ಮಹಿಳೆಯರಿಗೆ ಶೇ 100ರಷ್ಟು ಮೀಸಲು ಆದೇಶ ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು, ಜನವರಿ 12: ಸೇನೆಯ ನರ್ಸಿಂಗ್ ಸೇವೆಯಲ್ಲಿ ಶೇಕಡಾ 100ರಷ್ಟು ಮಹಿಳೆಯರಿಗೆ ಮಾತ್ರ ಅವಕಾಶ ಕಲ್ಪಿಸಿದ್ದ ಕ್ರಮವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಇದರಿಂದಾಗಿ ಬ್ರಿಟಿಷ್ ಕಾಲದ ಕಾನೂನಿನ ಒಂದು ಭಾಗವನ್ನು ರದ್ದು ಮಾಡಿರುವುದರಿಂದ ಸೇನೆಯ ನರ್ಸಿಂಗ್ನಲ್ಲಿ ಪುರುಷರಿಗೂ ಅವಕಾಶ ಸಿಗುವ ದಿನಗಳು ಹತ್ತಿರವಾಗಿವೆ. ಅಲ್ಲದೆ, ಭಾರತೀಯ ಮಿಲಿಟರಿ ನರ್ಸಿಂಗ್ ಸೇವೆಗಳ ಸುಗ್ರೀವಾಜ್ಞೆ 1943ರ ಸೆಕ್ಷನ್ 6 ರಲ್ಲಿದ್ದ ಮಹಿಳೆಯಾಗಿದ್ದರೆ ಎಂಬ ಪದವನ್ನು ಅಸಾಂವಿಧಾನಿಕ ಎಂದು ನ್ಯಾಯಾಲಯ ಹೇಳಿದೆ.
ಹುಬ್ಬಳ್ಳಿಯ ಕೆಎಲ್ಇ ನರ್ಸಿಂಗ್ ಸಂಸ್ಥೆಯ ಪ್ರಾಂಶುಪಾಲ ಹಾಗೂ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಸಂಜಯ್ ಎಂ. ಪೀರಾಪುರ, ಕರ್ನಾಟಕ ಶುಶ್ರೂಷಕರ ಸಂಘ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಪೀಠದಲ್ಲಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ವಾದ-ಪ್ರತಿವಾದ ಆಲಿಸಿದ ಬಳಿಕ ಮೀಸಲಾತಿ ನೀಡುವುದು ಸಂವಿಧಾನದ ಪರಿಚ್ಛೇಧ ಸಮಾನತೆ, ಲಿಂಗ ತಾರತಮ್ಯ ಹಾಗೂ ಜೀವ ಮತ್ತು ವ್ಯಕ್ತಿ ಸ್ವಾತಂತ್ರ್ಯದ ಹಕ್ಕು ಉಲ್ಲಂಘಿಸಿದಂತಾಗಲಿದೆ ಎಂದು ಅಭಿಪ್ರಾಯ ಪಟ್ಟು 21 ವರ್ಷಗಳ ಹಳೆಯ ಕಾನೂನನ್ನು ರದ್ದುಗೊಳಿಸಿದೆ.
ಅಲ್ಲದೆ, ಸಂವಿಧಾನದ ಅಡಿಯಲ್ಲಿ ಮಹಿಳೆಯನ್ನು ಪ್ರತ್ಯೇಕ ವರ್ಗವೆಂದು ಹೇಳಿರುವುದು ನ್ಯಾಯ ಸಮ್ಮತವಾಗಿದೆ. ಆದರೆ, ಈ ಆಶಯವನ್ನು ಈಡೇರಿಸುವುದಕ್ಕಾಗಿ ತಾರ್ಕಿಕವಲ್ಲದ ರೀತಿಯಲ್ಲಿ ಮಹಿಳೆಯರಿಗೆ ಶೇ100ರಷ್ಟು ಮೀಸಲಾತಿ ನೀಡಲಾಗದು ಮತ್ತು ಅದರಡಿ ರಕ್ಷಣೆ ಪಡೆಯಲು ಸಾಧ್ಯವಿಲ್ಲ ಎಂದು ಪೀಠ ತಿಳಿಸಿದೆ.
ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರು 1943ರಲ್ಲಿ ಸುಗ್ರೀವಾಜ್ಞೆಯನ್ನು ಜಾರಿ ಮಾಡಿದ್ದರು. ಅದನ್ನು ಸಂವಿಧಾನದ ಅಡಿಯಲ್ಲಿ ಅಳವಡಿಸಿಕೊಂಡು ರಾಷ್ಟ್ರಪತಿಗಳು ಒಪ್ಪಿಗೆ ನೀಡಿದ್ದಾರೆ. ಆದರೆ, ಈ ಕಾನೂನು ಸಂವಿಧಾನದ 33ನೇ ಪರಿಚ್ಛೇಧದಂತೆ ಸಂಸತ್ತು ಜಾರಿಗೆ ತಂದಿರುವ ಕಾನೂನನ್ನಾಗಿ ಪರಿಗಣಿಸಲಾಗುವುದಿಲ್ಲ ಎಂದು ಪೀಠ ತಿಳಿಸಿದೆ.
ಕೇಂದ್ರ ಸರ್ಕಾರದ ಪರ ವಕೀಲರು, ಅಧಿಸೂಚನೆಗೆ ಸಂಬಂಧಿಸಿದಂತೆ ನೇಮಕ ಪ್ರಕ್ರಿಯೆ ಪೂರ್ಣಗೊಂಡಿದೆ ಮತ್ತು ಅರ್ಜಿದಾರರ ಸಂಘದಲ್ಲಿ ಇಬ್ಬರಿಗೆ ಈಗಾಗಲೇ ವಯೋಮಿತಿ ಮೀರಿದೆ ಎಂದು ವಾದ ಮಂಡಿಸಿದ್ದರು.
ಪ್ರಕರಣದ ಹಿನ್ನಲೆ: 2010ರ ಫೆಬ್ರವರಿಯಲ್ಲಿ ನರ್ಸ್ಗಳ ನೇಮಕ ಸಂಬಂಧ ಭಾರತೀಯ ಸೇನೆ ಅಧಿಸೂಚನೆ ಹೊರಡಿಸಿತ್ತು. ಈ ಅಧಿಸೂಚನೆಯಲ್ಲಿ ಮಹಿಳೆಯರು ಮಾತ್ರ ಎಂದು ತಿಳಿಸಿತ್ತು.
ಅದನ್ನು ಪ್ರಶ್ನಿಸಿದ್ದ ಅರ್ಜಿದಾರರು, ಮಿಲಿಟರಿ ನರ್ಸಿಂಗ್ ಸೇವೆಗಳ ಸುಗ್ರೀವಾಜ್ಞೆ 1943ರ ಸೆಕ್ಷನ್ 6 ರಲ್ಲಿದ್ದ 'ಮಹಿಳೆಯಾಗಿದ್ದರೆ' ಎಂಬ ಪದವನ್ನು ಅಸಾಂವಿಧಾನಿಕ ಎಂದು ಘೋಷಣೆ ಮಾಡಬೇಕು ಎಂದು ಕೋರಿದ್ದರು.
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications