ವಿದ್ಯಾರ್ಥಿಗಳಿಗೆ ಬಿಸಿಯೂಟದ ಬದಲು ಅಡುಗೆ ಎಣ್ಣೆ, ಬೇಳೆ ನೀಡಿ: ಹೈಕೋರ್ಟ್
ಬೆಂಗಳೂರು, ಡಿಸೆಂಬರ್ 09: ಕೊರೊನಾ ಸಂದರ್ಭದಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬಿಸಿಯೂಟವನ್ನು ನೀಡುವುದು ಕಷ್ಟ ಎಂದು ಸರ್ಕಾರ ಹೈಕೋರ್ಟ್ಗೆ ಹೇಳಿದೆ.
ಹೀಗಾಗಿ ವಿದ್ಯಾರ್ಥಿಗಳಿಗೆ ಬಿಸಿಯೂಟದ ಬದಲು ಅಡುಗೆ ಎಣ್ಣೆ ಹಾಗೂ ಬೇಳೆಯನ್ನು ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.ಮಕ್ಕಳಿಗೆ ಆಹಾರ ಧಾನ್ಯ ವಿತರಿಸಲು ಡಿಸೆಂಬರ್ 5ರಂದೇ ಆದೇಶ ಹೊರಡಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.
1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ತಲಾ 1 ಕೆಜಿ ಅಯೊಡೈಸ್ಡ್ ಉಪ್ಪು, ತೊಗರಿ ಬೇಳೆ ಮತ್ತು ಅಡುಗೆ ಎಣ್ಣೆಯನ್ನು ಐದು ತಿಂಗಳ ಲೆಕ್ಕಾಚಾರದಲ್ಲಿ ವಿತರಿಸಲಾಗುವುದು ಎಂದು ಹೇಳಿದೆ.

ಉಪ್ಪು ಮತ್ತು ಅಡುಗೆ ಎಣ್ಣೆ ಬದಲು ತೊಗರಿ ಬೇಳೆಯನ್ನು ಹೆಚ್ಚು ವಿತರಿಸಲು ಸಧ್ಯವೇ ಎಂಬುದನ್ನು ಪರಿಗಣಿಸಬೇಕು. ಆದೇಶದಲ್ಲಿ ಇರುವಂತೆ ವಸ್ತುಗಳು ವಿತರಣೆಯಾದರೆ ಅದು ಮಧ್ಯಾಹ್ನದ ಬಿಸಿಯೂಟಕ್ಕೆ ಸಮನಾಗುವುದಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ.
ಉಪ್ಪು, ಎಣ್ಣೆ ಮತ್ತು ಬೇಳೆ ಸಂಗ್ರಹಿಸಿ ವಿತರಿಸಲು ಕರ್ನಾಟಕ ಆಹಾರ ನಿಗಮಕ್ಕೆ ನಿರ್ದೇಶನ ನೀಡಲಾಗಿದೆ. ಶಾಲೆಗಳು ಆರಂಭವಾಗಿ ಅಲ್ಲಿಯೇ ಅಡುಗೆ ಮಾಡುವ ವ್ಯವಸ್ಥೆ ಮತ್ತೆ ಜಾರಿಗೆ ಬರುವವರೆಗೆ ಈ ವ್ಯವಸ್ಥೆ ಮುಂದುವರೆಸಲು ಆಯುಕ್ತರಿಗೆ ಸೂಚಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್ಆರ್ ಉಮಾಶಂಕರ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಪೀಠಕ್ಕೆ ಮಾಹಿತಿ ನೀಡಿದರು.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
School Land Bill: ಸರ್ಕಾರಿ ಶಾಲೆಗಳ ಭೂರಕ್ಷಣ ವಿಧೇಯಕ ಜಾರಿ; ಕನ್ನಡದ ಹಿತದೃಷ್ಠಿಯಿಂದ ಮಹತ್ವದ ಹೆಜ್ಜೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications