 'ಆಯುರ್ವೇದ, ಯುನಾನಿ ಮತ್ತು ವನಸ್ಪತಿ ಸೇರಿದಂತೆ ದೇಶೀಯ ವೈದ್ಯ ಪದ್ಧತಿಗೆ ಮೂಲ ಸೌಲಭ್ಯ ಕಲ್ಪಿಸಿ ಅಭಿವೃದ್ಧಿಗೊಳಿಸಲಾಗುವುದು. ದೇಶದ ಪ್ರತಿ ಜಿಲ್ಲೆಯಲ್ಲೂ ಆಯುರ್ವೇದ ಆಸ್ಪತ್ರೆ ತೆರೆಯಲಾಗುವುದು' ಎಂದು ತಿಳಿಸಿದರು.
'ಗೋವಾ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ನಾನು, ಕರ್ನಾಟಕದ ಉತ್ತರ ಕನ್ನಡ ಮತ್ತು ಮಹಾರಾಷ್ಟ್ರದ ಲೋಕಸಭಾ ಕ್ಷೇತ್ರದ ಜನತೆಯನ್ನು ಸ್ವಾವಲಂಬನೆಗೆ ಒಯ್ಯುವ ನಿಟ್ಟಿನಲ್ಲಿ ಮಾಡಬೇಕಾದ ಕಾರ್ಯಗಳನ್ನು ಸಾರ್ವಜನಿಕರಿಂದ ಸಂಗ್ರಹಿಸಿ ಕೇಂದ್ರಕ್ಕೆ ವರದಿ ನೀಡುತ್ತೇನೆ' ಎಂದರು.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ












Click it and Unblock the Notifications