ರಾಘವೇಶ್ವರ ಸ್ವಾಮೀಜಿ ಪೀಠತ್ಯಾಗಕ್ಕೆ ಹವ್ಯಕ ವೇದಿಕೆ ಪಟ್ಟು
ಬೆಂಗಳೂರು, ಅಕ್ಟೋಬರ್. 24 : ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಕೂಡಲೇ ಪೀಠತ್ಯಾಗ ಮಾಡಬೇಕು ಎಂದು ಸಮಾನ ಮನಸ್ಕ ಹವ್ಯಕ ವೇದಿಕೆ ಆಗ್ರಹಿಸಿದೆ. ಬೆಂಗಳೂರಲ್ಲಿ ಸುದ್ದಿಗೋಷ್ಠಿ ನಡೆಸಿದ ವೇದಿಕೆ ಪ್ರಮುಖರು ಮಠದ ಪರಂಪರೆ ಕಾಪಾಡಲು ಸ್ವಾಮೀಜಿ ಪೀಠ ತ್ಯಾಗ ಮಾಡಬೇಕು ಎಂದು ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಸಮಾನ ಮನಸ್ಕರ ಹವ್ಯಕ ವೇದಿಕೆ ಗೌರವಾಧ್ಯಕ್ಷ, ಮಾಜಿ ಸಚಿವ ಕೆ ಎಚ್ ಶ್ರೀನಿವಾಸ್, ಭಕ್ತರಿಗೆ ಮಠದ ಮೇಲಿನ ಗೌರವ ಕಡಿಮೆಯಾಗಲು ಇತ್ತೀಚಿನ ಕೆಲ ಬೆಳವಣಿಗೆಗಳು ಕಾರಣವಾಗಿವೆ. ಆರೋಪ ಹೊತ್ತಿರುವ ಸ್ವಾಮೀಜಿ ಪೀಠ ತ್ಯಾಗ ಮಾಡಿದರೆ ಉತ್ತಮ. ಅದರಿಂದ ಸಮುದಾಯ ಭದ್ರತೆ ಮತ್ತು ಗೌರವ ಕಾಪಾಡಿದಂತಾಗುತ್ತದೆ ಎಂದು ಹೇಳಿದರು.[ಬ್ರಹ್ಮಚರ್ಯ, ಸನ್ಯಾಸತ್ವದ ಮಹತ್ವ ಹರಿಯ ಬಿಟ್ಟವರಿಗೇನು ಗೊತ್ತು!]

ಗಾಯಕಿ ಪ್ರೇಮಲತಾ ದಿವಾಕರ್ ಮತ್ತು ಯಕ್ಷಗಾನ ಕಲಾವಿದೆಯೊಬ್ಬರು ಸ್ವಾಮೀಜಿ ತಮ್ಮ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದರು. ಅಲ್ಲದೇ ಸ್ವಾಮೀಜಿ ಮೇಲೆ ಆರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ. ಇದೆಲ್ಲರಿಂದ ಹೊರಬರುವವರೆಗೂ ಸ್ವಾಮೀಜಿ ಪೀಠ ತ್ಯಾಗ ಮಾಡಬೇಕು ಎಂದು ಶ್ರೀನಿವಾಸ್ ಆಗ್ರಹಿಸಿದ್ದಾರೆ.
ಧರ್ಮ ಬೋಧನೆ ಮಾಡಲು ರಾಮಚಂದ್ರಾಪುರ ಮಠ ಸ್ಥಾಪನೆಯಾಗಿದೆ. ಮಠಕ್ಕೆ 1,200 ವರ್ಷಗಳ ಇತಿಹಾಸ ಇದೆ. ಶುದ್ಧ ಚಾರಿತ್ರ್ಯ ಉಳ್ಳವರು ಪೀಠದಲ್ಲಿರಬೇಕು. ಕಳಂಕಿತರು ಪೀಠದಲ್ಲಿ ಮುಂದುವರೆಯಬಾರದು ಎಂದು ಹೇಳಿದರು.['169 ಬಾರಿ ರೇಪ್ ಆಗುವವರೆಗೆ ಯಾರಾದ್ರೂ ಸುಮ್ಮನಿರ್ತಾರಾ?']
ದಾಖಲಾಗಿರುವ ಪ್ರಕರಣಗಳಿಗೆ ಸ್ವಾಮೀಜಿ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದುಕೊಂಡಿದ್ದಾರೆ. ಎರಡು ಪ್ರಕರಣಗಳ ತನಿಖೆಯನ್ನು ಸಿಐಡಿ ನಡೆಸುತ್ತಿದ್ದು ಹಲವಾರು ದಾಖಲೆಗಳನ್ನು ಕಲೆಹಾಕಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications