ಎಚ್.ಸಿ.ಬಾಲಕೃಷ್ಣ, ಚೆಲುವರಾಯಸ್ವಾಮಿ ಬಿಜೆಪಿಗೆ?
ಬೆಂಗಳೂರು, ಜುಲೈ 27 : ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗಳಿಸಲು ತಂತ್ರ ರೂಪಿಸಿರುವ ಬಿಜೆಪಿ ಮೂವರು ಒಕ್ಕಲಿಗ ನಾಯಕರನ್ನು ಪಕ್ಷಕ್ಕೆ ಸೆಳೆಯಲು ಮುಂದಾಗಿದೆ. ಇಬ್ಬರು ಮಾಜಿ ಶಾಸಕರು, ಒಬ್ಬರು ಹಾಲಿ ವಿಧಾನ ಪರಿಷತ್ ಸದಸ್ಯರು ಬಿಜೆಪಿ ಸೇರುವ ಸಾಧ್ಯತೆ ಇದೆ.
ಕರ್ನಾಟಕ ಬಿಜೆಪಿ ಮಂಡ್ಯ, ರಾಮನಗರ, ಮೈಸೂರು ಭಾಗದಲ್ಲಿ ಪಕ್ಷವನ್ನು ಸಂಘಟನೆ ಮಾಡಿ, ಈ ಭಾಗದ ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ರಣತಂತ್ರ ರೂಪಿಸುತ್ತಿದೆ. ಅದಕ್ಕಾಗಿ ಒಕ್ಕಲಿಗ ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಮುಂದಾಗಿದೆ.
ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಅವರಿಗೆ ಈ ಕುರಿತು ಸೂಚನೆ ನೀಡಲಾಗಿದೆ ಎಂಬುದು ಸದ್ಯ ಹರಡಿರುವ ಸುದ್ದಿ. ಮೂವರು ನಾಯಕರ ಜೊತೆ ಅಶೋಕ್ ಅವರು ಮಾತುಕತೆ ನಡೆಸಲಿದ್ದು, ಪಕ್ಷಕ್ಕೆ ಕರೆತರಲು ಪ್ರಯತ್ನ ನಡೆಸಲಿದ್ದಾರೆ.
ಕರ್ನಾಟಕ ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ 20+ ಸ್ಥಾನಗಳಲ್ಲಿ ಜಯಗಳಿಸುವ ಗುರಿ ಹೊಂದಿದೆ. ಆದರೆ, ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವಿದೆ. ಲೋಕಸಭೆ ಚುನಾವಣೆಯಲ್ಲಿಯೂ ಎರಡೂ ಪಕ್ಷಗಳು ಮೈತ್ರಿ ಮುಂದುವರೆಸುವ ಮಾತುಗಳನ್ನು ಆಡುತ್ತಿವೆ. ಆದ್ದರಿಂದ, ಬಿಜೆಪಿಗೆ ಪ್ರಬಲ ಪೈಪೋಟಿ ಎದುರಾಗುವ ನಿರೀಕ್ಷೆ ಇದೆ....

ಬಿಜೆಪಿ ಸೇರುವ ನಾಯಕರು ಯಾರು?
ಮಾಗಡಿ ಕ್ಷೇತ್ರದ ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ, ನಾಗಮಂಗಲ ಕ್ಷೇತ್ರದ ಮಾಜಿ ಶಾಸಕ ಎನ್.ಚಲುವರಾಯಸ್ವಾಮಿ ಮತ್ತು ಜೆಡಿಎಸ್ ನಾಯಕ, ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಅವರು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.
ಎಚ್.ಸಿ.ಬಾಲಕೃಷ್ಣ ಮತ್ತು ಎನ್.ಚಲುವರಾಯಸ್ವಾಮಿ 2018ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಅವರು ಜೆಡಿಎಸ್ ಪಕ್ಷದ ಚಟುವಟಿಕೆಗಳಿಂದ ದೂರವಾಗಿದ್ದಾರೆ.

ಆರ್.ಅಶೋಕ್ ಜೊತೆ ಮಾತುಕತೆ
ಮೂವರು ಒಕ್ಕಲಿಗ ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಬಿಜೆಪಿ ಬಯಸಿದೆ. ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಈ ಕುರಿತು ಮೂವರ ಜೊತೆ ಮಾತುಕತೆ ನಡೆಸಿದ್ದಾರೆ. ಲೋಕಸಭೆ ಚುನಾವಣೆ ವೇಳೆಗೆ ಎಲ್ಲಾ ನಾಯಕರು ಪಕ್ಷಕ್ಕೆ ಸೇರುವ ಸಾಧ್ಯತೆ ಇದೆ.
ಮಾಗಡಿ ಕ್ಷೇತ್ರದ ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ, ನಾಗಮಂಗಲ ಕ್ಷೇತ್ರದ ಮಾಜಿ ಶಾಸಕ ಎನ್.ಚಲುವರಾಯಸ್ವಾಮಿ ಬಿಜೆಪಿ ಸೇರಿದರೆ ರಾಮನಗರ ಮತ್ತು ಮಂಡ್ಯ ಭಾಗದಲ್ಲಿ ಪಕ್ಷಕ್ಕೆ ಹೆಚ್ಚಿನ ಬಲ ಸಿಗಲಿದೆ.

ಎಚ್.ಸಿ.ಬಾಲಕೃಷ್ಣ ಬಿಜೆಪಿಗೆ?
ಮಾಗಡಿ ಕ್ಷೇತ್ರದ ಮಾಜಿ ಶಾಸಕ ಎಚ್.ಸಿ.ಬಾಲಕೃಷ ಬಿಜೆಪಿ ಸೇರುವ ಸಾಧ್ಯತೆ ಇದೆ. 2018ರ ಚುನಾವಣೆಯಲ್ಲಿ ಮಾಗಡಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. 68067 ಮತಗಳನ್ನು ಪಡೆದು, ಜೆಡಿಎಸ್ನ ಎ.ಮಂಜುನಾಥ್ ವಿರುದ್ಧ ಸೋಲು ಅನುಭವಿಸಿದ್ದರು.
ಜೆಡಿಎಸ್ ಪಕ್ಷದಲ್ಲಿದ್ದ ಎಚ್.ಸಿ.ಬಾಲಕೃಷ್ಣ ಅವರು ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿ ಪಕ್ಷದಿಂದ ಅಮಾನತುಗೊಂಡಿದ್ದರು. ಬಳಿಕ ಕಾಂಗ್ರೆಸ್ ಸೇರಿದ್ದರು.

ಎನ್. ಚೆಲುವರಾಯಸ್ವಾಮಿ
ನಾಗಮಂಗಲ ಕ್ಷೇತ್ರದ ಮಾಜಿ ಶಾಸಕ ಎನ್.ಚಲುವರಾಯಸ್ವಾಮಿ ಅವರು ಸಹ ಬಿಜೆಪಿ ಸೇರುವ ಸಾಧ್ಯತೆ ಇದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಅವರು ನಾಗಮಂಗಲ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ 64,729 ಮತಗಳನ್ನು ಪಡೆದು ಸೋಲು ಅನುಭವಿಸಿದ್ದರು.
ಜೆಡಿಎಸ್ ಪಕ್ಷದಲ್ಲಿದ್ದ ಚಲುವರಾಯಸ್ವಾಮಿ ಅವರು ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿ ಪಕ್ಷದಿಂದ ಅಮಾನತುಗೊಂಡಿದ್ದರು. ಬಳಿಕ ಕಾಂಗ್ರೆಸ್ ಸೇರಿದ್ದರು.

ಪುಟ್ಟಣ್ಣ ಬಿಜೆಪಿಗೆ?
ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಅವರು ಸಹ ಬಿಜೆಪಿ ಸೇರುವ ಸಾಧ್ಯತೆ ಇದೆ. ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಮೂರು ಬಾರಿ ಪುಟ್ಟಣ್ಣ ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಪಕ್ಷದ ಚಟುವಟಿಕೆಗಳಿಂದ ಬಹುತೇಕ ದೂರ ಉಳಿದಿದ್ದಾರೆ.
ಪುಟ್ಟಣ್ಣ ಅವರು ವಿಧಾನಸಭೆ ಚುನಾವಣೆ ಸಮಯದಲ್ಲಿಯೇ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಯಶವಂತಪುರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಚರ್ಚೆ ಆರಂಭವಾಗಿತ್ತು. ಆದರೆ, ಅವರು ಆಗ ಪಕ್ಷ ಸೇರಿರಲಿಲ್ಲ.
-
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications