ವಾರಾಂತ್ಯದಲ್ಲಿ ಕುದುರೆ ರೇಸ್ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್
ಬೆಂಗಳೂರು, ಜೂನ್ 19: ಬೆಂಗಳೂರು ಟರ್ಫ್ ಕ್ಲಬ್ (ರೇಸ್ಕೋರ್ಸ್)ನಲ್ಲಿ ಷರತ್ತುಗಳ ಅನ್ವಯ ವಾರಾಂತ್ಯದಲ್ಲಿ ರೇಸ್ಗಳನ್ನು ಆಯೋಜನೆ ಮಾಡುವುದಕ್ಕೆ ಕರ್ನಾಟಕ ಹೈಕೋಟ್ ಹಸಿರು ನಿಶಾನೆ ನೀಡಿದೆ. ಅಲ್ಲದೆ, ಸರ್ಕಾರ ಅನುಮತಿ ನಿರಾಕರಿಸಿದ್ದ ಆದೇಶಕ್ಕೆ ತಡೆ ನೀಡಿದೆ.
ರೇಸ್ ಪಂದ್ಯಗಳ ಆಯೋಜನೆಗೆ ಕೋರಿದ್ದ ಮನವಿಯನ್ನು ತಿರಸ್ಕರಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಬೆಂಗಳೂರು ಟರ್ಫ್ ಕ್ಲಬ್ ಲಿಮಿಟೆಡ್, ಕರ್ನಾಟಕ ಟ್ರೈನ್ಸ್ ಅಸೋಸಿಯೇಷನ್ಸ್, ಕರ್ನಾಟಕ ರೇಸ್ ಕುದುರೆ ಮಾಲೀಕರ ಸಂಘ, ಕರ್ನಾಟಕ ಜಾಕಿಗಳ ಸಂಘ ಸೇರಿದಂತೆ ಮತ್ತಿತರರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಕುಮಾರ್ ಅವರಿದ್ದ ನ್ಯಾಯಪೀಠ, 2024ರ ಮಾರ್ಚ್ ತಿಂಗಳಲ್ಲಿ ಸರ್ಕಾರ ಅನುಮತಿ ನೀಡಿದ್ದ ಷರತ್ತುಗಳ ಅನ್ವಯ ಕುದುರೆ ಪಂದ್ಯಗಳನ್ನು ಆಯೋಜನೆ ಮಾಡವುದಕ್ಕೆ ಅವಕಾಶ ನೀಡಿ ಆದೇಶಿಸಿದೆ.
ಹೈಕೋರ್ಟ್ ಏನು ಹೇಳಿದೆ?: ಆನ್ಕೋರ್ಸ್ (ಬೆಂಗಳೂರಿನಲ್ಲಿ ನಡೆಯುವ ಪಂದ್ಯ) ಮತ್ತು ಆಫ್ ಕೋರ್ಸ್ (ಹೊರಭಾಗಗಳಲ್ಲಿ ಮೈಸೂರು, ಬಾಂಬೆ ನಡೆಯುವ ಪಂದ್ಯಗಳು)ಗಳನ್ನು ಬಿಟಿಸಿ ಹಮ್ಮಿಕೊಳ್ಳಬಹುದಾಗಿದೆ. ಅಲ್ಲದೆ, ರಾಜ್ಯ ಸರ್ಕಾರವು ಕುದುರೆ ಪಂದ್ಯಗಳ ಆಯೋಜನೆ ವೇಳೆ ಅದರ ಮೇಲ್ವಚಾರಣೆ ಮತ್ತು ನಿಯಂತ್ರಣವವನ್ನು ಮಾಡಬಹುದಾಗಿದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.
ಈ ಆದೇಶದಿಂದಾಗಿ ಕಳೆದ ಮೂರು ತಿಂಗಳನಿಂದ ಸ್ಥಗಿತಗೊಂಡಿದ್ದ ಕುದರೆ ಪಂದ್ಯಾವಳಿಗಳು ಪುನರಾರಂಭವಾಗಲಿದೆ. ಅರ್ಜಿಯ ಕುರಿತಂತೆ ಈ ಹಿಂದೆ ನಡೆದ ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ರೇಸ್ಕೋರ್ಸ್ ಅಕ್ರಮಗಳ ತಾಣವಾಗಿದೆ. ಪ್ರತಿದಿನ ಕೋಟ್ಯಾಂತರ ರೂ.ಗಳ ಅವ್ಯವಹಾರ ನಡೆಯುತ್ತಿದೆ. ಜತೆಗೆ, ತೆರಿಗೆ ವಂಚನೆಗೆ ಬುಕ್ಕಿಗಳು ಪ್ರಯತ್ನ ಮಾಡುತ್ತಿದ್ದು, ದಾಳಿ ಸಂದರ್ಭದಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ.
ಅಲ್ಲದೆ, ನೂರಾರು ಮಂದಿ ಸಾಮಾನ್ಯ ಜನ ಕುದುರೆ ಪಂದ್ಯಗಳಲ್ಲಿ ತೊಡಗಿ ಜೀವನ ನಡೆಸುವುದಕ್ಕೆ ಪರದಾಡುತ್ತಿದ್ದಾರೆ, ಆಟೋ ಚಾಲಕರು ತಮ್ಮ ದುಡಿಮೆಯನ್ನು ಪಂದ್ಯಗಳಲ್ಲಿ ವ್ಯಯ ಮಾಡುತ್ತಿದ್ದಾರೆ. ಹೀಗಾಗಿ ಸರ್ಕಾರ ಪಂದ್ಯಗಳ ಆಯೋಜನೆಗೆ ಅನುಮತಿ ನಿರಾಕರಿಸಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದರು.
ರೇಸ್ಕೋರ್ಸ್ ಪರ ವಕೀಲರು, ರೇಸ್ಕೋರ್ಸ್ ಆಡಳಿತ ಮಂಡಳಿಯಲ್ಲಿ ಸರ್ಕಾರದ ಹಣಕಾಸು ಕಾರ್ಯದರ್ಶಿಗಳು, ಬೆಂಗಳೂರು ನಗರ ಪೊಲೀಸ್ ಆಯುಕ್ತರು ಸದಸ್ಯರಾಗಿದ್ದಾರೆ. ಕುದರೆ ಪಂದ್ಯಗಳ ಆಯೋಜನೆಯ ಎಲ್ಲ ಚಟುವಟಿಕೆಗಳು ಸರ್ಕಾರದ ಗಮನಕ್ಕೆ ಇರುತ್ತದೆ. ಅಕ್ರಮಗಳು ನಡೆಸುವ ಸಾಧ್ಯತೆಗಳು ಇಲ್ಲ ಎಂದು ವಿವರಿಸಿದ್ದರು.
ಅಕ್ರಮ ಬೆಟ್ಟಿಂಗ್ ಆರೋಪ: ತೆರಿಗೆ ವಂಚನೆಗಾಗಿ ಅಕ್ರಮವಾಗಿ ಬೆಟ್ಟಿಂಗ್ ಮಾಡಿದ ಆರೋಪದಲ್ಲಿ ಆರೋಪ ಪಟ್ಟಿ ದಾಖಲಿಸಿರುವ ಬುಕ್ಕಿಗಳ ಪರವಾನಿಗೆಯನ್ನು ರದ್ದು ಪಡಿಸುವುದಕ್ಕಾಗಿ ಮಂಡಳಿಯ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಅಲ್ಲದೆ, ಕುದರೆ ಪಂದ್ಯಗಳ ಆಯೋಜನೆಯಲ್ಲಿ ಬುಕ್ಕಿ ಕಂಪೆನಿಗಳಿಗೆ ಯಾವುದೇ ಸಂಬಂಧವಿರುವುದಿಲ್ಲ. ಹೀಗಾಗಿ ಕುದರೆ ಪಂದ್ಯಗಳ ಆಯೋಜನೆಗೆ ಅವಕಾಶ ಕಲ್ಪಿಸಬೇಕು ಎಂದು ಪೀಠಕ್ಕೆ ಕೋರಿದ್ದರು.
ಜತೆಗೆ, ಪ್ರತಿ ದಿನ 1 ಕೋಟಿಗಿಂತಲೂ ಹೆಚ್ಚು ರೂ.ಗಳ ತೆರಿಗೆ ಸಂಗ್ರಹವಾಗುತ್ತಿದೆ. ಇದು ಸರ್ಕಾರದ ಬೊಕ್ಕಸಕ್ಕೆ ಸೇರುತ್ತಿದೆ. ಅಲ್ಲದೆ, ಕುದುರೆ ಪಂದ್ಯಗಳನ್ನು ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಸುಮಾರು 2 ಸಾವಿರಕ್ಕೂ ಹೆಚ್ಚು ಜನರು ಅವಲಂಬಿಸಿದ್ದಾರೆ. ಆದ್ದರಿಂದ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಬೇಕು ಎಂದು ಕೋರಿದ್ದರು.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ












Click it and Unblock the Notifications