ಇ-ಮೇಲ್ ಮತದಾನ: ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು, ಮೇ 5: ಸಾರ್ವತ್ರಿಕ ಚುನಾವಣೆಯಲ್ಲಿ ಕ್ಷೇತ್ರದ ಮತದಾರರು ಬೇರೆ ಊರಿನಲ್ಲಿ ಇದ್ದುಕೊಂಡೇ ಇ-ಮೇಲ್ ಮೂಲಕ ಮತ ಹಾಕಲು ಅವಕಾಶ ಕಲ್ಪಿಸಲುಇ ಒಪ್ಪಿಗೆ ನೀಡುವ ಕುರಿತು ಕೇಂದ್ರ ಚುನಾವಣಾ ಆಯೋಗ ಹಾಗೂ ಕೇಂದ್ರ ಕಾನೂನು ಅಚಿವಾಲಯಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಬೆಂಗಳೂರಿನ ಜಯನಗರ ನಿವಾಸಿ ಎಂ.ನರಸಿಂಹ ಮೂರ್ತಿ ಅವರು ದಾಖಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಬಿ. ವೀರಪ್ಪ ಹಾಗೂ ನ್ಯಾ. ಎಸ್. ಸುನೀಲ್ದತ್ ಯಾದವ್ ಅವರಿದ್ಧ ರಜಾ ಕಾಲದ ವಿಭಾಗೀಯ ಪೀಠವು ಶುಕ್ರವಾರ ಈ ಆದೇಶ ಪ್ರಕಟಿಸಿದೆ.
ಚುನಾವಣಾ ಪ್ರಣಾಳಿಕೆ: ಆಯೋಗಕ್ಕೆ ನೋಟಿಸ್: ಚುನಾವಣೆ ವೇಳೆ ರಾಜಕೀಯ ಪಕ್ಷಗಳು ಬಿಡುಗಡೆ ಮಾಡುವ ಪ್ರಣಾಳಿಕೆಯನ್ನು ಅಧಿಕಾರಕ್ಕೆ ಬಂದ ಬಳಿಕ ಕಡ್ಡಾಯವಾಗಿ ಈಡೇರಿಸುವ ಸಂಬಂಧ ದಾಖಲಾಗಿರುವ ಪಿಐಎಲ್ ಆಧರಿಸಿದ ಕೇಂದ್ರ ಚುನಾವಣಾ ಆಯೋಗಕ್ಕೆ ತುರ್ತು ನೋಟಿಸ್ ನೀಡಿದೆ.

ಹುಸೇನ್ ಮೊಯಿನ್ ಫರೂಕ್ ಸಲ್ಲಿಸಿರುವ ಅರ್ಜಿಯನ್ನು ನ್ಯಾ. ಬಿ. ವೀರಪ್ಪ ಹಾಗೂ ನ್ಯಾ. ಸುನೀಲ್ದತ್ ಯಾದವ್ ಅವರಿದ್ದ ನ್ಯಾಯ ಪೀಠವು ಶುಕ್ರವಾರ ಈ ಆದೇಶ ನೀಡಿತು. ಆಯೋಗವೂ ಸೇರಿದಂತೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ಗಳಿಗೆ ನೋಟಿಸ್ ನೀಡಲು ಆದೇಶಿಸಿದೆ.
ಅರ್ಜಿಯಲ್ಲಿ ಏನಿದೆ: ಪ್ರಣಾಳಿಕೆಯಲ್ಲಿ ಸುಳ್ಳು ಭರವಸೆ ನೀಡಬಾರದು ಮತದಾರರನ್ನು ಮರುಳು ಮಾಡುವಂತೆ ಭರವಸೆ ಪ್ರಕಟಿಸಬಾರದು. ಅಧಿಕಾರಕ್ಕೇರಿದ ಬಳಿಕ ಎಲ್ಲಾ ಭರವಸೆಯನ್ನು ಅನುಷ್ಠಾನಕ್ಕೆ ತರಬೇಕು. ವಾರ್ಷಿಕ ಬಜೆಟ್ನಲ್ಲಿ ಯೋಜನೆಗಳನ್ನು ಘೋಷಿಸಿದರೂ, ಹೆಚ್ಚಿನವು ಜಾರಿಗೆ ಬಾರದ ಕಾರಣ ಸಾರ್ವಜನಿಕರ ಹಣ ಪೋಲಾಗುತ್ತಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications