ಕಾಮೆಡ್ ಕೆ ವಿರುದ್ಧ ಅರ್ಜಿ: ಸರ್ಕಾರಕ್ಕೆ ನೋಟಿಸ್ ಜಾರಿ
ಬೆಂಗಳೂರು, ಸೆ.12. ಕಾಮೆಡ್-ಕೆ ಪ್ರವೇಶ ಪ್ರಕ್ರಿಯೆ ಮತ್ತು ಶುಲ್ಕ ಮರುಪಾವತಿ ನೀತಿಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ತುರ್ತು ನೋಟಿಸ್ ಜಾರಿಗೊಳಿಸಿದೆ.
ನ್ಯಾಯವಾದಿ ಎನ್.ಪಿ ಅಮೃತೇಶ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯಪೀಠದ ಮುಂದೆ ವಿಚಾರಣೆಗೆ ಬಂದಿತು.
ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಸದಸ್ಯ ಕಾರ್ಯದರ್ಶಿ, ಕಾಮೆಡ್-ಕೆ (ಕರ್ನಾಟಕದ ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ದಂತ ಕಾಲೇಜುಗಳ ಒಕ್ಕೂಟ) ಅಧ್ಯಕ್ಷರೂ ಸೇರಿದಂತೆ ಒಟ್ಟು ಎಂಟು ಜನ ಪ್ರತಿವಾದಿಗಳಿಗೆ ತುರ್ತು ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿದೆ.

ಅರ್ಜಿದಾರರ ಪರ ವಕೀಲರು, 'ಮೊದಲ ಸುತ್ತಿನ ಕೌನ್ಸೆಲಿಂಗ್ ನಂತರ ವಿದ್ಯಾರ್ಥಿಗಳು ತಮ್ಮ ಸೀಟನ್ನು ಒಪ್ಪಿಸಿದರೆ ಐದು ಪಟ್ಟು ಶುಲ್ಕವನ್ನು ದಂಡವಾಗಿ ಪಾವತಿಸುವ ನೀತಿ ಏಕಪಕ್ಷೀಯವಾಗಿದೆ ಮತ್ತು ಇದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರು ಶೋಷಣೆಗೆ ಒಳಗಾಗಿದ್ದಾರೆ' ಎಂದು ವಾದ ಮಂಡಿಸಿದರು.
1433 ಟ್ರಾನ್ಸ್ ಫಾರ್ಮರ್ ಸ್ಥಳಾಂತರ ಪ್ರಕ್ರಿಯೆ:
ಈ ಮಧ್ಯೆ ಮತ್ತೊಂದು ಪ್ರಕರಣದಲ್ಲಿ ಬೆಸ್ಕಾಂ, ನಗರದ ಪಾದಚಾರಿ ಮಾರ್ಗಗಳ ಮೇಲಿದ್ದ ಟ್ರಾನ್ಸ್ಫಾರ್ಮರ್ಗಳಲ್ಲಿ ಈಗಾಗಲೇ 1,155 ಟ್ರಾನ್ಸ್ಫಾರ್ಮರ್ ಸ್ಥಳಾಂತರ ಮಾಡಲಾಗಿದ್ದು, ಉಳಿದ 1,433 ಟ್ರಾನ್ಸ್ಫಾರ್ಮರ್ಗಳನ್ನು ಸ್ಥಳಾಂತರಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೈಕೋರ್ಟ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿಫುಟ್ಪಾತ್ಗಳು ಹಾಗೂ ರಾಜಕಾಲುವೆಗಳ ಮೇಲೆ ಅಳವಡಿಸಲಾಗಿರುವ ಟ್ರಾನ್ಸ್ಫಾರ್ಮರ್ಗಳನ್ನು ತೆರವುಗೊಳಿಸಲು ನಿರ್ದೇಶಿಸುವಂತೆ ಕೋರಿ ನಿವೃತ್ತ ವಿಂಗ್ ಕಮಾಂಡರ್ ಜಿ.ಬಿ.ಅತ್ರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಆಲೋಕ್ ಅರಾಧೆ ಹಾಗೂ
ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ ಸೋಮವಾರ ವಿಚಾರಣೆ ನಡೆಸಿತು. ಬೆಸ್ಕಾಂ ಪರ ಹಿರಿಯ ವಕೀಲರು, ಫುಟ್ಪಾತ್ಗಳ ಮೇಲಿರುವ ಅಪಾಯಕಾರಿ ಟ್ರಾನ್ಸ್ಫಾರ್ಮರ್ಗಳ ಸ್ಥಳಾಂತರಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಬೆಸ್ಕಾಂ ಪರ ಪ್ರಮಾಣಪತ್ರ ಸಲ್ಲಿಸಿದರು.
ನಗರದಲ್ಲಿಪಾದಚಾರಿ ಮಾರ್ಗಗಳ ಮೇಲಿದ್ದ ಒಟ್ಟು 5,784 ಟ್ರಾನ್ಸ್ಫಾರ್ಮರ್ಗಳನ್ನು ಸ್ಥಳಾಂತರಿಸುವ ಅಥವಾ ಅವುಗಳನ್ನು ನೆಲಮಟ್ಟದಿಂದ ಎತ್ತರಿಸುವ ಅಗತ್ಯವಿತ್ತು. ಈ ಕಾರ್ಯವನ್ನು 2 ಹಂತದಲ್ಲಿಕೈಗೊಳ್ಳಲಾಗಿದ್ದು, ಮೊದಲ ಹಂತದಲ್ಲಿ3,194 ಟ್ರಾನ್ಸ್ಫಾರ್ಮರ್ಗಳನ್ನು ಹೊಸ ಸ್ಪನ್ ಪೋಲ್ ರಚನೆಗೆ ಪರಿವರ್ತಿಸಲಾಗಿದೆ. 2 ಟ್ರಾನ್ಸ್ಫಾರ್ಮರ್ಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದ್ದು, ಮೊದಲ ಹಂತದ ಕೆಲಸಗಳು ಈಗಾಗಲೇ ಪೂರ್ಣಗೊಂಡಿವೆ ಎಂದು ಪ್ರಮಾಣಪತ್ರದಲ್ಲಿಹೇಳಲಾಗಿದೆ.
ಎರಡನೇ ಹಂತದಲ್ಲಿ2,588 ಟ್ರಾನ್ಸ್ಫಾರ್ಮರ್ಗಳನ್ನು ಸ್ಥಳಾಂತರಿಸಲಾಗುತ್ತಿದ್ದು, ಈಗಾಗಲೇ 1,155 ಟ್ರಾನ್ಸ್ಫಾರ್ಮರ್ಗಳನ್ನು ಎತ್ತರಿಸಲಾಗಿದೆ. ಉಳಿದ 1,433 ಟ್ರಾನ್ಸ್ಫಾರ್ಮರ್ಗಳ ಸ್ಥಳಾಂತರ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಅದಕ್ಕಾಗಿ ಟೆಂಡರ್ ಕರೆಯಲಾಗಿದೆ. 2023ರ ಸೆಪ್ಟಂಬರ್ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಪ್ರಮಾಣಪತ್ರದಲ್ಲಿವಿವರಿಸಲಾಗಿದೆ.
ಅದನ್ನು ದಾಖಲಿಸಿಕೊಂಡ ಹೈಕೋರ್ಟ್, ಟ್ರಾನ್ಸ್ಫಾರ್ಮರ್ಗಳ ಸ್ಥಳಾಂತರ ಕಾರ್ಯ ಮುಂದುವರಿಸಿ, ಮುಂದಿನ ವಿಚಾರಣೆ ವೇಳೆ ಪ್ರಗತಿ ವರದಿ ಸಲ್ಲಿಸುವಂತೆ ಬೆಸ್ಕಾಂ ಪರ ವಕೀಲರಿಗೆ ನಿರ್ದೇಶಿಸಿ, ವಿಚಾರಣೆಯನ್ನು ಜ.9ಕ್ಕೆ ಮುಂದೂಡಿತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications