ಮುರುಘಾ ಸ್ವಾಮೀಜಿ ವಿರುದ್ಧದ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್
ಬೆಂಗಳೂರು, ನವೆಂಬರ್ 22: ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯಡಿ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಸ್ವಾಮೀಜಿ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಇದರಿಂದಾಗಿ ಚಿತ್ರದುರ್ಗ ಜಿಲ್ಲಾ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರ ಮುಂದಿರುವ ಪ್ರಕರಣಗಳ ವಿಚಾರಣೆಗೆ ಬ್ರೇಕ್ ಬಿದ್ದಿದೆ.
ಸ್ವಾಮೀಜಿ ಸಲ್ಲಿಸಿದ್ದ ನಾಲ್ಕು ಅರ್ಜಿಗಳನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ ಈ ಆದೇಶ ನೀಡಿತು. ಚಿತ್ರದುರ್ಗ ಜಿಲ್ಲಾ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರ ಮುಂದಿರುವ ಶರಣರ ವಿರುದ್ಧದ ಪ್ರಕರಣಗಳ ಕಡತಗಳನ್ನು ತರಿಸಿಕೊಂಡು ಪರಿಶೀಲಿಸಿ ವರದಿ ಸಲ್ಲಿಸುವಂತೆ ರಿಜಿಸ್ಟ್ರಾರ್ ಜನರಲ್ ಅವರಿಗೆ ನಿರ್ದೇಶನ ನೀಡಿತು.

ಅಂತೆಯೇ ಸ್ಥಳೀಯ ಪಬ್ಲಿಕ್ ಪ್ರಾಸಿಕ್ಯೂಟರ್ ವಿರುದ್ಧ ಇಲಾಖಾ ತನಿಖೆ ನಡೆಸುವಂತೆ ರಾಜ್ಯ ಪಬ್ಲಿಕ್ ಪ್ರಾಸಿಕ್ಯೂಟರ್ಗೆ ಆದೇಶಿಸಿತು. ನಾಲ್ಕೂ ಅರ್ಜಿಗಳ ವಿಲೇವಾರಿ ಆಗುವತನಕ ಅವುಗಳ ಮುಂದಿನ ವಿಚಾರಣೆಗೆ ತಡೆ ನೀಡಿತು.
ನ್ಯಾಯಪೀಠ ಅರ್ಜಿದಾರರ ವಾದ ಆಲಿಸಿದ ಬಳಿಕ, "ಜಿಲ್ಲಾ ನ್ಯಾಯಾಧೀಶರು ಪ್ರಾಸಿಕ್ಯೂಟರ್ ಸಲ್ಲಿಸಿದ ಮೆಮೊ ಅನ್ನು ಕಣ್ಣು ಮುಚ್ಚಿ ಅಂಗೀಕರಿಸಿದ್ದಾರೆ. ಆರೋಪಿಯನ್ನು ಬಿಡುಗಡೆ ಮಾಡಿದ ಜೈಲು ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಿದ್ದಾರೆ. ಹೈಕೋರ್ಟ್ ಆದೇಶವನ್ನು ಪಾಲಿಸಿದೇ ಇರುವ ಅವರ ಈ ಕ್ರಮ ಸರಿಯಲ್ಲ. ಹೈಕೋರ್ಟ್ ಆದೇಶದ ಬಗ್ಗೆ ಅವರು ತಮ್ಮ ಅಜ್ಞಾನವನ್ನು ಪ್ರದರ್ಶಿಸಿದ್ದಾರೆ. ಸಾಲು ಸಾಲಾಗಿ ತಪ್ಪುಗಳನ್ನು ಮಾಡಿದ್ದಾರೆ" ಎಂದು ಅಸಮಾಧಾನ ವ್ಯಕ್ತಪಡಿಸಿತು.
ಆರೋಪಿ ಯಾರೇ ಅಗಿರಲಿ ನಮಗದು ಮುಖ್ಯವಲ್ಲ. ಆರೋಪಿಯನ್ನು ತರಾತುರಿಯಲ್ಲಿ ಬಂಧಿಸಿದ ಕ್ರಮ ಸರಿಯಲ್ಲ. ಹೈಕೋರ್ಟ್ ಆದೇಶ ನಿಷ್ಫಲಗೊಳಿಸುವ ಯತ್ನವನ್ನು ಒಪ್ಪಲಾಗುವುದಿಲ್ಲ ಎಂದು ಹೇಳಿತು.
ಪೂರ್ವಾಗ್ರಹ ಪೀಡಿತರೆಂದು ಆರೋಪ: ಸ್ವಾಮೀಜಿ ಪರ ಹಾಜರಾಗಿದ್ದ ಹಿರಿಯ ವಕೀಲರು "ಈ ಪ್ರಕರಣದ ವಿಚಾರಣೆಯಲ್ಲಿ ಜಿಲ್ಲಾ ನ್ಯಾಯಾಧೀಶರು ಪೂರ್ವಗ್ರಹ ಪೀಡಿತ ಮನೋಭಾವದಿಂದ ವರ್ತಿಸುತ್ತಿದ್ದಾರೆ. ಹೈಕೋರ್ಟ್ ಜಾಮೀನು ನೀಡಿದರೂ ತಕ್ಷಣವೇ ಆರೋಪಿಯ ಬಿಡುಗಡೆಗೆ ಆದೇಶಿಸಲಿಲ್ಲ. ಇದರಿಂದಾಗಿ ಶರಣರು ಮೂರು ದಿನಗಳ ಕಾಲ ಜೈಲಿನಲ್ಲಿ ಇರಬೇಕಾಯ್ತು" ಎಂದರು.
"ವಿಚಾರಣೆ ಮುಂದೂಡುವಂತೆ ಹೈಕೋರ್ಟ್ ಆದೇಶ ಇದ್ದರೂ ವಿಚಾರಣೆ ನಡೆಸಲಾಗಿದೆ. ಚಿತ್ರದುರ್ಗಕ್ಕೆ ಬರದಂತೆ ಹೈಕೋರ್ಟ್ ಷರತ್ತು ವಿಧಿಸಿದ್ದರೂ ವಾರಂಟ್ ಮೂಲಕ ಅವರನ್ನು ಚಿತ್ರದುರ್ಗ ಜಿಲ್ಲೆಗೆ ಕರೆತರುವಂತೆ ಆದೇಶಿಸಿದ್ದಾರೆ. ಪಾಸ್ ಪೋರ್ಟ್ ವಶಕ್ಕೆ ನೀಡಿದಾಗಲೂ ಅದರ ಪರಿಶೀಲನೆಗೆ ಕಳುಹಿಸಿದ್ದಾರೆ. ಹೈಕೋರ್ಟ್ ಆದೇಶ ವಿಫಲಗೊಳಿಸಲು ಬಂಧನಕ್ಕೆ ಆದೇಶಿಸಿದ್ದಾರೆ. ಹೀಗಾಗಿ, ಸಾಕ್ಷ್ಯಗಳ ವಿಚಾರಣೆಯನ್ನು ಬೇರೆ ಕೋರ್ಟ್ಗೆ ವರ್ಗಾಯಿಸಲು ಆದೇಶಿಸಬೇಕು" ಎಂದು ಮನವಿ ಮಾಡಿದರು.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ












Click it and Unblock the Notifications