ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಮೋದಿ ಮೇಲಿನ ಗೌರವದಿಂದ ಕೃಷ್ಣ ಬಿಜೆಪಿ ಸೇರ್ಪಡೆ: ಯಡಿಯೂರಪ್ಪ
ಕಲಬುರಗಿ, ಫೆಬ್ರವರಿ 4: ಪ್ರಧಾನಿ ಮೋದಿಯವರ ಮೇಲಿನ ಗೌರವದಿಂದಾಗಿ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು, ಬಿಜೆಪಿ ಸೇರ್ಪಡೆಗೊಳ್ಳುತ್ತಿದ್ದಾರೆಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗಷ್ಟೇ ಕಾಂಗ್ರೆಸ್ಸನ್ನು ತೊರೆದಿರುವ ಕೃಷ್ಣ, ಪ್ರಧಾನಿ ಮೋದಿಯವರ ಬಗ್ಗೆ ಇರುವ ಗೌರವದಿಂದ ಅವರು ಬಿಜೆಪಿ ಸೇರುತ್ತಿದ್ದಾರೆ. ಅವರು ಬಂದರೆ ಬಿಜೆಪಿಯು ಮತ್ತಷ್ಟು ಶಕ್ತಿಶಾಲಿಯಾಗಲಿದೆ ಎಂದು ಆಶಿಸಿದ್ದಾರೆ.
ಗುರುವಾರವಷ್ಟೇ (ಫೆಬ್ರವರಿ 3) ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಅವರು, ಎಸ್.ಎಂ. ಕೃಷ್ಣ ಅವರು ಬಿಜೆಪಿ ಸೇರ್ಪಡೆಗೊಳ್ಳುತ್ತಾರೆಂದು ಹೇಳಿದ್ದರು.
Comments
English summary
State BJP president Yadiyurappa says, the key reason behind SM Krishna's join to BJP is the great respect ha has towards Prime Minister Narendra Modi.
Story first published: Saturday, February 4, 2017, 11:38 [IST]