ಕೆಜಿಎಫ್-2ನಲ್ಲಿ ಧೂಮಪಾನ ವೈಭವೀಕರಣ ಪ್ರಶ್ನಿಸಿದ್ದ ಪಿಐಎಲ್ ವಜಾ
ಬೆಂಗಳೂರು ಮೇ 25: ಭಾರತೀಯ ಚಲನಚಿತ್ರ ರಂಗದಲ್ಲಿಯೇ ದೊಡ್ಡ ಇತಿಹಾಸ ನಿರ್ಮಿಸಿರುವ ಕೆಜಿಎಫ್-2 ಚಲನಚಿತ್ರದಲ್ಲಿ ಧೂಮಪಾನವನ್ನು ವೈಭೀಕರಿಸಲಾಗಿದೆ ಎಂದು ಸಲ್ಲಿಸಿದ್ದ ಪಿಐಎಲ್ ಅನ್ನು ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ಕ್ಯಾನ್ಸರ್ ರೋಗಿಗಳ ನೆರವಿನ ಸಂಘ ಮತ್ತು ವರ್ವ್ ಫೌಂಡೇಷನ್ ಟ್ರಸ್ಟ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾ. ಅಶೋಕ್ ಎಸ್ ಕಿಣಗಿ ಅವರಿದ್ದ ವಿಭಾಗೀಯಪೀಠದ ಮುಂದೆ ವಿಚಾರಣೆಗೆ ಬಂದಿತು.
ಆಗ ಅರ್ಜಿದಾರರ ವಾದ ಮಂಡಿಸಿದ ನ್ಯಾಯವಾದಿ ರವಿಶಂಕರ್, ಕೆಜಿಎಫ್-2 ಚಲನಚಿತ್ರದ ಬಿಡುಗಡೆ ಪ್ರಶ್ನಿಸಿಸಲಾಗಿದೆ. ಚಿತ್ರದಲ್ಲಿ ಚಿತ್ರದಲ್ಲಿ ಧೂಮಪಾನವನ್ನು ವಿಜೃಂಭಿಸಲಾಗಿದೆ. ಅತಿಯಾದ ಧೂಪಮಾನದಿಂದ ಆಗುವ ಪರಿಣಾಮಗಳ ಬಗ್ಗೆ ಚಿತ್ರದಲ್ಲಿ ಕಿಂಚಿತ್ತೂ ಸಾಮಾಜಿಕ ಕಾಳಜಿ ತೋರ್ಪಡಿಸಿಲ್ಲ ಎಂದರು.

ಅಲ್ಲದೆ, ಕೆಜಿಎಫ್ 2 ಚಿತ್ರ ಬಿಡುಗಡೆಗೆ ತಡೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ ನಾನಾ ಕಾರಣಗಳಿಂದಾಗಿ ಅದರ ವಿಚಾರಣೆ ತಡವಾಗಿದೆ, ಹಾಗಾಗಿ ಚಿತ್ರದ ನಿರ್ಮಾಪಕರಿಗೆ ನಿರ್ದೇಶನ ನೀಡಬೇಕು ಎಂದು ಕೋರಿದರು.
ಅದಕ್ಕೆ ನ್ಯಾಯಪೀಠ, ಕೆಜಿಎಫ್-2 ಚಲನಚಿತ್ರ ಈಗಾಗಲೇ ಬಿಡುಗಡೆಯಾಗಿ ಎಲ್ಲೆಡೆ ಪ್ರದರ್ಶನವಾಗುತ್ತಿದೆ, ಈ ಹಂತದಲ್ಲಿ ಯಾವುದೇ ಆದೇಶ ನೀಡಲಾಗದು, ಅರ್ಜಿ ಮಾನ್ಯ ಮಾಡಲಾಗದು ಎಂದು ಹೇಳಿ ಪಿಐಎಲ್ ಅನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿತು.

ಅರ್ಜಿಯಲ್ಲಿ ಕೇಂದ್ರೀಯ ಸೆನ್ಸಾರ್ ಮಂಡಳಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಮೆಸರ್ಸ್ ಹೊಂಬಾಳೆ ಫಿಲಂಸ್, ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್, ನವೀನ್ ಕುಮಾರ್ ಗೌಡ ಅಲಿಯಾಸ್ ಯಶ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯನ್ನು ಪ್ರತಿವಾದಿಯನ್ನಾಗಿ ಮಾಡಲಾಗಿತ್ತು.
2022ರ ಮಾ.11ಕ್ಕೆ ಅಂದರೆ ಚಿತ್ರ ಬಿಡುಗಡೆ ಮುನ್ನವೇ ಪಿಐಎಲ್ ಹೂಡಲಾಗಿತ್ತು. ಆದರೆ ಅಫೀಸ್ ಆಕ್ಷೇಪಣೆಗಳನ್ನು ಇತ್ಯರ್ಥ ಮಾಡದಿರುವುದು ಮತ್ತಿತರ ಕಾರಣಗಳಿಂದಾಗಿ ಆ ಅರ್ಜಿ ತಡವಾಗಿ ವಿಭಾಗೀಯಪೀಠದ ಮುಂದೆ ವಿಚಾರಣೆಗೆ ಬಂದಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications