KRS ಡ್ಯಾಂಗೆ ಮೊದಲು ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್ ಎಂದ ಮಹಾದೇವಪ್ಪ: ವಿಜಯೇಂದ್ರ ಗರಂ ಆಗಿದ್ಯಾಕೆ?
ಬೆಂಗಳೂರು, ಆಗಸ್ಟ್ 04: ಮಂಡ್ಯ ಜಿಲ್ಲೆಯ KRS ಡ್ಯಾಂಗೆ ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂಬುದಾಗಿ ಸಚಿವ ಹೆಚ್.ಸಿ. ಮಹದೇವಪ್ಪ ಹೇಳಿಕೆಯನ್ನು ನೀಡಿದ್ದು, ಈ ಸಂಬಂಧ ಇದೀಗ ಸಾಕ್ಷ್ಯವನ್ನು ನೀಡಿದ್ದಾರೆ. ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಕನ್ನಂಬಾಡಿ ಕಟ್ಟೊದಕ್ಕೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದ್ರು. ಆದರೆ ಈಗ ಅದನು ಹೇಳೋಕೆ ಯಾರಿಗೂ ಧೈರ್ಯ ಇಲ್ಲ. ಕೆ.ಆರ್.ಎಸ್. ಗೇಟ್ ಹೆಬ್ಬಾಗಿಲಿನಲ್ಲಿ ಈಗಲೂ ಅದನ್ನು ಕಾಣಬಹುದು ಎಂದು ಹೇಳಿದ್ದಾರೆ.
ಬಿಜೆಪಿ ನಾಯಕರಾದ ಸಿ ಟಿ ರವಿಯವರೇ ಈ ವಿವರಣೆಯು ಈಗಲೂ KRS ನಲ್ಲೇ ಇದೆ. ಸುಮ್ಮನೇ ಧರ್ಮದ ಕಾರಣಕ್ಕಾಗಿ ರಾಜಕೀಯ ಮಾಡುವ ಬದಲು ಕನ್ನಡವನ್ನು ಓದುವುದನ್ನು ಕಲಿಯಿರಿ ಮತ್ತು ಪದಗಳನ್ನು ಅರ್ಥ ಮಾಡಿಕೊಳ್ಳುವುದನ್ನು ಕಲಿಯಿರಿ ಎಂದು ಹೆಚ್ ಸಿ ಮಹದೇವಪ್ಪ ಅವರು ಹೇಳಿದ್ದಾರೆ.

ಸಚಿವ ಹೆಚ್ ಸಿ ಮಹದೇವಪ್ಪ ಅವರ ಹೇಳಿಕೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಟ್ವೀಟ್ ಮಾಡಿದ್ದು, ಮೊದಲಿನಿಂದಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ರಾಜಮನೆತನದ ಬಗ್ಗೆ ಅಸಡ್ಡೆಯಿಂದ ನಡೆದುಕೊಂಡಿದ್ದಾರೆ, ಮೊನ್ನೆಯಷ್ಟೇ ನಾಲ್ವಡಿ ಅವರಿಗಿಂತಲೂ ತಮ್ಮ ತಂದೆಯೇ ಮಿಗಿಲು ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಹೇಳಿಕೊಂಡಿದ್ದಾರೆ, ಇದೀಗ ಮುಖ್ಯಮಂತ್ರಿಗಳ ಹಿಂಬಾಲಕ ಸಚಿವ ಹೆಚ್. ಸಿ. ಮಹದೇವಪ್ಪನವರು ಕನ್ನಂಬಾಡಿ ಕಟ್ಟೆಗೆ ಮೊದಲು ಅಡಿಪಾಯ ಹಾಕಿದ್ದು ಟಿಪ್ಪು ಎಂದು ಹೇಳುವ ಮೂಲಕ ಕನ್ನಂಬಾಡಿ ಕಟ್ಟೆ (ಕೃಷ್ಣರಾಜ ಸಾಗರ)ನಿರ್ಮಾಣದ ಹಿಂದಿನ ತ್ಯಾಗ- ಪರಶ್ರಮದ ಇತಿಹಾಸ ಹಾಗೂ ನಾಲ್ವಡಿಯವರ ಕೊಡುಗೆಯನ್ನು ಅಪಮಾನಿಸಿದ್ದಾರೆ.
ಕನ್ನಂಬಾಡಿ ಕಟ್ಟೆಗೆ (ಕೃಷ್ಣರಾಜ ಸಾಗರ) ರೋಚಕ ಇತಿಹಾಸವಿದೆ, ತ್ಯಾಗ ಮೆರೆದ ಹೆಗ್ಗಳಿಕೆ ಇದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕನಸು ಹಾಗೂ ಪರಿಶ್ರಮದ ಫಲವೇ ಕನ್ನಂಬಾಡಿ ಕಟ್ಟೆ (ಕೃಷ್ಣರಾಜ ಸಾಗರ) ನಿರ್ಮಾಣವಾಯಿತು ಎಂಬುದಕ್ಕೆ ಐತಿಹಾಸಿಕ ದಾಖಲೆಗಳಿವೆ, ತ್ಯಾಗ, ಕೊಡುಗೆಗಳ ಹೆಗ್ಗಳಿಕೆಯಿದೆ. 1908 ರಲ್ಲಿ ರೂಪಿಸಲಾದ ಯೋಜನೆಯನ್ನು ಮತ್ತಷ್ಟು ಪರಿವರ್ತಿಸಿ ಹತ್ತು ಹಲವು ಅಡ್ಡಿ ಆತಂಕ ತೊಂದರೆ ಅವಮಾನಗಳ ನಡುವೆ ಬ್ರಿಟಿಷ್ ಆಡಳಿತದಿಂದ ಅನುಮತಿ ಪಡೆದುಕೊಂಡ ಹಿನ್ನೆಲೆಯ ಪ್ರತಿ ಹೆಜ್ಜೆಗಳಿಗೂ ಪುಟ ಪುಟಗಳ ದಾಖಲೆಗಳು ಇಂದಿಗೂ ಜೀವಂತವಾಗಿವೆ.
1911 ರಿಂದ ಅಧಿಕೃತವಾಗಿ ಆರಂಭವಾದ ಯೋಜನೆ 1932ರಲ್ಲಿ ಪೂರ್ಣಗೊಂಡಿದ್ದಕ್ಕೆ ಎಷ್ಟು ವೆಚ್ಚವಾಯಿತು, ಯೋಜನೆ ಪೂರ್ಣಗೊಳ್ಳಲು ಆರ್ಥಿಕ ಸಂಕಷ್ಟ ಎದುರಾದಾಗ ನಾಲ್ವಡಿ ಅವರ ಮಾತೆ ವಾಣಿವಿಲಾಸ ಸನ್ನಿಧಾನ (ಕೆಂಪರಾಜಮ್ಮಣ್ಣಿ) ಹಾಗೂ ಅವರ ಪತ್ನಿ ಕೃಷ್ಣ ವಿಲಾಸ ಸನ್ನಿಧಾನ ಅವರು ಲಕ್ಷಾಂತರ ಜನರಿಗೆ ಅನ್ನ ನೀಡುವ ಯೋಜನೆ ಪೂರ್ಣಗೊಳ್ಳುವುದಕ್ಕಿಂತ ಖಜಾನೆಯಲ್ಲಿರುವ ವಜ್ರ, ವೈಢೂರ್ಯಗಳು ಹೆಚ್ಚಿನದ್ದಲ್ಲ ಎಂಬ ತ್ಯಾಗ ಮನೋಭಾವ ಪ್ರದರ್ಶಿಸಿ ತಮ್ಮ ಸ್ವಂತ ಒಡವೆಗಳನ್ನು ಮಾರಾಟ ಮಾಡಿ ಕನ್ನಂಬಾಡಿ ಕಟ್ಟೆ ಕಟ್ಟಿಸಿದ್ದಕ್ಕೆ ಐತಿಹಾಸಿಕ ತ್ಯಾಗ ಮೆರೆದ ಆನಂದ ಭಾಷ್ಪತರಿಸುವ ಕಥೆ ಮೈಸೂರು ಸಂಸ್ಥಾನದ ಪ್ರತಿ ಮನೆ,ಮನೆಯಲ್ಲೂ ಇಂದಿಗೂ ನಿತ್ಯ ನೆನಪಿನ ಸ್ಮರಣೆಯಾಗಿ ಉಳಿದಿದೆ.
ಅಣೆಕಟ್ಟೆ ನಿರ್ಮಾಣಕ್ಕಾಗಿ ಸರ್.ಎಂ ವಿಶ್ವೇಶ್ವರಯ್ಯನವರ ವಿಶೇಷ ಕಾಳಜಿ ಹಾಗೂ ಪರಿಶ್ರಮ ಸೇರಿದಂತೆ ನೂರಾರು ಮಹನೀಯರ ಪರಿಶ್ರಮದ ಬೆವರಿನ ಕಥೆಯಿದೆ. ಅಂತಹ ಚಾರಿತ್ರಿಕ ಅಣೆಕಟ್ಟೆ ನಿರ್ಮಾಣವೂ ಸೇರಿದಂತೆ ನೂರಾರು ಜನಕಲ್ಯಾಣ ಕೈಗೊಂಡ ಕಾರಣಕ್ಕಾಗಿ ಮಹಾತ್ಮ ಗಾಂಧಿ ಅವರಿಂದ 'ರಾಜಋಷಿ'ಎಂದು ಕರೆಸಿಕೊಂಡ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರನ್ನು ಕನ್ನಂಬಾಡಿ ಕಟ್ಟೆಗೆ ಇಡಲಾಗಿದೆ.
ಮಾನ್ಯ ಹೆಚ್.ಸಿ. ಮಹಾದೇವಪ್ಪನವರೇ, ಟಿಪ್ಪು ಸುಲ್ತಾನ್ ಕೆಆರ್ಎಸ್ ಅಣೆಕಟ್ಟು ಕಟ್ಟಲು ಪ್ರಯತ್ನಿಸಿದ್ದ ಯಾವುದಾದರೂ ದಾಖಲೆ ಇದ್ದರೆ ಬಿಡುಗಡೆ ಮಾಡಿ, ಕನ್ನಂಬಾಡಿ ಕಟ್ಟೆ ನಿರ್ಮಾಣ ಹಂತದ ಪ್ರತಿ ಹೆಜ್ಜೆಯ ಇತಿಹಾಸದ ದಾಖಲೆಗಳನ್ನು ನಾವು ಬಿಡುಗಡೆ ಮಾಡುತ್ತೇವೆ, ಟಿಪ್ಪು ಪರಿಶ್ರಮದ ಬಗ್ಗೆ ನಿಮ್ಮಲ್ಲಿ ಯಾವುದಾದರೂ ದಾಖಲೆಗಳಿದ್ದರೆ ಬಿಡುಗಡೆ ಮಾಡಿ, ಟಿಪ್ಪು ನಿಧನವಾಗಿದ್ದು 1799 ರಲ್ಲಿ ಕನ್ನಂಬಾಡಿ ಕಟ್ಟುವ ಯೋಜನೆ ಪ್ರಾರಂಭಿಸಿದ್ದು 1908 ರಲ್ಲಿ, (ಅಂದರೆ ಶತಮಾನಗಳ ಅಂತರದಲ್ಲಿ ) ನಾಲಿಗೆ ಹೊರಳುತ್ತದೆ ಎಂದು ಇತಿಹಾಸದ ಪುಟಗಳನ್ನು ಗಲೀಜು ಮಾಡಲು ಹೋಗಬೇಡಿ.
ಇಡೀ ದೇಶದಲ್ಲೇ ಅತ್ಯಂತ ಶ್ರೇಷ್ಠ ಆಡಳಿತ ನೀಡಿ ವಿಶ್ವಮಾನ್ಯರಾದ ಮೈಸೂರು ರಾಜವಂಶಸ್ಥರು ಅದರಲ್ಲೂ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಚರಿತ್ರೆಯನ್ನು ಸಾಧ್ಯವಾದರೆ ಗೌರವಿಸಿ, ಅಪಮಾನಿಸಿ ಜನರಿಂದ ಛೀಮಾರಿ ಹಾಕಿಸಿಕೊಳ್ಳಬೇಡಿ. ಟಿಪ್ಪು ಸಂತತಿಯನ್ನು ವೈಭವೀಕರಿಸಿ ಮುಸ್ಲಿಂ ಮತಗಳಿಕೆಯನ್ನು ಗಟ್ಟಿಗೊಳಿಸಿಕೊಳ್ಳುವುದು ನಿಮ್ಮ ಕಾರ್ಯ ಸೂಚಿ ಎಂಬುದು ನಾಡಿನ ಜನತೆಗೆ ತಿಳಿದಿದೆ ಎಂದು ಹೆಚ್ ಸಿ ಮಹದೇವಪ್ಪ ವಿರುದ್ದ ಬಿ ವೈ ವಿಜಯೇಂದ್ರ ಅವರು ಕಿಡಿಕಾರಿದ್ದಾರೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications