ಮಲೇಷ್ಯಾದಲ್ಲಿ ಬಂಧನ ಭೀತಿಯಲ್ಲಿರುವ ತುಮಕೂರು ವೈದ್ಯನಿಗೆ ಜಾಮೀನು
ಬೆಂಗಳೂರು, ಮೇ 25: ವರದಕ್ಷಿಣೆ ಕಿರುಕುಳ ಆರೋಪ ಸಂಬಂಧ ಬಂಧನ ಭೀತಿ ಎದುರಿಸುತ್ತಿರುವ ಸದ್ಯ ಮಲೇಷ್ಯಾದಲ್ಲಿರುವ ತುಮಕೂರು ಮೂಲದ ದಂತ ವೈದ್ಯನಿಗೆ ಕರ್ನಾಟಕ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ. ಹಾಗಾಗಿ ಆತ ಬಂಧನ ಭೀತಿಯಿಂದ ಪಾರಾಗಿದ್ದು, ಇಲ್ಲವಾದರೆ ಆತನನ್ನು ತುಮಕೂರು ಪೊಲೀಸರು ಪತ್ನಿ ನೀಡಿದ್ದ ದೂರಿನ ಮೇರೆಗೆ ಬಂಧಿಸುವವರಿದ್ದರು.
ಕ್ರೌರ್ಯ ಮತ್ತು ವರದಕ್ಷಿಣೆ ಕಿರುಕುಳ ಆರೋಪ ಕುರಿತು ಪತ್ನಿ ದಾಖಲಿಸಿದ್ದ ದೂರಿನ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಮಲೇಷ್ಯಾದಲ್ಲಿ ದಂತ ವೈದ್ಯರಾಗಿ ಕೆಲಸ ಮಾಡುತ್ತಿರುವ ತುಮಕೂರಿನ ಅಮರಜ್ಯೋತಿ ನಗರದ ಎಂ. ಎಸ್. ಮಧು ನಿರಂಜನ್ ಸ್ವಾಮಿ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಎಸ್. ರಾಚಯ್ಯ ಅವರಿದ್ದ ರಜಾಕಾಲದ ಪೀಠ ಈ ಆದೇಶ ಮಾಡಿದೆ.

ಅಲ್ಲದೆ, ಈ ತೀರ್ಪಿನ ಪ್ರತಿ ಲಭ್ಯವಾದ ಒಂದು ತಿಂಗಳಲ್ಲಿ ತನಿಖಾಧಿಕಾರಿ ಮುಂದೆ ಹಾಜರಾಗಬೇಕು. 2 ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತಾ ಖಾತರಿ ನೀಡಬೇಕು. ತನಿಖಾಧಿಕಾರಿ ಕರೆದಾಗೆಲ್ಲಾ ಅವರ ಮುಂದೆ ಹಾಜರಾಗಿ ತನಿಖೆಗೆ ಸಹಕರಿಸಬೇಕು. ಪ್ರಕರಣದ ಸಾಕ್ಷ್ಯಧಾರ ತಿರುಚಲು ಅಥವಾ ಸಾಕ್ಷಿಗಳನ್ನು ಬೆದರಿಸಲು ಯತ್ನಿಸಬಾರದು ಎಂದು ಪೀಠ ಅರ್ಜಿದಾರನಿಗೆ ಷರತ್ತು ವಿಧಿಸಿದೆ.
ಇದೇ ವೇಳೆ ನ್ಯಾಯಾಲಯ ವಿಧಿಸಿರುವ ಯಾವುದೇ ಷರತ್ತು ಉಲ್ಲಂಘಿಸಿದರೂ ಜಾಮೀನು ರದ್ದತಿಗೆ ನ್ಯಾಯಾಲಯವನ್ನು ತನಿಖಾಧಿಕಾರಿ ಕೋರಲು ಮುಕ್ತವಾಗಿರುತ್ತಾರೆ ಎಂದು ಆದೇಶದಲ್ಲಿ ನ್ಯಾಯಪೀಠ ಸ್ಪಷ್ಟಪಡಿಸಿದೆ.
ನ್ಯಾಯಾಲಯದ ಆದೇಶವೇನು?: ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ, ಕೂಲಂಕುಶವಾಗಿ ಪ್ರಕರಣದ ದಾಖಲೆ ಪರಿಶೀಲಿಸಿದರೆ, ಅರ್ಜಿದಾರ ಮಲೇಷ್ಯಾದಲ್ಲಿ ದಂತ ವೈದ್ಯನಾಗಿ ಉದ್ಯೋಗ ಮಾಡುತ್ತಿದ್ದಾರೆ. ಆಗಾಗ್ಗೆ ಭಾರತಕ್ಕೆ ಬಂದು ಪತ್ನಿಯೊಂದಿಗೆ ಉಳಿದಿದ್ದಾರೆನ್ನುವುದು ತಿಳಿಯುತ್ತದೆ.
ಆತನಿಗೆ ಜಾಮೀನು ನೀಡುವುದಕ್ಕೆ ಪ್ರಕರಣದಲ್ಲಿ ಆರೋಪಗಳು ಅಡ್ಡಿಯಾಗುವುದಿಲ್ಲ. ಮರಣದ ದಂಡನೆ ಅಥವಾ ಜೀವಾವಧಿ ಶಿಕ್ಷೆ ವಿಧಿಸಲು ಅವಕಾಶವಿರುವ ಆರೋಪಗಳು ಅರ್ಜಿದಾರರ ಮೇಲಿಲ್ಲ. ಜಾಮೀನು ನೀಡದಿದ್ದರೆ ಅರ್ಜಿದಾರ ತಲೆಮರೆಸಿಕೊಳ್ಳಬಹುದು ಎಂದು ನ್ಯಾಯಪೀಠ ಹೇಳಿದೆ.
ಸಾಕ್ಷ್ಯತಿರುಚಬಹುದು ಅಥವಾ ಸಾಕ್ಷಿಗಳನ್ನು ಬೆದರಿಸಬಹುದು ಎಂಬ ತನಿಖಾಧಿಕಾರಿಯ ಆತಂಕ ದೂರಮಾಡಲು ಅಗತ್ಯ ಷರತ್ತು ವಿಧಿಸಬಹುದಾಗಿದೆ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ಅರ್ಜಿದಾರನಿಗೆ ನಿರೀಕ್ಷಣಾ ಜಾಮೀನು ನೀಡಿದೆ.
ಪ್ರಕರಣದ ಹಿನ್ನೆಲೆ: ಅರ್ಜಿದಾರ ಮತ್ತು ದೂರುದಾರ ಮಹಿಳೆ ಎರಡು ವರ್ಷಗಳ ಹಿಂದೆ ಮದುವೆಯಾಗಿದ್ದರು. ಅರ್ಜಿದಾರ ದಂತ ವೈದ್ಯನಾಗಿದ್ದು, ಉದ್ಯೋಗದ ನಿಮಿತ್ತ ಮಲೇಷ್ಯಾಗೆ ತೆರಳಿದ್ದರು. ಒಂದು ವರ್ಷದ ನಂತರ ಮಲೇಷ್ಯಾಗೆ ಪತ್ನಿಯನ್ನು ಕರೆದೊಯ್ಯುವುದಾಗಿ ಭರವಸೆ ನೀಡಿದ್ದರು.
ಅಲ್ಲಿಗೆ ತೆರಳುವಾಗ ಪತ್ನಿಯ ತಂದೆಯಿಂದ 5 ಲಕ್ಷ ರೂ. ಹಣ ಪಡೆದುಕೊಂಡಿದ್ದರು. ಆದರೆ, ಮೇಲೇಷ್ಯಾಗೆ ಹೋದ ನಂತರ ಮತ್ತೆ ಭಾರತಕ್ಕೆ ಹಿಂದಿರುಗಲಿಲ್ಲ. ಪತ್ನಿಗೆ ಕರೆ ಮಾಡಲಿಲ್ಲ ಹಾಗೂ ಆಕೆಯನ್ನೂ ಮಲೇಷ್ಯಾಗೆ ಕರೆದೊಯ್ಯಲಿಲ್ಲ. ಸದ್ಯ ಆತ ಎಲ್ಲಿದ್ದಾನೆ ಎನ್ನುವುದೇ ತಿಳಿದಿಲ್ಲ ಎಂಬ ಆರೋಪ ಅರ್ಜಿದಾರರ ಮೇಲಿದೆ.
ಇದೇ ವಿಚಾರವಾಗಿ ಕ್ರೌರ್ಯ, ಜೀವ ಬೆದರಿಕೆ, ಅಕ್ರಮವಾಗಿ ಕೂಡಿಹಾಕಿದ, ವಂಚನೆ, ಅಪರಾಧ ಎಸಗಲು ಕುಮ್ಮಕ್ಕು ಮತ್ತು ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಸಂಬಂಧ ಪತಿ ವಿರುದ್ಧ ಪತ್ನಿ ದೂರು ದಾಖಲಿಸಿದ್ದರು. ಅದನ್ನು ಆಧರಿಸಿ ತುಮಕೂರಿನ ಮಹಿಳಾ ಠಾಣಾ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಬಂಧನ ಭೀತಿಯಿಂದ ಅರ್ಜಿದಾರ ಹೈಕೋರ್ಟ್ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು.
-
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ.











Click it and Unblock the Notifications