ಮೈತ್ರಿಯಾ ಕೇಸ್: ಕಾರ್ತಿಕ್ ಗೌಡ ಮದುವೆಗೆ ಅಡ್ಡಿ ಆತಂಕವಿಲ್ಲ!
ಬೆಂಗಳೂರು, ಸೆ.30: ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದ ಗೌಡರ ಪುತ್ರ ಕಾರ್ತಿಕ್ ಗೌಡ ಅವರ ಮದುವೆಗೆ ಇದ್ದ ಅಡ್ಡಿ ಆತಂಕ ಸದ್ಯಕ್ಕೆ ದೂರಾಗಿದೆ. ಮದುವೆ ಡೇಟ್ ಫಿಕ್ಸ್ ಆಗಿದ್ದರೂ ಮೈತ್ರಿಯಾ ಗೌಡ ಅವರು ಕೋರ್ಟಿಗೆ ಸಲ್ಲಿಸಿದ್ದ ಅರ್ಜಿಯ ಭೀತಿ ಕಾರ್ತಿಕ್ ಗಿತ್ತು. ಅದರೆ, ಬುಧವಾರ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕ ಸದಸ್ಯ ಪೀಠ ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನೀಡಿದೆ.
ಕಾರ್ತಿಕ್ ಗೌಡ ಅವರ ವಿರುದ್ಧ ನಟಿ ಮೈತ್ರಿಯಾ ಗೌಡ ಅವರು ಅತ್ಯಾಚಾರ, ವಂಚನೆ ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣದ ರದ್ದು ಮಾಡುವಂತೆ ಕಾರ್ತಿಕ್ ಅವರು ಸಲ್ಲಿಸಿದ್ದ ಅರ್ಜಿ ವಜಾಗೊಂಡಿತ್ತು. ಹೀಗಾಗಿ ಮೈತ್ರಿಯಾ ಪ್ರೇಮ ಪ್ರಸಂಗ ಪ್ರಕರಣದಲ್ಲಿ ಕಾರ್ತಿಕ್ ಗೌಡ ಮತ್ತೊಮ್ಮೆ ಪೊಲೀಸರ ತನಿಖೆಗೆ ಲಭ್ಯವಾಗಿದ್ದು, ತನಿಖಾಧಿಕಾರಿಗಳು ಅಗತ್ಯ ಬಿದ್ದಾಗ ವಿಚಾರಣೆಗಾಗಿ ಸಮನ್ಸ್ ಜಾರಿಗೊಳಿಸಬಹುದಾಗಿದೆ. [ಗೌಡರ ಪದಚ್ಯುತಿಗೊಳಿಸಲು ರಾಷ್ಟ್ರಪತಿಗೆ ಮೈತ್ರಿಯಾ ಪತ್ರ]
ಮಡಿಕೇರಿಯ ಉದ್ಯಮಿ ನಾಣಯ್ಯ ಅವರ ಪುತ್ರಿಯನ್ನು ಅಕ್ಟೋಬರ್ 29ರಂದು ವರಿಸಲು ಸಿದ್ಧವಾಗುತ್ತಿರುವ ಕಾರ್ತಿಕ್ ಅವರು ಈ ಕೇಸಿಗೆ ಸಂಬಂಧಿಸಿದಂತೆ ದೋಷಾರೋಪಣ ಪಟ್ಟಿ ಸಲ್ಲಿಸುವುದಕ್ಕೆ ತಡೆ ನೀಡುವಂತೆ ಕೋರ್ಟಿಗೆ ಸಲ್ಲಿಸಿದ್ದರು. ಜೊತೆಗೆ ಚಾರ್ಜ್ ಶೀಟ್ ಹಾಕದಂತೆ ಆದೇಶಿಸಲು ಮನವಿ ಮಾಡಿದ್ದರು. [ಕಾರ್ತಿಕ್ ಗೌಡಗೆ ನಿರೀಕ್ಷಣಾ ಜಾಮೀನು]

ಸೆ. 18ರಂದು ತನಿಖಾ ತಂಡ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಸಿದ್ಧಪಡಿಸಿಕೊಂಡು ಸಲ್ಲಿಸಿದ್ದರು. ಆರ್ ಟಿ ನಗರ ಪೊಲೀಸರು ಸಲ್ಲಿಸಿದ್ದ 632 ಪುಟಗಳ ಚಾರ್ಜ್ ಶೀಟ್ ನಲ್ಲಿ ಅತ್ಯಾಚಾರ ಪ್ರಕರಣವನ್ನು ಕೈ ಬಿಟ್ಟು ವಂಚನೆ ಆರೋಪವನ್ನು ಮಾತ್ರ ಕಾರ್ತಿಕ್ ಮೇಲೆ ಹೊರೆಸಲಾಗಿದೆ. ಅದರೆ, ಮಧ್ಯಂತರ ತಡೆ ನೀಡಿರುವ ನ್ಯಾ. ರತ್ನಕಲಾ ಅವರಿರುವ ನ್ಯಾಯಪೀಠ, ನಾಲ್ಕು ವಾರಗಳ ನಂತರ ಪೊಲೀಸರು ತನಿಖೆ ಮುಂದುವರೆಸುವಂತೆ ನಿರ್ದೇಶಿಸಿದ್ದಾರೆ. [ಕೌಟುಂಬಿಕ ಕೋರ್ಟಿಗೆ ಕಾಲಿಟ್ಟಿದ್ದೇಕೆ?]
ಮೈತ್ರಿಯಾ ಜೊತೆ ಮದುವೆ ಆಗಿಲ್ಲ: ಕಾರ್ತಿಕ್ ಕಾನೂನುಬದ್ಧವಾಗಿ ನನ್ನ ಪತಿಯಾಗಿದ್ದಾರೆ. ಹಿಂದೂ ಧರ್ಮದ ಪ್ರಕಾರ ನಮ್ಮಿಬ್ಬರ ಮದುವೆಯಾಗಿದೆ. ಅವರು ನನ್ನನ್ನು ಪತ್ನಿ ಎಂದು ಒಪ್ಪಿಕೊಂಡು ಪತ್ನಿಗೆ ಸೇರುವ ಎಲ್ಲಾ ಹಕ್ಕುಗಳನ್ನು ನೀಡತಕ್ಕದ್ದು, ಅಲ್ಲದೆ ಕಾರ್ತಿಕ್ ಅವರು ಬೇರೆ ಯಾವುದೇ ಯುವತಿ ಜೊತೆ ಮದುವೆಯಾಗುವುದು ಕಾನೂನು ಉಲ್ಲಂಘನೆಯಾಗುತ್ತದೆ. ಇಂಥ ಪ್ರಯತ್ನಕ್ಕೆ ತಡೆ ಒಡ್ಡಬೇಕು ಎಂದು ಮೈತ್ರಿಯಾ ಸಲ್ಲಿಸಿದ್ದ ಅರ್ಜಿಯನ್ನು ಕೌಟುಂಬಿಕ ನ್ಯಾಯಾಲಯ ತಳ್ಳಿ ಹಾಕಿರುವುದು ಎಲ್ಲರಿಗೂ ಗೊತ್ತೇ ಇದೆ.
ಮೈತ್ರಿಯಾ ಅವರು ನೀಡಿರುವ ದೂರಿನಲ್ಲಿ ಆರೋಪಿಸಿದಂತೆ ಅತ್ಯಾಚಾರ ನಡೆದಿಲ್ಲ ದೂರನ್ನು ರದ್ದುಗೊಳಿಸಿ ಎಂದು ಕಾರ್ತಿಕ್ ಗೌಡ ಪರ ಎಸ್. ಶಂಕರಪ್ಪ ವಾದಿಸಿದ್ದರು. ಆದರೆ, ನಟರಾಜ್ ಅವರ ವಾದವನ್ನು ಹೈಕೋರ್ಟ್ ಪೀಠ ತಿರಸ್ಕರಿಸಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications