ಮಾಜಿ ಸೈನಿಕನಿಗೆ ಭೂಮಿ ವಾಪಸ್ ನೀಡದ ಪ್ರಕರಣ; ಸರ್ಕಾರಕ್ಕೆ ಹೈಕೋರ್ಟ್ ತರಾಟೆ
ಬೆಂಗಳೂರು, ನ.18: ನಿವೃತ್ತ ಸೈನಿಕನಿಗೆ ತನ್ನ ಮಾಲೀಕತ್ವದ ಜಮೀನು ವಾಪಸ್ ಕೊಡಿಸಲು ಕ್ರಮ ಕೈಗೊಳ್ಳದ ಸರ್ಕಾರವನ್ನು ಹೈಕೋರ್ಟ್ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ.
ಅಲ್ಲದೆ, ಇಂತಹ ಪ್ರಕರಣಗಳಲ್ಲಿ ಜಮೀನನ್ನು ಉಳುವವರಿಂದ ವಾಪಸು ಕೊಡಿಸಲು ಸರ್ಕಾರ ತನ್ನ ದೈತ್ಯ ಶಕ್ತಿ ಉಪಯೋಗಿಸಬೇಕು ಮತ್ತು ಇದು ಸರ್ಕಾರದ ಆದ್ಯ ಜವಾಬ್ದಾರಿಯಾಗಿರುತ್ತದೆ ಎಂದು ಹೈಕೋರ್ಟ್ ತೀರ್ಪು ನೀಡಿದೆ.
ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶ ನೀಡಿದೆ.
ಅರ್ಜಿ ವಜಾಗೊಳಿಸಿರುವ ನ್ಯಾಯಪೀಠ, 'ಹಿಡುವಳಿ ಕಾಯ್ದೆ ಅಡಿಯಲ್ಲಿ ಉಳುವವನೇ ಒಡೆಯ ತತ್ವವು ಸೈನಿಕರಿಗೆ ಅನ್ವಯ ಆಗುವುದಿಲ್ಲ. ತಮ್ಮ ಜಮೀನು ಲಾವಣಿದಾರರ ವಶಕ್ಕೆ ಹೋಗಿದ್ದರೆ ಸೇವೆಯಿಂದ ಹಿಂದಿರುಗಿ ಅಥವಾ ನಿವೃತ್ತಿ ಪಡೆದು ಬಂದ ನಂತರದ ಒಂದು ವರ್ಷದ ಅವಧಿಯಲ್ಲಿ ವಾಪಸು ಪಡೆಯಲು ಮನವಿ ಸಲ್ಲಿಸಬೇಕು. ಅಂತಹವರಿಗೆ ಕಾಯ್ದೆಯ ಗುತ್ತಿಗೆ ಕರಾರುಗಳಿಂದ ರಿಯಾಯ್ತಿ ನೀಡಲಾಗಿದೆ' ಎಂದು ಹೇಳಿದೆ.
'ಕರ್ನಾಟಕ ಭೂ ಸುಧಾರಣಾ ಕಾಯ್ದೆ 961ರ 15 (5)ರ ಅನುಸಾರ ಸೈನಿಕರು ನಿವೃತ್ತಿ ಆದ ಮೇಲೆ ತಮ್ಮ ಮಾಲೀಕತ್ವದ ಜಮೀನನ್ನು ಪುನಃ ಪಡೆಯಬಹುದು. ಇಲ್ಲವಾದಲ್ಲಿ ಸೈನಿಕರು ಮಾನಸಿಕವಾಗಿ ಕುಗ್ಗಿ ಹೋಗುತ್ತಾರೆ. ಸರ್ಕಾರ ಸುಳ್ಳು ಹೇಳುತ್ತಿದೆ ಎಂದು ಅವರು ಭಾವಿಸಿದ್ದೇ ಆದಲ್ಲಿ, ತಾವು ಹೇಗೆ ದೇಶ ರಕ್ಷಣೆ ಮಾಡಬೇಕು ಎಂಬ ಜಿಜ್ಞಾಸೆಗೆ ಒಳಗಾಗುತ್ತಾರೆ. ಹೀಗಾಗಿ, ಸರ್ಕಾರಗಳು ಸೈನಿಕರ ಬಗ್ಗೆ ಅತ್ಯಂತ ಮುತುವರ್ಜಿಯಿಂದ ವರ್ತಿಸಬೇಕು' ಎಂದು ನ್ಯಾಯಪೀಠ ಹೇಳಿದೆ.

ಅಲ್ಲದೆ, ಆರು ವಾರಗಳಲ್ಲಿ ಸರ್ಕಾರ ನಿವೃತ್ತ ಸೈನಿಕನಿಗೆ ಭೂಮಿ ಕೊಡಿಸಲು ಕ್ರಮ ಕೈಗೊಳ್ಳಬೇಕು ಎದು ನ್ಯಾಯಾಲಯ ಆದೇಶಿಸಿದೆ.
'ನಮ್ಮ ದೇಶದ ಗಡಿಗಳನ್ನು ರಕ್ಷಿಸಲು ತಮ್ಮ ಪ್ರಾಣವನ್ನು ಪಣಕ್ಕಿಡುವ ಸೈನಿಕರನ್ನು ಸಮಾಜದ ಒಂದು ವಿಭಾಗವು ಎಷ್ಟೊಂದು ಕಳಪೆಯಾಗಿ ನಡೆಸಿಕೊಳ್ಳಬಹುದು ಎಂಬುದಕ್ಕೆ ಇದೊಂದು ಶ್ರೇಷ್ಠ ಉದಾಹರಣೆಯಾಗಿದೆ' ಎಂದು ಕಳವಳ ವ್ಯಕ್ತಪಡಿಸಿರುವ ನ್ಯಾಯಪೀಠ, 'ಲೆಫ್ಟಿನೆಂಟ್ ಕರ್ನಲ್ ಅವರಿಗೆ ಎಂಟು ವಾರಗಳಲ್ಲಿ ಜಮೀನು ಸ್ವಾಧೀನಕ್ಕೆ ನೀಡಬೇಕು. ತಪ್ಪಿದಲ್ಲಿ ಸಂಬಂಧಿಸಿದ ಅಧಿಕಾರಿಗಳು ಅರ್ಜಿದಾರರನ್ನು ವಿವಾದಿತ ಸ್ಥಳದಿಂದ ಒಕ್ಕಲೆಬ್ಬಿಸಿ ಸ್ವಾಧೀನಕ್ಕೆ ನೀಡಬೇಕು' ಎಂದು ಖಡಕ್ ಆದೇಶ ನೀಡಿದೆ.
ಪ್ರಕರಣದ ಹಿನ್ನೆಲೆ: ಲೆಫ್ಟಿನೆಂಟ್ ಕರ್ನಲ್ ಗೋಪಾಲಕೃಷ್ಣ ಭಟ್ಟ ಅವರು 1993ರಲ್ಲಿ ರಕ್ಷಣಾ ಸೇವೆಯಿಂದ ನಿವೃತ್ತಿ ಹೊಂದಿದ್ದರು. ಕರ್ನಾಟಕ ಭೂ ಸುಧಾರಣಾ ಕಾಯ್ದೆ 1961ರ ಕಲಂ 15 (4)ರ ಅಡಿಯಲ್ಲಿ ತಮ್ಮ 4 ಎಕರೆಗೂ ಅಧಿಕ ಜಮೀನನ್ನು ವಾಪಸು ಕೊಡಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು.
ತಹಶೀಲ್ದಾರ್ ಅವರು, ಅರ್ಜಿದಾರರಿಗೆ ಜಮೀನು ಸ್ವಾಧೀನಕ್ಕೆ ಬಿಟ್ಟುಕೊಡುವಂತೆ ನೀಡಿದ್ದರೂ ನಫೀಜಾ ಮತ್ತಿತರ ಅರ್ಜಿದಾರರು ನೋಟಿಸ್ ಅನ್ನು ಮಾನ್ಯ ಮಾಡಿರಲಿಲ್ಲ. ಈ ಜಮೀನನ್ನು ಬಿಟ್ಟುಕೊಡುವಂತೆ ತಹಶಿಲ್ದಾರ್ ಲಾವಣಿ ಮಾಡುತ್ತಿದ್ದ ನಫೀಜಾ ಮತ್ತಿತರರಿಗೆ ನಿರ್ದೇಶಿಸಿದ್ದರು. ಆದರೆ, ತಹಶೀಲ್ದಾರ್ ಆದೇಶವನ್ನು ಪ್ರಶ್ನಿಸಿ ನಫೀಜಾ ಸೇರಿದಂತೆ ಒಟ್ಟು 23 ಜನರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications