ಮುರುಘಾ ಸ್ವಾಮೀಜಿ ವಿರುದ್ಧದ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್
ಬೆಂಗಳೂರು, ನವೆಂಬರ್ 22: ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯಡಿ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಸ್ವಾಮೀಜಿ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಇದರಿಂದಾಗಿ ಚಿತ್ರದುರ್ಗ ಜಿಲ್ಲಾ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರ ಮುಂದಿರುವ ಪ್ರಕರಣಗಳ ವಿಚಾರಣೆಗೆ ಬ್ರೇಕ್ ಬಿದ್ದಿದೆ.
ಸ್ವಾಮೀಜಿ ಸಲ್ಲಿಸಿದ್ದ ನಾಲ್ಕು ಅರ್ಜಿಗಳನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ ಈ ಆದೇಶ ನೀಡಿತು. ಚಿತ್ರದುರ್ಗ ಜಿಲ್ಲಾ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರ ಮುಂದಿರುವ ಶರಣರ ವಿರುದ್ಧದ ಪ್ರಕರಣಗಳ ಕಡತಗಳನ್ನು ತರಿಸಿಕೊಂಡು ಪರಿಶೀಲಿಸಿ ವರದಿ ಸಲ್ಲಿಸುವಂತೆ ರಿಜಿಸ್ಟ್ರಾರ್ ಜನರಲ್ ಅವರಿಗೆ ನಿರ್ದೇಶನ ನೀಡಿತು.

ಅಂತೆಯೇ ಸ್ಥಳೀಯ ಪಬ್ಲಿಕ್ ಪ್ರಾಸಿಕ್ಯೂಟರ್ ವಿರುದ್ಧ ಇಲಾಖಾ ತನಿಖೆ ನಡೆಸುವಂತೆ ರಾಜ್ಯ ಪಬ್ಲಿಕ್ ಪ್ರಾಸಿಕ್ಯೂಟರ್ಗೆ ಆದೇಶಿಸಿತು. ನಾಲ್ಕೂ ಅರ್ಜಿಗಳ ವಿಲೇವಾರಿ ಆಗುವತನಕ ಅವುಗಳ ಮುಂದಿನ ವಿಚಾರಣೆಗೆ ತಡೆ ನೀಡಿತು.
ನ್ಯಾಯಪೀಠ ಅರ್ಜಿದಾರರ ವಾದ ಆಲಿಸಿದ ಬಳಿಕ, "ಜಿಲ್ಲಾ ನ್ಯಾಯಾಧೀಶರು ಪ್ರಾಸಿಕ್ಯೂಟರ್ ಸಲ್ಲಿಸಿದ ಮೆಮೊ ಅನ್ನು ಕಣ್ಣು ಮುಚ್ಚಿ ಅಂಗೀಕರಿಸಿದ್ದಾರೆ. ಆರೋಪಿಯನ್ನು ಬಿಡುಗಡೆ ಮಾಡಿದ ಜೈಲು ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಿದ್ದಾರೆ. ಹೈಕೋರ್ಟ್ ಆದೇಶವನ್ನು ಪಾಲಿಸಿದೇ ಇರುವ ಅವರ ಈ ಕ್ರಮ ಸರಿಯಲ್ಲ. ಹೈಕೋರ್ಟ್ ಆದೇಶದ ಬಗ್ಗೆ ಅವರು ತಮ್ಮ ಅಜ್ಞಾನವನ್ನು ಪ್ರದರ್ಶಿಸಿದ್ದಾರೆ. ಸಾಲು ಸಾಲಾಗಿ ತಪ್ಪುಗಳನ್ನು ಮಾಡಿದ್ದಾರೆ" ಎಂದು ಅಸಮಾಧಾನ ವ್ಯಕ್ತಪಡಿಸಿತು.
ಆರೋಪಿ ಯಾರೇ ಅಗಿರಲಿ ನಮಗದು ಮುಖ್ಯವಲ್ಲ. ಆರೋಪಿಯನ್ನು ತರಾತುರಿಯಲ್ಲಿ ಬಂಧಿಸಿದ ಕ್ರಮ ಸರಿಯಲ್ಲ. ಹೈಕೋರ್ಟ್ ಆದೇಶ ನಿಷ್ಫಲಗೊಳಿಸುವ ಯತ್ನವನ್ನು ಒಪ್ಪಲಾಗುವುದಿಲ್ಲ ಎಂದು ಹೇಳಿತು.
ಪೂರ್ವಾಗ್ರಹ ಪೀಡಿತರೆಂದು ಆರೋಪ: ಸ್ವಾಮೀಜಿ ಪರ ಹಾಜರಾಗಿದ್ದ ಹಿರಿಯ ವಕೀಲರು "ಈ ಪ್ರಕರಣದ ವಿಚಾರಣೆಯಲ್ಲಿ ಜಿಲ್ಲಾ ನ್ಯಾಯಾಧೀಶರು ಪೂರ್ವಗ್ರಹ ಪೀಡಿತ ಮನೋಭಾವದಿಂದ ವರ್ತಿಸುತ್ತಿದ್ದಾರೆ. ಹೈಕೋರ್ಟ್ ಜಾಮೀನು ನೀಡಿದರೂ ತಕ್ಷಣವೇ ಆರೋಪಿಯ ಬಿಡುಗಡೆಗೆ ಆದೇಶಿಸಲಿಲ್ಲ. ಇದರಿಂದಾಗಿ ಶರಣರು ಮೂರು ದಿನಗಳ ಕಾಲ ಜೈಲಿನಲ್ಲಿ ಇರಬೇಕಾಯ್ತು" ಎಂದರು.
"ವಿಚಾರಣೆ ಮುಂದೂಡುವಂತೆ ಹೈಕೋರ್ಟ್ ಆದೇಶ ಇದ್ದರೂ ವಿಚಾರಣೆ ನಡೆಸಲಾಗಿದೆ. ಚಿತ್ರದುರ್ಗಕ್ಕೆ ಬರದಂತೆ ಹೈಕೋರ್ಟ್ ಷರತ್ತು ವಿಧಿಸಿದ್ದರೂ ವಾರಂಟ್ ಮೂಲಕ ಅವರನ್ನು ಚಿತ್ರದುರ್ಗ ಜಿಲ್ಲೆಗೆ ಕರೆತರುವಂತೆ ಆದೇಶಿಸಿದ್ದಾರೆ. ಪಾಸ್ ಪೋರ್ಟ್ ವಶಕ್ಕೆ ನೀಡಿದಾಗಲೂ ಅದರ ಪರಿಶೀಲನೆಗೆ ಕಳುಹಿಸಿದ್ದಾರೆ. ಹೈಕೋರ್ಟ್ ಆದೇಶ ವಿಫಲಗೊಳಿಸಲು ಬಂಧನಕ್ಕೆ ಆದೇಶಿಸಿದ್ದಾರೆ. ಹೀಗಾಗಿ, ಸಾಕ್ಷ್ಯಗಳ ವಿಚಾರಣೆಯನ್ನು ಬೇರೆ ಕೋರ್ಟ್ಗೆ ವರ್ಗಾಯಿಸಲು ಆದೇಶಿಸಬೇಕು" ಎಂದು ಮನವಿ ಮಾಡಿದರು.
-
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್












Click it and Unblock the Notifications