ತಕ್ಷಣ ಮುಷ್ಕರ ನಿಲ್ಲಿಸಿ, ವೈದ್ಯರಿಗೆ ಹೈಕೋರ್ಟ್ ಸೂಚನೆ
Recommended Video

ಬೆಂಗಳೂರು, ನವೆಂಬರ್ 16 : ಖಾಸಗಿ ಆಸ್ಪತ್ರೆಗಳ ವೈದ್ಯರು ತಕ್ಷಣದಿಂದಲೇ ಮುಷ್ಕರವನ್ನು ನಿಲ್ಲಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ.
ವೈದ್ಯರು ನಡೆಸುತ್ತಿರುವ ಪ್ರತಿಭಟನೆ ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಈ ಸೂಚನೆ ನೀಡಿದೆ.

ವಕೀಲ ಎನ್.ಪಿ.ಅಮೃತೇಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್.ಜಿ.ರಮೇಶ್, ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರ ವಿಭಾಗೀಯ ಪೀಠ ಗುರುವಾರ ಮಧ್ಯಾಹ್ನ ಈ ಸೂಚನೆ ಕೊಟ್ಟಿದೆ.
ಒಂದು ದಿನದ ಕಾಲಾವಕಾಶ ಕೇಳಿದ ಖಾಸಗಿ ವೈದ್ಯರ ಪರ ವಕೀಲರ ಮನವಿಯನ್ನು ಕೋರ್ಟ್ ತಳ್ಳಿ ಹಾಕಿತು. ತಕ್ಷಣ ಕರ್ತವ್ಯಕ್ಕೆ ಹಾಜರಾಗಿ, ನಿಮ್ಮ ಸಮಸ್ಯೆ ಬಗ್ಗೆ ನಂತರ ಗಮನ ಹರಿಸೋಣ ಎಂದು ನ್ಯಾಯಾಲಯ ಹೇಳಿತು.
In Pics : ವೈದ್ಯರ ಮುಷ್ಕರದಿಂದ ರೋಗಿಗಳ ನೀಗದ ಸಂಕಷ್ಟ
ಸರ್ಕಾರ ಸೂಕ್ತ ನಿರ್ಧಾರವನ್ನು ಕೈಗೊಳ್ಳದಿದ್ದರೆ ನ್ಯಾಯಲಯವೇ ಮುಂದಿನ ತೀರ್ಮಾನವನ್ನು ಕೈಗೊಳ್ಳುತ್ತದೆ ಎಂದು ಹೇಳಿದ ಕೋರ್ಟ್, ಶುಕ್ರವಾರ ಬೆಳಗ್ಗೆ 10.30ಕ್ಕೆ ಅರ್ಜಿಯ ವಿಚಾರಣೆ ಮುಂದೂಡಿದೆ.
ಇಂದು ಸಂಜೆ 7 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ಸಚಿವ ರಮೇಶ್ ಕುಮಾರ್, ವೈದ್ಯಕೀಯ ಸಂಘದ ಪರಾಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ.











Click it and Unblock the Notifications