ಅಕ್ರಮ- ಸಕ್ರಮ ಪ್ರಕ್ರಿಯೆಗೆ ಅಡ್ಡ ನಿಂತ ಹೈಕೋರ್ಟ್
ಬೆಂಗಳೂರು, ಮಾ.20: ಅಕ್ರಮ ಕಟ್ಟಡಗಳನ್ನು ಸಕ್ರಮಗೊಳಿಸಿಕೊಳ್ಳಲು ಮುಂದಾಗಿರುವ ಕರ್ನಾಟಕ ಸರ್ಕಾರಕ್ಕೆ ಮತ್ತೆ ಹಿನ್ನಡೆಯಾಗಿದೆ. ಅಕ್ರಮ ಸಕ್ರಮ ಅರ್ಜಿಯನ್ನು ಬೇಕಾದರೆ ಸ್ವೀಕರಿಸಿ ಆದರೆ, ಆನಂತರ ಯಾವುದೇ ಕ್ರಮ ಕೈಗೊಳ್ಳಬೇಡಿ ಎಂದು ಹೈಕೋರ್ಟ್ ನ್ಯಾಯಪೀಠ ಮಧ್ಯಂತರ ಆದೇಶ ನೀಡಿದೆ.
ಅಕ್ರಮ ಕಟ್ಟಡಗಳನ್ನು ಸಕ್ರಮಗೊಳಿಸಿಕೊಳ್ಳಲು ಒಂದು ವರ್ಷದ ತನಕ ಕಾಲಾವಕಾಶ ಕಲ್ಪಿಸಲಾಗುತ್ತದೆ. ಮಾರ್ಚ್ 23ರಿಂದ ಒಂದು ವರ್ಷದ ತನಕ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ. ದಂಡ ಶುಲ್ಕವನ್ನು ಪಾವತಿ ಮಾಡಿ ಅಕ್ರಮ ಕಟ್ಟಡಗಳನ್ನು ಸಕ್ರಮಗೊಳಿಸಿಕೊಳ್ಳಬಹುದಾಗಿದೆ ಎಂದು ಕರ್ನಾಟಕ ಸರ್ಕಾರ ಇತ್ತೀಚೆಗೆ ಪ್ರಕಟಣೆ ಹೊರಡಿಸಿತ್ತು.[ಅಕ್ರಮ-ಸಕ್ರಮ, ನಿಮಗಿದು ತಿಳಿದಿರಲಿ]
ಅಕ್ರಮ ಸಕ್ರಮಕ್ಕೆ ಸಲ್ಲಿಸುವ ಅರ್ಜಿಗಳು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳಲ್ಲಿ ಲಭ್ಯ. ಆನ್ಲೈನ್ ಮೂಲಕವೂ ಅರ್ಜಿಗಳನ್ನು ಪಡೆಯಬಹುದಾಗಿದೆ. ನಗರಾಭಿವೃದ್ಧಿ ಇಲಾಖೆ ವೆಬ್ಸೈಟ್ನಲ್ಲೂ ಅರ್ಜಿ ಲಭ್ಯವಿದೆ.

ಮುಖ್ಯ ನ್ಯಾ. ಡಿಎಚ್ ವಘೇಲಾ ಹಾಗೂ ಜಸ್ಟೀಸ್ ರಾಮ್ ಮೋಹನ್ ರೆಡ್ಡಿ ಅವರು ಅಕ್ರಮ ಸಕ್ರಮ ಯೋಜನೆ ಕುರಿತಂತೆ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕೈಗೆತ್ತಿಕೊಂಡು ಈ ರೀತಿ ಮಧ್ಯಂತರ ಆದೇಶ ನೀಡಿದ್ದಾರೆ. [ಅಕ್ರಮ-ಸಕ್ರಮ : ಇದು ಎಲ್ಲರ ಕಥೆ]
ಜನ್ ಫೋರಂ ಫಾರ್ ಮಂಗಳೂರು ಡೆವಲಪ್ಮಂಟ್ ಸಲ್ಲಿಸಿದ್ದ ಪಿಐಎಲ್ ಮುಂದಿನ ವಿಚಾರಣೆಯನ್ನು ಏ.15ಕ್ಕೆ ಮುಂದೂಡಲಾಗಿದೆ. ಮಾ.23ರಿಂದ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಬಹುದಾದರೂ ಹೈಕೋರ್ಟ್ನ ಮುಂದಿನ ಆದೇಶದ ವರೆಗೆ ಯೋಜನೆ ಸಂಬಂಧ ಯಾವುದೇ ಪ್ರಕಿಯೆ ನಡೆಸಲು ಸರ್ಕಾರಕ್ಕೆ ಸಾಧ್ಯವಿಲ್ಲ. [ಅಕ್ರಮ-ಸಕ್ರಮಕ್ಕೆ ಮಾ.23ರ ನಂತರ ಅರ್ಜಿ ಸಲ್ಲಿಸಿ]
ಎಷ್ಟು ಕಟ್ಟಡಗಳು ನಿಯಮಾವಳಿ ಉಲ್ಲಂಘಿಸಿ ನಿರ್ಮಾಣ ಮಾಡಲಾಗಿದೆ. ಈವರೆಗೂ ಅಕ್ರಮವಾಗಿ ನಿರ್ಮಿಸಿದ್ದ ಎಷ್ಟು ಕಟ್ಟಡಗಳನ್ನು ನೀವು ನೆಲಸಮ ಮಾಡಿದ್ದೀರಿ? ಅಕ್ರಮ ಸಕ್ರಮ ಜಾರಿಗೊಂಡರೆ ಎಷ್ಟು ಪ್ರಮಾಣದಲ್ಲಿ ಸಕ್ರಮವಾಗಬಹುದು? ಎಂಬೆಲ್ಲಾ ಪ್ರಶ್ನೆಗಳಿಗೆ ನಗರಾಭಿವೃದ್ಧಿ ಸಚಿವಾಲಯ, ಇಲಾಖೆ ಹಾಗೂ ಅಡ್ವೊಕೇಟ್ ಜನರಲ್ ಉತ್ತರಿಸಬೇಕಿದೆ.
ಒನ್ ಇಂಡಿಯಾ ಸುದ್ದಿ
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications