ವೀರಪ್ಪ ಮೊಯ್ಲಿ ಟ್ವೀಟ್ ಬಗ್ಗೆ ಮಹದೇವಪ್ಪ ಪ್ರತಿಕ್ರಿಯಿಸಿದ್ದು ಹೀಗೆ...
ಬೆಂಗಳೂರು, ಮಾರ್ಚ್ 16: ಕರ್ನಾಟಕ ವಿಧಾನಸಭೆ ಚುನಾವಣೆ ಇನ್ನು ಕೆಲವೇ ವಾರಗಳಲ್ಲಿ ನಡೆಯಲಿದೆ. ನಿರೀಕ್ಷೆಯಂತೆ ರಾಜ್ಯದಲ್ಲಿ ಟಿಕೇಟ್ ರಾಜಕೀಯವೂ ಆರಂಭವಾಗಿದೆ. ಟಿಕೇಟ್ ಗಾಗಿ ಕಾಂಗ್ರೆಸ್ ನಲ್ಲಿ ಹಣದ ರಾಜಕೀಯ ನಡೆಯುತ್ತಿದೆ ಎಂಬ ವಿವಾದಾತ್ಮಕ ಟ್ವೀಟ್ ಮೂಲಕ ಮಾಜಿ ಮುಖ್ಯಮಂತ್ರಿ ವೀರಪ್ಪ ಮೋಯ್ಲಿ ಕಾಂಗ್ರೆಸ್ಸಿಗರ ಕೆಂಗಣ್ಣಿಗೆ ಗುರಿಯಾಗಿದ್ದರು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಅಲ್ಲದೆ, ಈ ಟ್ವೀಟ್ ನಲ್ಲಿ ಲೋಕೋಪಯೋಗಿ ಸಚಿವ ಎಚ್ ಸಿ ಮಹದೇವಪ್ಪನವರನ್ನೂ ಪರೋಕ್ಷವಾಗಿ ಇರಿದಿದ್ದರು. ಈ ಕುರಿತು ಪ್ರತಿಕ್ರಿಯೆ ನೀಡಿದ ಲೋಕೋಪಯೋಗಿ ಸಚಿವ ಎಚ್ ಸಿ ಮಹದೇವಪ್ಪ, 'ವೀರಪ್ಪ ಮೋಯ್ಲಿ ಅವರು ಹಿರಿಯ ರಾಜಕಾರಣಿ. ಅವರ ಬಗ್ಗೆ ನನಗೆ ತುಂಬ ಗೌರವವಿದೆ. ಅವರ ಟ್ವೀಟ್ ಅನ್ನು ಹ್ಯಾಕ್ ಮಾಡಲಾಗಿದೆ ಎಂದು ಅವರೇ ಹೇಳಿದ್ದಾರೆ. ಈ ಕುರಿತು ಇದಕ್ಕೂ ಹೆಚ್ಚಿನ ಪ್ರತಿಕ್ರಿಯೆ ನೀಡಲು ನಾನು ಸಿದ್ಧವಿಲ್ಲ' ಎಂದು ಅವರು ಹೇಳಿದ್ದಾರೆ.
'ಮೋಯ್ಲಿ ಅವರ ಖಾತೆಯಿಂದ ಪೋಸ್ಟ್ ಆಗಿದ್ದ ಟ್ವೀಟ್ ಕುರಿತಂತೆ ನನಗೆ ಮೋಯ್ಲಿ ಅವರ ಮೇಲೆ ಯಾವುದೇ ಅಸಮಾಧಾನವಿಲ್ಲ. ನಾನು ಸಂತೋಷವಾಗಿಯೇ ಇದ್ದೇನೆ' ಎಂದು ಇದಕ್ಕೂ ಮುನ್ನ ಪತ್ರಕರ್ತರ ಬಳಿ ಎಚ್ ಸಿ ಮಹದೇವಪ್ಪ ಹೇಳಿದರು.

ರಾಜ್ಯದಲ್ಲಿ ಲೋಕೋಪಯೋಗಿ ಸಚಿವ(ಎಚ್ ಸಿ ಮಹದೇವಪ್ಪ)ರು ಮತ್ತು ರಸ್ತೆ ಗುತ್ತಿಗೆದಾರರ ನಡುವೆ ಹೊಂದಾಣಿಕೆ ನಡೆಯುತ್ತಿದೆ ಎಂದು ಟ್ವಿಟ್ಟರ್ ನಲ್ಲಿ ನೇರವಾಗಿ ಆರೋಪಿಸಿದ್ದ ಮೊಯ್ಲಿ, ಈ ಕುರಿತು ಗಮನ ಹರಿಸುವಂತೆ ಹೈಕಮಾಂಡ್ ಬಳಿ ಮನವಿ ಮಾಡಿಕೊಂಡಿದ್ದರು.
'ಆದರೆ ನಂತರ, ಈ ಕುರಿತು ನನಗೆ ಯಾವುದೇ ಮಾಹಿತಿ ಇಲ್ಲ. ನನ್ನ ಟ್ವಿಟ್ಟರ್ ಖಾತೆ ಹ್ಯಾಕ್ ಆಗಿದೆ. ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ' ಎಂದು ವೀರಪ್ಪ ಮೊಯ್ಲಿ ನುಣುಚಿಕೊಂಡಿದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications