ಸಿ.ವಿ.ರಾಮನ್ ನಗರದಿಂದ ಸ್ಪರ್ಧೆ, ಮಹದೇವಪ್ಪ ಹೇಳಿದ್ದೇನು?
ಬೆಂಗಳೂರು, ಜನವರಿ 05 : 'ಸಿ.ವಿ.ರಾಮನ್ ನಗರ ಕ್ಷೇತ್ರವನ್ನು ನಾನು ಆಯ್ಕೆ ಮಾಡಿಕೊಂಡಿಲ್ಲ. ಪಕ್ಷದ ನಾಯಕರು ಸ್ಪರ್ಧೆಗೆ ಆಹ್ವಾನಿಸುತ್ತಿದ್ದಾರೆ. ಪಕ್ಷದ ತೀರ್ಮಾನಕ್ಕೆ ನಾನು ಬದ್ಧ' ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು.
ಮಾಧ್ಯಮಗಳ ಜೊತೆ ಮಾತನಾಡಿದ ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ ಅವರು, 'ನಾನು ಸದ್ಯ ತಿ.ನರಸೀಪುರ ಕ್ಷೇತ್ರದ ಶಾಸಕ. ನನ್ನ ಅವಧಿ ಮೇ ತಿಂಗಳಿನ ತನಕ ಇದೆ. ಆ ಮೇಲೆ ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ' ಎಂದರು.
'ಬೆಂಗಳೂರಿನ ಸಿ.ವಿ.ರಾಮನ್ ನಗರ ಕ್ಷೇತ್ರದಿಂದ ಸ್ಪರ್ಧಿಸುವುದು ನನ್ನ ಇಚ್ಛೆಯಲ್ಲ. ನಂಜನಗೂಡಿನಿಂದ ಸ್ಪರ್ಧಿಸುವಂತೆಯೂ ಒತ್ತಾಯವಿದೆ. ಪಕ್ಷದ ನಾಯಕರು ನನಗೆ ಸಿ.ವಿ.ರಾಮನ್ ನಗರಕ್ಕೆ ಆಹ್ವಾನಿಸಿದ್ದಾರೆ' ಎಂದು ಹೇಳಿದರು.

ಸುನೀಲ್ ಬೋಸ್ ತಿ.ನರಸೀಪುರದಿಂದ ಸ್ಪರ್ಧಿಸುವ ಬಗ್ಗೆ ಮಾತನಾಡಿದ ಸಚಿವರು, 'ನನ್ನ ಮಗ ಪಕ್ಷದ ಕಾರ್ಯಕರ್ತ'ಎಂದು ಹೇಳಿದರು. ಮಹದೇವಪ್ಪ ಅವರು ಸಿ.ವಿ.ರಾಮನ್ ನಗರದಿಂದ ಸ್ಪರ್ಧಿಸಿದರೆ ಅವರ ಪುತ್ರ ಸುನೀಲ್ ಬೋಸ್ ತಿ.ನರಸೀಪುರದಿಂದ ಸ್ಪರ್ಧಿಸಬಹುದು ಎಂಬ ಸುದ್ದಿ ಹಬ್ಬಿದೆ.
ಈ ಬಾರಿಯ ಚುನಾವಣೆಯಲ್ಲಿ ಸಚಿವ ಮಹದೇವಪ್ಪ ಅವರು ಕ್ಷೇತ್ರ ಬದಲಾವಣೆ ಮಾಡಿ ಬೆಂಗಳೂರಿನ ಸಿ.ವಿ.ರಾಮನ್ ನಗರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಕ್ಷೇತ್ರದಲ್ಲಿ ಕ್ರಿಸ್ ಮಸ್, ಹೊಸ ವರ್ಷದ ಶುಭಾಶಯ ಕೋರಿ ಹಾಕಿದ್ದ ಬ್ಯಾನರ್ನಲ್ಲಿ ಮಹದೇವಪ್ಪ ಅಭ್ಯರ್ಥಿ ಎಂದು ಹಾಕಲಾಗಿತ್ತು.
ಕಳೆದ ಚುನಾವಣೆಯಲ್ಲಿ ಕ್ಷೇತ್ರದಿಂದ ಪಿ.ರಮೇಶ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಈ ಬಾರಿಯೂ ಅವರು ಟಿಕೆಟ್ ಆಕಾಂಕ್ಷಿ. ಆದರೆ, ಮಹದೇವಪ್ಪ ಸ್ಪರ್ಧಿಸುವುದಾದರೆ ಕ್ಷೇತ್ರ ಬಿಟ್ಟುಕೊಡಲು ಸಿದ್ಧ ಎಂದು ಹೇಳಿದ್ದಾರೆ.
-
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications