ಟ್ವಿಟರ್ ಗೆ ದಂಡ ಆದೇಶಕ್ಕೆ ತಡೆ: ಆದ್ರೆ 25 ಲಕ್ಷ ಠೇವಣಿಗೆ ಸೂಚನೆ
ಬೆಂಗಳೂರು, ಆಗಸ್ಟ್ 11: ಕೆಲವು ಖಾತೆಗಳನ್ನು ನಿರ್ಬಂಧಿಸಿದ್ದ ವಿಚಾರದಲ್ಲಿ ಕೇಂದ್ರದ ಕ್ರಮ ಪ್ರಶ್ನಿಸಿದ್ದ ಹೆಸರಾಂತ ಸಾಮಾಜಿಕ ಜಾಲತಾಣ ಟ್ವಿಟರ್ಗೆ 50 ಲಕ್ಷ ದಂಡ ವಿಧಿಸಿದ್ದ ಏಕ ಸದಸ್ಯಪೀಠದ ಆದೇಶಕ್ಕೆ ವಿಭಾಗೀಯ ಪೀಠದಿಂದ ತಡೆ ಸಿಕ್ಕಿದೆ. ಆದರೆ, ದಂಡದ ಒಟ್ಟು ಮೊತ್ತದಲ್ಲಿ ಶೇ. 50ರಷ್ಟು ಅಂದರೆ 25 ಲಕ್ಷ ರೂ. ಠೇವಣಿ ಇಡುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ. ಹಾಗಾಗಿ ಟ್ವಿಟರ್ ಸದ್ಯಕ್ಕೆ ನಿರಾಳವಾಗಿದೆ.
ಕೆಲ ವೈಯಕ್ತಿಕ ಖಾತೆಗಳ ನಿರ್ಬಂಧ ಪ್ರಶ್ನಿಸಿದ್ದ ಎಕ್ಸ್ ಕಾರ್ಪ್(ಟ್ವಿಟರ್)ಸಂಸ್ಥೆಗೆ ಹೈಕೋರ್ಟ್ನ ಏಕಸದಸ್ಯ ಪೀಠ ವಿಧಿಸಿದ್ದ 50 ಲಕ್ಷ ರೂ.ಗಳ ದಂಡದ ಆದೇಶಕ್ಕೆ ಮುಂದಿನ ವಿಚಾರಣೆವರೆಗೂ ದ್ವಿಸದಸ್ಯ ಪೀಠ ತಡೆ ನೀಡಿ ಆದೇಶಿಸಿದೆ. ಅಲ್ಲದೆ, ಟ್ವಿಟ್ಟರ್ ತನ್ನ ನಂಬಿಕೆಯನ್ನು ಉಳಿಸಿಕೊಳ್ಳುವುದಕ್ಕಾಗಿ ದಂಡದ ಒಟ್ಟು ಮೊತ್ತದಲ್ಲಿ ಶೇ. 50 ರಷ್ಟು (25 ಲಕ್ಷ ರೂ.) ಮುಂದಿನ ಒಂದು ವಾರದಲ್ಲಿ (ಠೇವಣಿ) ಪಾವತಿಸಲು ನಿರ್ದೇಶನ ನೀಡಿದೆ.

ಕೆಲವು ವೈಯಕ್ತಿಕ ಖಾತೆಗಳಿಗೆ ನಿರ್ಬಂಧ ವಿಧಿಸಿದ್ದ ಕೇಂದ್ರ ಸರ್ಕಾರದ ಕ್ರಮ ಎತ್ತಿಹಿಡಿದಿದ್ದ ಏಕಸದಸ್ಯಪೀಠದ ಆದೇಶ ಪ್ರಶ್ನಿಸಿ ಟ್ವಿಟರ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂತಿ ಪ್ರಸನ್ನ ಬಾಲಂಚದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ. ಜೆ. ಎಸ್. ಕಮಲ್ ಅವರಿದ್ದ ದ್ವಿಸದಸ್ಯ ಪೀಠ ಈ ಆದೇಶ ನೀಡಿದೆ. ಅಲ್ಲದೆ, ಪಾವತಿಸಬಹುದಾದ ಶೇ. 50 ರಷ್ಟು ಮೊತ್ತವನ್ನು ದಂಡವನ್ನಾಗಿ ಪರಿಗಣಿಸಲಾಗುವುದಿಲ್ಲ. ಆದರೆ, ಮೇಲ್ಮನವಿದಾರರ ಪರವಾಗಿ (ಎಕ್ಸ್ ಕಾರ್ಪ್) ಇರಲಿದೆ ಎಂದು ತಿಳಿಸಿದೆ.
ಅಲ್ಲದೆ, ತಡೆಯಾಜ್ಞೆಯನ್ನು ತೆರವು ಗೊಳಿಸುವುದಕ್ಕಾಗಿ ಕೇಂದ್ರ ಸರ್ಕಾರ ಆಕ್ಷೇಪಣೆಗಳನ್ನು ಮುಂದಿನ ದಿನಾಂಕದ ವೇಳೆಗೆ ಸಲ್ಲಿಸಬೇಕು ಎಂದು ಪೀಠ ತಿಳಿಸಿದೆ. ಜತೆಗೆ, ಎಕ್ಸ್ ಕಾರ್ಪ್ ಸಂಸ್ಥೆ ಟ್ವಿಟರ್ನ ಕೆಲ ಖಾತೆಗಳನ್ನು ನಿರ್ಬಂಧ ವಿಧಿಸುವಂತೆ ಸಕ್ಷಮ ಪ್ರಾಧಿಕಾರ ಸೂಚನೆಯನ್ನು ಉಲ್ಲಂಘಿಸಿ ದೇಶದ ಕಾನೂನಿಗೆ ಅಗೌರವ ತೋರಿದ್ದು, ಯಾವುದೇ ಖಾತೆಯನ್ನು ನಿರ್ಬಂದಿಸದೇ ನಿರ್ಲಕ್ಷ್ಯ ಮಾಡಿದೆ ಎಂದು ಪೀಠ ಹೇಳಿತು.
ಆರ್ಜಿದಾರರ ವಾದವೇನು?; ಅರ್ಜಿದಾರರ ಪರ ವಕೀಲರು, ಕೇಂದ್ರ ಸರ್ಕಾರದ ಆದೇಶವನ್ನು ಪಾಲಿಸಲಾಗಿದೆ ಎಂದು ಏಕ ಸದಸ್ಯ ಪೀಠಕ್ಕೆ ತಿಳಿಸಲಾಗಿದೆ ಎಂದು ವಿವರಿಸಿದರು. ಮೇಲ್ಮನವಿ ಅರ್ಜಿಗೆ ಆಕ್ಷೇಪಣೆ ವ್ಯಕ್ತ ಪಡಿಸಿದ ಕೇಂದ್ರ ಸರ್ಕಾರದ ಪರ ವಕೀಲರು, ಅರ್ಜಿ ವಿಚಾರಣೆಗೆ ಅರ್ಹವಿಲ್ಲ ವಜಾಗೊಳಿಸಬೇಕು ಎಂದು ಮನವಿ ಮಾಡಿದರು,
ಅದಕ್ಕೆ ನ್ಯಾಯಪೀಠ, ನಿರ್ಬಂಧ ವಿಧಿಸಿರುವ ಖಾತೆದಾರರ ಪರವಾಗಿ ಎಕ್ಸ್ ಕಾರ್ಪ್ ಸಂಸ್ಥೆ ಅರ್ಜಿ ಸಲ್ಲಿಸಿದೆ. ಇತರರ ಬೇಡಿಕೆ ಪೂರೈಕೆ ಮಾಡಲು ಅರ್ಜಿದಾರ ಸಂಸ್ಥೆ ಮುಂದಾಗಿದೆ ಎಂಬ ಕೇಂದ್ರದ ವಾದವನ್ನು ಏಕಸದಸ್ಯ ಪೀಠ ತಿರಸ್ಕರಿಸಿದ್ದು, ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಿದೆ.
ಅಲ್ಲದೆ, ಎಕ್ಸ್ ಕಾರ್ಪ್ ಸಂಸ್ಥೆ ಒಂದು ಅಂಗಡಿಯಿದ್ದಂತೆ, ಅಂಗಡಿಯಲ್ಲಿ ಎಲ್ಲ ರೀತಿಯ ಉತ್ಪನ್ನಗಳಿರುತ್ತವೆ. ನಿಮಗೆ ಇಷ್ಟವಿಲ್ಲದ ವಸ್ತುಗಳು ಮಾರಾಟ ಮಾಡುವುದಕ್ಕೆ ಆಕ್ಷೇಪ ಮಾಡಬಹುದು. ಅಂಗಡಿ ಮುಚ್ಚಲಾಗುವುದಿಲ್ಲ. ಅಂಗಡಿಯಲ್ಲಿ ಕಳಪೆ ಗುಣಮಟ್ಟದ ಉತ್ಪನ್ನಗಳಿದ್ದರೆ ಆಕ್ಷೇಪ ಮಾಡಬಹುದೇ ವಿನಾ ಅಂಗಡಿ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಅವಕಾಶವಿಲ್ಲ ಎಂದು ತಿಳಿಸಿತು.
ಏಕ ಸದಸ್ಯ ಪೀಠದ ಆದೇಶ ದಂಡ ವಿಧಿಸಿರುವುದು ಅತ್ಯಂತ ಹೆಚ್ಚು ಪ್ರಮಾಣದ್ದಾಗಿದೆ. ಅಲ್ಲದೆ, ಅನ್ಯಾಯದ ಆದೇಶವಾಗಿದೆ. ಜತೆಗೆ, ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್ 69 ಎ (ಅಂತರ್ಜಾಲವದಲ್ಲಿನ ಕೆಲ ಅಂಶಗಳನ್ನು ನಿರ್ಬಂಧಿಸುವುದು)ನ್ನು ರದ್ದುಪಡಿಸಬೇಕು ಎಕ್ಸ್ ಕಾರ್ಪ್ ಏಕ ಸದಸ್ಯ ಪೀಠದಲ್ಲಿ ಕೋರಿತ್ತು. ಇದನ್ನು ವಜಾಗೊಳಿಸಿದ್ದ ಏಕ ಸದಸ್ಯ ಪೀಠ 50 ಲಕ್ಷ ದಂಡ ವಿಧಿಸಿತ್ತು.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications