ಜೈಲು ಶಿಕ್ಷೆ ರದ್ದು: ಕೆಎಸ್ಆರ್ಟಿಸಿ ಚಾಲಕನ ನೆರವಿಗೆ ಧಾವಿಸಿದ ಹೈಕೋರ್ಟ್
ಬೆಂಗಳೂರು, ಜ.30: ಸಣ್ಣ ರಸ್ತೆ ಅಪಘಾತ ಮಾಡಿದ್ದಕ್ಕಾಗಿ ಎರಡು ತಿಂಗಳು ಜೈಲು ಶಿಕ್ಷಗೆ ಒಳಗಾಗಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಬಸ್ ಚಾಲಕನ ನೆರವಿಗೆ ಹೈಕೋರ್ಟ್ ಧಾವಿಸಿದೆ.
ಅಲ್ಲದೆ, ಆತನಿಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ವಿಧಿಸಿದ್ದ 2 ತಿಂಗಳ ಜೈಲು ಶಿಕ್ಷೆಯನ್ನು ರದ್ದುಗೊಳಿಸಿದೆ. ಜೊತೆಗೆ ಆ ಚಾಲಕನಿಗೆ ಶಿಕ್ಷೆಯಾಗಿದ್ದ ವಿಚಾರ ಯಾವುದೇ ರೀತಿಯಲ್ಲೂ ಆತನ ವೃತ್ತಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು, ಆತನ ಸೇವಾ ಪುಸ್ತಕದಲ್ಲಿ ರಿಮಾರ್ಕ್ ಎಂದು ಪರಿಗಣಿಸಬಾರದೆಂದು ಸಾರಿಗೆ ಸಂಸ್ಥೆಗೆ ನಿರ್ದೇಶನ ನೀಡಿದೆ.
ಶಿವಮೊಗ್ಗ ಜಿಲ್ಲೆಯ ವಾಸಿ ಕೆಎಸ್ಆರ್ಟಿಸಿ ಚಾಲಕ ಎಚ್.ದೇವೇಂದ್ರಪ್ಪ ಸಲ್ಲಿಸಿದ್ದ ಕ್ರಿಮಿನಲ್ ರಿವಿಷನ್ ಅರ್ಜಿಯನ್ನು ಆಲಿಸಿದ ನ್ಯಾ. ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯಪೀಠ ಈ ಆದೇಶ ಮಾಡಿದೆ.

Recommended Video
ಸಾಕ್ಷ್ಯ ಹಾಗೂ ಪ್ರಕರಣದ ವಿವರಗಳನ್ನು ಗಮನಿಸಿದ ನ್ಯಾಯಪೀಠ, ಇದೊಂದು ಸಣ್ಣ ಅಪಘಾತ, ಯಾರಿಗೂ ಗಾಯ ಅಥವಾ ಹಾನಿಯಾಗಿಲ್ಲ. ಘಾಟ್ ರಸ್ತೆಯಲ್ಲಿ ಕಡಿದಾದ ತಿರುವಿನಲ್ಲಿ ಚಾಲಕ ಸರಿಯಾಗಿ ಚಾಲನೆ ಮಾಡುತ್ತಿದ್ದರೂ ಸಹ ಖಾಸಗಿ ಬಸ್ಗೆ ಢಿಕ್ಕಿಯಾಗಿದೆ. ಇದರಲ್ಲಿ ಚಾಲಕನ ನಿರ್ಲಕ್ಷ್ಯ ಕಾಣುತ್ತಿಲ್ಲ ಎಂದು ನ್ಯಾಯಪೀಠ, 2 ತಿಂಗಳ ಜೈಲು ಶಿಕ್ಷೆ ರದ್ದು ಮಾಡಿ ಕೇವಲ 1500 ರೂ. ದಂಡ ಪಾವತಿಸಲು ಆದೇಶಿಸಿತು.
ಪ್ರಕರಣದ ಹಿನ್ನೆಲೆ: 2014ರ ಆಗಸ್ಟ್ನಲ್ಲಿ ಚಾರ್ಮಾಡಿ ಘಾಟ್ನ ಕಿರಿದಾದ ರಸ್ತೆಯಲ್ಲಿ ಚಾಲಕ ದೇವೇಂದ್ರಪ್ಪ ಚಾಲನೆ ಮಾಡುತ್ತಿದ್ದ ಬಸ್ ಖಾಸಗಿ ಬಸ್ಗೆ ಢಿಕ್ಕಿ ಹೊಡೆದು ಸಣ್ಣ ಅಪಘಾತ ಸಂಭವಿಸಿತ್ತು. ಆ ಪ್ರಕರಣದಲ್ಲಿ ವಿಚಾರಣೆ ನಡೆಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮ್ಯಾಜಿಸ್ಟ್ರೇಟ್ ಕೋರ್ಟ್ 2019ರಲ್ಲಿ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 279 (ಸಾರ್ವಜನಿಕ ರಸ್ತೆಯಲ್ಲಿ ನಿರ್ಲಕ್ಷ್ಯದ ಚಾಲನೆ) ಮತ್ತು ಸೆಕ್ಷನ್ 337 (ಇತರೆಯವರ ವೈಯಕ್ತಿಕ ಸುರಕ್ಷತೆಗೆ ಘಾಸಿಗೊಳಿಸಿದ್ದು) ಗಳಡಿ 2 ತಿಂಗಳು ಜೈಲು ಶಿಕ್ಷೆ ಮತ್ತು 1500 ರೂ. ದಂಡ ವಿಧಿಸಿತ್ತು. ಜಿಲ್ಲಾ ಸೆಷನ್ಸ್ ನ್ಯಾಯಾಲಯ ಕೂಡ 2021ರಲ್ಲಿ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶವನ್ನು ಎತ್ತಿಹಿಡಿದಿತ್ತು. ಹಾಗಾಗಿ ಆ ಆದೇಶ ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications