ಒಂದೇ ದಿನ ದಾಖಲೆಯ 600 ಕೇಸ್ ವಿಚಾರಣೆ ನಡೆಸಿದ ನ್ಯಾ. ಎಂ.ನಾಗಪ್ರಸನ್ನ
ಬೆಂಗಳೂರು, ಜೂನ್ 19: ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಮಂಗಳವಾರ ಒಂದೇ ದಿನದ ಕಲಾಪದಲ್ಲಿ ಬರೋಬ್ಬರಿ 600 ಪ್ರಕರಣ ವಿಚಾರಣೆ ನಡೆಸಿದ್ದಾರೆ.
ಈ ಹಿಂದೆ ಅವರು ಒಂದೇ ದಿನ 801 ಅರ್ಜಿಗಳನ್ನು ವಿಚಾರಣೆ ನಡೆಸಿದ್ದರು. ಇದೀಗ ಅದೇ ಹಾದಿಯಲ್ಲಿ ಮತ್ತೆ ಹೆಜ್ಜೆ ಇಟ್ಟಿದ್ದು ತ್ವರಿತ ನ್ಯಾಯದಾನಕ್ಕೆ ಹೆಸರುವಾಸಿಯಾದ ಅವರು ಎಂಥಹುದೇ ವ್ಯಾಜ್ಯವಿರಲಿ ಫಟಾಫಟ್ ವಿಚಾರಣೆ ನಡೆಸಿ, ಅಷ್ಟೇ ವೇಗವಾಗಿ ತೀರ್ಪುಗಳನ್ನು ನೀಡುವುದರಲ್ಲಿ ಸಿದ್ಧಹಸ್ತರು.

ಬೆಂಗಳೂರು ಪ್ರಧಾನ ಪೀಠದಲ್ಲಿ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಕೋರ್ಟ್ಹಾಲ್ನ ಕೇಸ್ಲಿಸ್ಟ್ನಲ್ಲಿ (ವ್ಯಾಜ್ಯಗಳ ಪಟ್ಟಿ) 600 ಅರ್ಜಿಗಳನ್ನು ವಿಚಾರಣೆಗೆ ನಿಗದಿಪಪಡಿಸಲಾಗಿತ್ತು. ಅಷ್ಟೂ ಅರ್ಜಿಗಳ ವಿಚಾರಣೆಯನ್ನು ಮಧ್ಯಾಹ್ನ 3 ಗಂಟೆ 56 ನಿಮಿಷಕ್ಕೆ ಪೂರ್ಣಗೊಳಿಸಿ ಕಲಾಪ ಮುಗಿಸಿದರು. ನಿಗದಿಯಾಗಿದ್ದ 600 ಅರ್ಜಿಗಳ ಪೈಕಿ 180 ಅರ್ಜಿಗಳ ಸಂಬಂಧ ಮಧ್ಯಂತರ ಆದೇಶ ಮಾಡಿದ್ದಾರೆ. 87 ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿ ವಿಲೇವಾರಿ ಮಾಡಿದ್ದಾರೆ.
ನ್ಯಾ. ನಾಗಪ್ರಸನ್ನ ಅವರು ಇದೇ 2024ರ ಮಾ.22ರಂದು ಒಂದೇ ದಿನದ ಕಲಾಪದದಲ್ಲಿ 801 ಅರ್ಜಿಗಳನ್ನು ವಿಚಾರಣೆ ನಡೆಸಿದ್ದರು. ಅವುಗಳ ಪೈಕಿ 36 ಅರ್ಜಿಗಳ ಸಂಬಂಧ ಕಾಯ್ದಿರಿಸಿದ್ದ ತೀರ್ಪನ್ನು ಪ್ರಕಟಿಸಿದ್ದರು. ಉಳಿದಂತೆ ಸುಮಾರು 572 ಅರ್ಜಿಗಳನ್ನು ವಿಚಾರಣೆ ನಡೆಸಿ ಇತ್ಯರ್ಥಪಡಿಸಿದ್ದರು. ಇತ್ಯರ್ಥವಾದ ಪ್ರಕರಣಗಳಲ್ಲಿ 544 ಅರ್ಜಿಗಳು ಬೆಂಗಳೂರು ಜಲಮಂಡಳಿಗೆ ಸಂಬಂಧಿಸಿದ್ದಾಗಿದ್ದವು.
ಈ ಹಿಂದೆ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರು, ಒಂದೇ ದಿನದ ಕಲಾಪದಲ್ಲಿ ಸುಮಾರು 750 ಅರ್ಜಿಗಳನ್ನು ವಿಲೇವಾರಿ ಮಾಡಿದ ಉದಾಹರಣೆಯಿದೆ. ಹೀಗೆ ನೂರಾರು ಅರ್ಜಿಗಳನ್ನು ಒಂದೇ ದಿನದ ಕಲಾಪದಲ್ಲಿ ವಿಲೇವಾರಿ ಮಾಡುವುದು ಅತ್ಯಂತ ಅಪರೂಪದ ಸಂಗತಿಯಾಗಿದೆ.
2023ರ ಡಿಸೆಂಬರ್ನಲ್ಲಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಜನಪ್ರತಿನಿಧಿಗಳ ವಿರುದ್ಧದ ಪ್ರಕರಗಣ ವಿಚಾರಣೆ ನಡೆಸುತ್ತಿದ್ದರು. ಆಗ ಒಂದೇ ದಿನ 50 ಪ್ರಕರಣಗಳ ತೀರ್ಪನ್ನು ಪ್ರಕಟಿಸಿದ್ದರು. ಸೂರಜ್ ರೇವಣ್ಣ, ಕೊತ್ತನೂರು ಮಂಜುನಾಥ್, ಮಾಡಾಳ್ ವಿರೂಪಾಕ್ಷಪ್ಪ ಸೇರಿದಂತೆ ವಿವಿಧ ಜನಪ್ರತಿನಿಧಿಗಳ ಒಟ್ಟು 50 ಪ್ರಕರಣಗಳ ತೀರ್ಪು ಪ್ರಕಟಿಸಿದ್ದರು.
2022ರಲ್ಲಿ ಒಡಿಶಾ ಹೈಕೋರ್ಟ್ನ ನ್ಯಾಯಮೂರ್ತಿಯೊಬ್ಬರು ಒಂದೇ ದಿನ 32 ಪ್ರಕರಣಗಳ ತೀರ್ಪು ನೀಡಿದ್ದರು. 2023ರಲ್ಲಿ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರು 65 ತೀರ್ಪುಗಳನ್ನು ಒಂದೇ ದಿನ ನೀಡಿದ್ದರು.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications