ನಿಷೇಧಿತ ಐಎಸ್ಐಎಸ್ ಸಂಘಟನೆ ಜೊತೆ ನಂಟು ಹೊಂದಿದ್ದ ವ್ಯಕ್ತಿಗೆ ಜಾಮೀನು ನಿರಾಕರಣೆ
ಬೆಂಗಳೂರು, ಏ.16. ನಿಷೇಧಿತ ಐಸಿಎಸ್ ಸಂಘಟನೆ ಜೊತೆ ನಂಟು ಹೊಂದಿದ್ದ ಸೌದಿ ಅರೇಬಿಯಾ ಮೂಲದ ಜುಹಾಬ್ ಹಮೀದ್ ಶಕೀಲ್ ಮನ್ನಾ @ ಜೋಹಿಬ್ ಮನ್ನಾ ಎಂಬ ವ್ಯಕ್ತಿಗೆ ಹೈಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ.
ಜುಹಾಬ್ ಜಾಮೀನು ಅರ್ಜಿಯನ್ನು ಆಲಿಸಿದ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠದ ಜಾಮೀನು ನಿರಾಕರಿಸಿರುವ ಅಧೀನ ನ್ಯಾಯಾಲಯದ ಆದೇಶ ಸರಿ ಇದೆ ಎಂದು ಹೇಳಿದೆ.
ಆರೋಪಿ ಇರಾಕ್ ಮತ್ತು ಸಿರಿಯಾದಲ್ಲಿ ಐಸಿಸ್ ಸಂಘಟನೆಗೆ ಮುಸ್ಲಿಂ ಯುವಕರನ್ನು ಪ್ರಚೋದನೆ ಮಾಡಿ ಸೇರಿಸಿ ಅವರ ಜೊತೆ ಅಪರಾಧಿಕ ಪಿತೂರಿಗಳನ್ನು ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ.

ಕೋರ್ಟ್ ಆದೇಶವೇನು? ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಪೀಠ "ಸಿಆರ್ ಪಿಸಿ ಸೆಕ್ಷನ್ 43 ಡಿ ಅನ್ವಯ ಎಸ್ ಪಿಪಿ ಹೇಳಿಕೆ ಆಧರಿಸಿ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸುವ ಅಧೀನ ನ್ಯಾಯಾಲಯದ ಆದೇಶ ಸರಿ ಇದೆ, ಅದರಲ್ಲಿ ಹಸ್ತಕ್ಷೇಪ ಅಥವಾ ಮಧ್ಯಪ್ರವೇಶ ಮಾಡುವ ಅಗತ್ಯವಿಲ್ಲ'' ಎಂದು ಹೇಳಿದೆ.
ತನಿಖಾಧಿಕಾರಿಯ ವಿಚಾರಣೆ ವೇಳೆ ಆರೋಪಿ ಇನ್ನೂ ಹೆಚ್ಚಿನ ಪಿತೂರಿಯಲ್ಲಿ ತೊಡಗಿದ್ದಾನೆ ಎಂಬುದು ಕಂಡು ಬಂದರೆ, ಅಂತಹ ಸಂದರ್ಭದಲ್ಲಿ ತನಿಖಾಧಿಕಾರಿ ಎಸ್ ಪಿಪಿ ಮೂಲಕ ಅರ್ಜಿ ಸಲ್ಲಿಸಿ ಸೆಕ್ಷನ್ 43ಡಿ(2)(ಬಿ) ಅಡಿ ನ್ಯಾಯಾಂಗ ಬಂಧನ ಅವಧಿಯಲ್ಲಿ 180 ದಿನಗಳಿಗೆ ವಿಸ್ತರಿಸಲು ಅರ್ಜಿ ಸಲ್ಲಿಸಬಹುದು. ಈ ಪ್ರಕರಣದಲ್ಲೂ ಅದೇ ಆಗಿದೆ, ಎನ್ ಐಎ ಮನವಿಯನ್ನು ಮಾನ್ಯ ಮಾಡಿದೆ. ಇದರಲ್ಲಿ ಯಾವುದೇ ಲೋಪವಾಗಿಲ್ಲ ಎಂದು ನ್ಯಾಯಾಲಯ ಆದೇಶಿಸಿದೆ.
ಅಧೀನ ನ್ಯಾಯಾಲಯ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಿರುವುದರಲ್ಲಿ ಯಾವುದೇ ತಪ್ಪಾಗಿಲ್ಲ ಎಂದು ನ್ಯಾಯಪೀಠ ಹೇಳಿದೆ.
ಪ್ರಕರಣದ ಹಿನ್ನೆಲೆ:
ಅರ್ಜಿದಾರರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 120ಬಿ, 125 ಮತ್ತು ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯಿದೆ (ಯುಎಪಿಎ) 1967 ಸೆಕ್ಷನ್ 17, 18 ಮತ್ತು 18 ಬಿ ಅಡಿಯಲ್ಲಿ ಆರೋಪ ಹೊರಿಸಲಾಗಿತ್ತು. ಆತ ಜೀವನೋಪಾಯಕ್ಕಾಗಿ ಕುಟುಂಬದೊಂದಿಗೆ ಸೌದಿ ಅರೇಬಿಯಾದಲ್ಲಿ ನೆಲೆಸಿದ್ದನು.
ಆತನನ್ನು ಭಾರತಕ್ಕೆ ಗಡಿಪಾರಾಗುವ 13 ತಿಂಗಳು ಮುನ್ನ 2020ರ ಅ.5ರಂದು ಸೌದಿ ಅರೇಬಿಯಾದಲ್ಲಿ ಎನ್ ಐಎ ಬಂಧಿಸಿತ್ತು. 2021ರ ನ.11ರಂದು ಅವರ ಇಡೀ ಕುಟುಂಬವನ್ನು ಭಾರತಕ್ಕೆ ಗಡಿಪಾರು ಮಾಡಲಾಗಿತ್ತು.
ಆನಂತರ ಆತನ ವಿರುದ್ಧ ವಿಚಾರಣೆ ನಡೆಸಿದಾಗ ಆತ ಐಸಿಎಸ್ ಸಂಘಟನೆ ಜೊತೆ ನುಂಟು ಹೊಂದಿರುವುದು ಮತ್ತು ಅದಕ್ಕೆ ಮುಸ್ಲಿಂ ಯುವಕರನ್ನು ಸೇರಿಸುವ ಕೆಲಸ ಮಾಡುತ್ತಿದ್ದನೆಂಬುದು ಕಂಡು ಬಂದಿದೆ. ಸಂಘರ್ಷ ಪೀಡಿತ ಸಿರಿಯಾದಲ್ಲಿ ಐಸಿಎಸ್ ಸಂಘಟನೆಗೆ ಹಣ ಸಂಗ್ರಹಿಸಲು ಅಗ್ಗಾಗ್ಗೆ ಪ್ರಯಾಣ ಬೆಳೆಸುತ್ತಿದ್ದ ಎನ್ನಲಾಗಿದೆ. ಆತನ ನ್ಯಾಯಾಂಗ ಬಂಧನ ಅವಧಿ 90 ದಿನಗಳಿಗೆ ಮುಕ್ತಾಯವಾಗಿತ್ತು, ಆದರೆ ಎನ್ ಐಎ ಮನವಿ ಮೇರೆಗೆ ಆ ಅವಧಿಯನ್ನು 180 ದಿನ ವಿಸ್ತರಣೆ ಮಾಡಲಾಗಿತ್ತು.
ಅದನ್ನು ಪ್ರಶ್ನಿಸಿ ಆತ ನ್ಯಾಯಾಲಯದ ಮೊರೆ ಹೋಗಿದ್ದನು. 90 ದಿನಗಳ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ತನಗೆ ಸಹಜವಾಗಿಯೇ ಜಾಮೀನು ಮಂಜೂರು ಮಾಡಬೇಕೆಂದು ಆತ ನ್ಯಾಯಾಲಯದ ಮೆಟ್ಟಿಲೇರಿದ್ದನು.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications