ಸಿ.ವಿ.ರಾಮನ್ ನಗರದಿಂದ ಸ್ಪರ್ಧೆ, ಮಹದೇವಪ್ಪ ಹೇಳಿದ್ದೇನು?
ಬೆಂಗಳೂರು, ಜನವರಿ 05 : 'ಸಿ.ವಿ.ರಾಮನ್ ನಗರ ಕ್ಷೇತ್ರವನ್ನು ನಾನು ಆಯ್ಕೆ ಮಾಡಿಕೊಂಡಿಲ್ಲ. ಪಕ್ಷದ ನಾಯಕರು ಸ್ಪರ್ಧೆಗೆ ಆಹ್ವಾನಿಸುತ್ತಿದ್ದಾರೆ. ಪಕ್ಷದ ತೀರ್ಮಾನಕ್ಕೆ ನಾನು ಬದ್ಧ' ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು.
ಮಾಧ್ಯಮಗಳ ಜೊತೆ ಮಾತನಾಡಿದ ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ ಅವರು, 'ನಾನು ಸದ್ಯ ತಿ.ನರಸೀಪುರ ಕ್ಷೇತ್ರದ ಶಾಸಕ. ನನ್ನ ಅವಧಿ ಮೇ ತಿಂಗಳಿನ ತನಕ ಇದೆ. ಆ ಮೇಲೆ ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ' ಎಂದರು.
'ಬೆಂಗಳೂರಿನ ಸಿ.ವಿ.ರಾಮನ್ ನಗರ ಕ್ಷೇತ್ರದಿಂದ ಸ್ಪರ್ಧಿಸುವುದು ನನ್ನ ಇಚ್ಛೆಯಲ್ಲ. ನಂಜನಗೂಡಿನಿಂದ ಸ್ಪರ್ಧಿಸುವಂತೆಯೂ ಒತ್ತಾಯವಿದೆ. ಪಕ್ಷದ ನಾಯಕರು ನನಗೆ ಸಿ.ವಿ.ರಾಮನ್ ನಗರಕ್ಕೆ ಆಹ್ವಾನಿಸಿದ್ದಾರೆ' ಎಂದು ಹೇಳಿದರು.

ಸುನೀಲ್ ಬೋಸ್ ತಿ.ನರಸೀಪುರದಿಂದ ಸ್ಪರ್ಧಿಸುವ ಬಗ್ಗೆ ಮಾತನಾಡಿದ ಸಚಿವರು, 'ನನ್ನ ಮಗ ಪಕ್ಷದ ಕಾರ್ಯಕರ್ತ'ಎಂದು ಹೇಳಿದರು. ಮಹದೇವಪ್ಪ ಅವರು ಸಿ.ವಿ.ರಾಮನ್ ನಗರದಿಂದ ಸ್ಪರ್ಧಿಸಿದರೆ ಅವರ ಪುತ್ರ ಸುನೀಲ್ ಬೋಸ್ ತಿ.ನರಸೀಪುರದಿಂದ ಸ್ಪರ್ಧಿಸಬಹುದು ಎಂಬ ಸುದ್ದಿ ಹಬ್ಬಿದೆ.
ಈ ಬಾರಿಯ ಚುನಾವಣೆಯಲ್ಲಿ ಸಚಿವ ಮಹದೇವಪ್ಪ ಅವರು ಕ್ಷೇತ್ರ ಬದಲಾವಣೆ ಮಾಡಿ ಬೆಂಗಳೂರಿನ ಸಿ.ವಿ.ರಾಮನ್ ನಗರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಕ್ಷೇತ್ರದಲ್ಲಿ ಕ್ರಿಸ್ ಮಸ್, ಹೊಸ ವರ್ಷದ ಶುಭಾಶಯ ಕೋರಿ ಹಾಕಿದ್ದ ಬ್ಯಾನರ್ನಲ್ಲಿ ಮಹದೇವಪ್ಪ ಅಭ್ಯರ್ಥಿ ಎಂದು ಹಾಕಲಾಗಿತ್ತು.
ಕಳೆದ ಚುನಾವಣೆಯಲ್ಲಿ ಕ್ಷೇತ್ರದಿಂದ ಪಿ.ರಮೇಶ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಈ ಬಾರಿಯೂ ಅವರು ಟಿಕೆಟ್ ಆಕಾಂಕ್ಷಿ. ಆದರೆ, ಮಹದೇವಪ್ಪ ಸ್ಪರ್ಧಿಸುವುದಾದರೆ ಕ್ಷೇತ್ರ ಬಿಟ್ಟುಕೊಡಲು ಸಿದ್ಧ ಎಂದು ಹೇಳಿದ್ದಾರೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications