ನಿರ್ಮಾಪಕರ ವಿರುದ್ಧ ಸುದೀಪ್ ಹೂಡಿದ್ದ ಕೇಸ್ ರದ್ದಿಗೆ ಹೈಕೋರ್ಟ್ ನಕಾರ
ಬೆಂಗಳೂರು, ಮಾರ್ಚ್ 27: ತಮ್ಮ ವಿರುದ್ಧ ಅನಗತ್ಯ ಆರೋಪಗಳನ್ನು ಮಾಡಿದ್ದಾರೆಂದು ನಿರ್ಮಾಪಕರಾದ ಎನ್. ಎಂ. ಸುರೇಶ್ ಮತ್ತಿತರರ ವಿರುದ್ಧ ನಟ ಸುದೀಪ್ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.
ಹಾಗಾಗಿ ಎನ್. ಎಂ. ಸುರೇಶ್ ಹಾಗೂ ಕುಮಾರ್ ಅವರುಗಳು ಇದೀಗ ವಿಚಾರಣೆಯನ್ನು ಎದುರಿಸಲೇಬೇಕಿದೆ. ಅಷ್ಟೇ ಅಲ್ಲದೆ, ವಿಚಾರಣೆಯಲ್ಲಿ ಮಾನನಷ್ಟ ಆಗಿದೆ ಎಂಬುದು ದೃಢಪಟ್ಟರೆ ಅದಕ್ಕೆ ತಕ್ಕ ಬೆಲೆಯನ್ನೂ ತೆರಬೇಕಾಗುತ್ತದೆ.

ವಿಚಾರಣಾ ನ್ಯಾಯಾಲಯದಲ್ಲಿ ತಮ್ಮ ವಿರುದ್ಧ ನಡೆಯುತ್ತಿರುವ ಪ್ರಕರಣ ರದ್ದು ಕೋರಿ ನಿರ್ಮಾಪಕ ಎನ್. ಎಂ. ಸುರೇಶ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯಪೀಠ ವಜಾಗೊಳಿಸಿದೆ.
ವಾದ ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯ, "ದೂರು ಮತ್ತು ಅವರು ನೀಡಿರುವ ಸ್ವಯಂ ಹೇಳಿಕೆಯಲ್ಲಿ ಅಂಶಗಳನ್ನು ಗಮನಿಸಿದರೆ ಅರ್ಜಿದಾರರ ಹೇಳಿಕೆ ಅವಹೇಳನಕಾರಿಯಾಗಿದೆ ಮತ್ತು ಅದರಿಂದ ಸಮಾಜದಲ್ಲಿಅವರ ವರ್ಚಸ್ಸಿಗೆ ಧಕ್ಕೆ ಆಗಲಿದೆ. ಮೇಲ್ನೋಟಕ್ಕೆ ದೂರುದಾರರ ಅನಿಸಿಕೆ ಸರಿಯಾಗಿದೆ. ಹಾಗಾಗಿ ವಿಚಾರಣಾ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿರುವುದರಲ್ಲಿ ಯಾವುದೇ ಲೋಪವಿಲ್ಲ, ಸರಿಯಾಗಿಯೇ ಇದೆ" ಎಂದು ನ್ಯಾಯಾಲಯ ಹೇಳಿದೆ.
ಅರ್ಜಿದಾರರ ಪರ ವಕೀಲರು ವ್ಯಾಜ್ಯ ಇರುವುದು ದೂರುದಾರರು ಮತ್ತು ಒಂದನೇ ಪ್ರತಿವಾದಿ (ಎಂ. ಎನ್. ಕುಮಾರ್) ನಡುವೆ, ಇದರಲ್ಲಿಅನಗತ್ಯವಾಗಿ ತಮ್ಮ ಕಕ್ಷಿದಾರರನ್ನು ಸೇರಿಸಲಾಗಿದ್ದು, ಅವರು ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಪದಾಧಿಕಾರಿ ಹಾಗೂ ಚಲನಚಿತ್ರ ವಾಣಿಜ್ಯ ಮಂಡಳಿಯ ಕಾರ್ಯದರ್ಶಿ ಆಗಿರುವುದರಿಂದ ಅವರನ್ನು ಪ್ರತಿವಾದಿ ಮಾಡಲಾಗಿದೆ. ಹಾಗಾಗಿ ಅವರ ವಿರುದ್ಧದ ಪ್ರಕರಣ ರದ್ದುಗೊಳಿಸಬೇಕು ಎಂದು ಕೋರಿದ್ದರು.
ಪ್ರಕರಣದ ಹಿನ್ನೆಲೆ: ಕಳೆದ ವರ್ಷ ಸುದ್ದಿಗೋಷ್ಠಿಯಲ್ಲಿ ನಿರ್ಮಾಪಕರಾದ ಎಂ. ಎನ್. ಕುಮಾರ್, ಎನ್. ಎಂ. ಸುರೇಶ್ ಮತ್ತಿತರರು ನಟ ಸುದೀಪ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದರು ಮತ್ತು ಸಾಮಾಜಿಕ ಜಾಲತಾಣಗಳಲ್ಲಿಯೂ ಸಂದೇಶಗಳನ್ನು ಹರಿಯಬಿಟ್ಟಿದ್ದರು. ಆ ಹಿನ್ನೆಲೆಯಲ್ಲಿ ನಟ ಸುದೀಪ್ ನಿರ್ಮಾಪಕರ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಆ ಕುರಿತು ವಿಚಾರಣೆ ನಡೆಸಿದ್ದ ಬೆಂಗಳೂರಿನ 13ನೇ ಎಸಿಎಂಎಂ ಕೋರ್ಟ್, ಮೇಲ್ನೋಟಕ್ಕೆ ದೂರಿನಲ್ಲಿಸತ್ಯಾಂಶ ಇದೆ ಎಂದು ಮನಗಂಡು ಎನ್. ಎಂ. ಸುರೇಶ್ ಮತ್ತಿತರರ ನಿರ್ಮಾಪಕರಿಗೆ ಸಮನ್ಸ್ ಜಾರಿಗೊಳಿಸಿತ್ತು. ನಂತರ ಆರೋಪಿಗಳಿಬ್ಬರು ವಿಚಾರಣಾ ಕೋರ್ಟ್ನಲ್ಲಿಹಾಜರಾಗಿ ಜಾಮೀನು ಪಡೆದುಕೊಂಡಿದ್ದರರು. ಆದರೆ ಸಮನ್ಸ್ ರದ್ದು ಕೋರಿ ನಿರ್ಮಾಪಕ ಎನ್. ಎಂ. ಸುರೇಶ್ ಹೈಕೋರ್ಟ್ ಮೊರೆ ಹೋಗಿದ್ದರು.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications