ಪ್ರಿಯಕರನ ಜತೆ ಓಡಿ ಹೋಗಿದ್ದ ಅಪ್ರಾಪ್ತೆ ಪೋಷಕರ ಜತೆ ಹೋಗಲು ನಿರಾಕರಣೆ
ಬೆಂಗಳೂರು, ಮೇ 08: ಪ್ರಿಯಕರನ ಜತೆ ಮನೆ ಬಿಟ್ಟು ಪರಾರಿಯಾಗಿದ್ದ ಅಪ್ರಾಪ್ತೆ ಪೋಷಕರ ಜತೆ ಮರಳಲು ನಿರಾಕರಿಸಿದ ಘಟನೆ ಕರ್ನಾಟಕ ಹೈಕೋರ್ಟ್ನಲ್ಲಿ ನಡೆದಿದೆ. ಹಾಗಾಗಿ ನ್ಯಾಯಾಲಯ ಆಕೆಯನ್ನು ಸರ್ಕಾರಿ ವಸತಿ ನಿಲಯದಲ್ಲಿ ಇರಿಸುವಂತೆ ಪ್ರತಿವಾದಿಗಳಿಗೆ ನಿರ್ದೇಶಿಸಿ ಅರ್ಜಿ ಇತ್ಯರ್ಥಪಡಿಸಿದೆ.
ಅಲ್ಲದೆ, ಇದೊಂದು ವಿಶೇಷ ಪ್ರಕರಣ ಎಂದು ಪರಿಗಣಿಸಿ ಆಕೆಯನ್ನು ಸರ್ಕಾರದ ವಸತಿ ನಿಲಯ (ಸ್ಟೇಟ್ ಹೋಮ್)ನಲ್ಲಿ ಇರಿಸಲಾಗುತ್ತದೆ. ಪೋಷಕರು ಯಾವಾಗ ಬೇಕಾದರೂ ಭೇಟಿ ನೀಡಿ ಆಕೆಯ ಕುಶಲೋಪರಿ ವಿಚಾರಿಸಬಹುದು ಎಂದು ಆದೇಶಿಸಿದೆ.

ನಾಪತ್ತೆಯಾಗಿರುವ ತನ್ನ ಅಪ್ರಾಪ್ತ ಮಗಳನ್ನು ಪತ್ತೆಹಚ್ಚಿ ಹಾಗೂ ಆಕೆಯ ಕಸ್ಟಡಿಯನ್ನು ತನಗೆ ಹಸ್ತಾಂತರಿಸುವಂತೆ ಕೋರಿ ರಾಮನಗರ ಜಿಲ್ಲೆಯ ಕಲ್ಲೂರಿನ ಸುರೇಶ್ ಎಂಬುವವರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಸ್. ಸುನೀಲ್ ದತ್ತ್ ಯಾದವ್ ಹಾಗೂ ನ್ಯಾಯಮೂರ್ತಿ ವೆಂಕಟೇಶ್ ನಾಯ್ಕ ಟಿ. ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ನ್ಯಾಯಪೀಠವು, ಯುವತಿಯನ್ನು ಉದ್ದೇಶಿಸಿ ತಂದೆ-ತಾಯಿಯ ಜತೆಗೆ ಮರಳಿ ಮನೆಗೆ ತೆರಳಬಹುದೇ? ಎಂದು ಪ್ರಶ್ನಿಸಿತು. ಇದಕ್ಕೆ ಯುವತಿ ಇಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾಳೆ. ಈ ಅಂಶ ದಾಖಲಿಸಿಕೊಂಡ ನ್ಯಾಯಪೀಠ ಪೋಷಕರಿಗೆ ಮಗಳು ನಿಮ್ಮ ಜತೆ ಬರಲು ನಿರಾಕರಿಸುತ್ತಿದ್ದಾಳೆ ಎಂದು ಹೇಳಿದೆ. ಆದರೆ ಆಕೆಗೆ ತಮ್ಮ ಜತೆ ಬರುವಂತೆ ಯಾವುದೇ ರೀತಿ ಒತ್ತಡ ನೀಡಬಾರದು ಎಂದು ಹೇಳಿದೆ.
ಜತೆಗೆ, ಯುವತಿ ದ್ವೀತಿಯ ಪಿಯುಸಿವರೆಗೆ ವಿದ್ಯಾಭ್ಯಾಸ ಪೂರ್ಣಗೊಳಿಸಿದ್ದು ಮುಂದಿನ ದಿನದಲ್ಲಿ ಆಕೆಗೆ ಉನ್ನತ ಶಿಕ್ಷಣ ಪಡೆದುಕೊಳ್ಳಬೇಕು ಎಂಬ ಹಂಬಲವಿದ್ದರೆ ಅವಕಾಶ ಕಲ್ಪಿಸಬೇಕು. ನುರಿತ ಮನೋವೈದ್ಯರಿಂದ ಆಕೆಯನ್ನು ಸಮಾಲೋಚನೆಗೆ ಒಳಪಡಿಸಬೇಕು ಎಂದು ಸರ್ಕಾರದ ಪರ ವಕೀಲರಿಗೆ ನಿರ್ದೇಶಿಸಿ ಅರ್ಜಿ ಇತ್ಯರ್ಥಪಡಿಸಿ ಆದೇಶಿಸಿದೆ.
ಪ್ರಕರಣದ ಹಿನ್ನೆಲೆ: ರಾಮನಗರ ಜಿಲ್ಲೆಯ ಕಲ್ಲೂರು ಹಳ್ಳಿಯ ಯುವಕ ಹಾಗೂ ಅದೇ ಊರಿನ ಹದಿಹರೆಯದ ಬಾಲಕಿ ಪರಸ್ಪರ ಪ್ರೀತಿಸಿ ಏಪ್ರಿಲ್ 15ರಂದು ಮನೆ ಬಿಟ್ಟು ಹೋಗುತ್ತಾರೆ. ಈ ಸಂಬಂಧ ಆಕೆಯ ತಂದೆ ಸತೀಶ್ ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ನಾಪತ್ತೆಯಾಗಿರುವ ತನ್ನ ಅಪ್ರಾಪ್ತ ಮಗಳನ್ನು ಪತ್ತೆಹಚ್ಚಿ ಹಾಗೂ ಆಕೆಯ ಕಸ್ಟಡಿಯನ್ನು ತನಗೆ ಹಸ್ತಾಂತರಿಸುವಂತೆ ಮನವಿ ಮಾಡುತ್ತಾರೆ. ತನಿಖಾ ಹಂತದಲ್ಲಿ ಆಕೆಯನ್ನು ಪತ್ತೆ ಹಚ್ಚಲಾಗಿದ್ದು, ಯುವತಿಯೂ ತಾನು ಸ್ವ-ಇಚ್ಛೆಯಿಂದ ಯುವಕನ ಜತೆಗೆ ಹೋಗಿರುವುದಾಗಿ ಹೇಳಿಕೆ ನೀಡುತ್ತಾಳೆ. ಆದರೂ ಆಕೆ ಅಪ್ರಾಪ್ತಳೆನ್ನುವ ಕಾರಣಕ್ಕೆ ಯುವಕನಿಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿತ್ತು.
-
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications