ಮಾಜಿ ಶಾಸಕ ಎಂ.ಆರ್.ಸೀತಾರಾಮ್ಗೆ ವಿರುದ್ಧದ ಭ್ರಷ್ಟಾಚಾರ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಕಾರ
ಬೆಂಗಳೂರು, ಜೂನ್ 29: ಕಾವೇರಿ ನಿರಾವರಿ ನಿಗಮದ ಅಧ್ಯಕ್ಷರಾಗಿದ್ದ ಚಿಕ್ಕರಾಯಪ್ಪನವರ ಅಕ್ರಮ ಆಸ್ತಿಯನ್ನು ಸಕ್ರಮಗೊಳಿಸಲು ನೆರವಾದ ಆರೋಪದಲ್ಲಿ ಮಾಜಿ ಶಾಸಕ ಹಾಗೂ ಎಂ.ಎಸ್.ರಾಮಯ್ಯ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎಂ.ಆರ್.ಸೀತಾರಾಮ್ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಎಂ.ಆರ್.ಸೀತಾರಾಮ್ ವಿರುದ್ಧದ ಭ್ರಷ್ಟಾಚಾರ ಆರೋಪದಲ್ಲಿ ದಾಖಲಾಗಿದ್ದ ಪ್ರಕರಣವನ್ನು ರದ್ದು ಪಡಿಸಲು ಹೈಕೋರ್ಟ್ ನಿರಾಕರಿಸಿದೆ. ತಮ್ಮ ವಿರುದ್ದದ ಪ್ರಕರಣ ರದ್ದು ಕೋರಿ ಸೀತಾರಾಮ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. ಹೈಕೋರ್ಟ್ ಆದೇಶದ ಪರಿಣಾಮ ಅವರು ಈಗ ವಿಚಾರಣೆ ಮತ್ತು ತನಿಖೆಯನ್ನು ಎದುರಿಸಬೇಕಾಗಿದೆ.

ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧದ ಆರೋಪ ಸಂಬಂಧ ಎಸಿಬಿ 2018ರ ಮೇ ತಿಂಗಳಲ್ಲಿ 15 ದಿನಗಳ ಅಂತರದಲ್ಲಿ ಎರಡು ನೋಟಿಸ್ಗಳನ್ನು ನೀಡಿದೆ. ಮೊದಲ ನೋಟಿಸ್ಗೆ ಪ್ರತಿಕ್ರಿಯಿಸಿ. ಪ್ರಕರಣದ ಮೊದಲ ಆರೋಪಿಯಾದ ಚಿಕ್ಕರಾಯಪ್ಪ ಅವರ ಮಗಳ ಶಿಕ್ಷಣಕ್ಕಾಗಿ ಬಡ್ಡಿ ರಹಿತ ಸಾಲ ನೀಡಿರುವುದಾಗಿ ತಿಳಿಸಿದ್ದಾರೆ. ಆದರೆ, ಎರಡನೇ ನೋಟಿಸ್ಗೆ, ಸಾಲ ಮಂಜೂರು ಮಾಡಿದ್ದ ಸೊಸೈಟಿ ನಿಷ್ಕ್ರಿಯವಾಗಿದ್ದು, ಹಳೆಯ ದಾಖಲೆಗಳು ಲಭ್ಯವಿಲ್ಲ ಎಂದು ತಿಳಿಸಿದ್ದಾರೆ. ಈ ಬೆಳವಣಿಗೆ ಅತ್ಯಂತ ವಿಚಿತ್ರ ಮತ್ತು ಆಘಾತಕಾರಿಯಾಗಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.
ಸೊಸೈಟಿ ಸ್ವತಂತ್ರ ಸಂಸ್ಥೆಯಾಗಿದ್ದು, ಸಿತಾರಾಮ್ ಅವರು ಸೊಸೈಟಿಯ ಅಧ್ಯಕ್ಷರಾಗಿ 50 ಲಕ್ಷ ರು.ಗಳ ಚೆಕ್ಗೆ ಸಹಿ ಹಾಕಿದ್ದಾರೆ. ಈ 50 ಲಕ್ಷ ರು.ಗಳು ಎಲ್ಲಿಂದ ಬಂದಿದೆ, ವಿಶೇಷವಾಗಿ ಕೇವಲ ಚಿಕ್ಕರಾಯಪ್ಪ ಮಗಳ ಶಿಕ್ಷಣಕ್ಕಾಗಿ ಬಡ್ಡಿ ರಹಿತ ಶೈಕ್ಷಣಿಕ ಸಾಲವನ್ನು ನೀಡಲು ಏಕೆ ಆಯ್ಕೆ ಮಾಡಿಕೊಂಡರು ಎಂಬುದಕ್ಕೆ ಸಂಬಂಧಿಸಿದಂತೆ ಸೂಕ್ತ ವಿವರಣೆ ನೀಡಿಲ್ಲ. ಪ್ರಸ್ತುತ ಸೊಸೈಟಿ ನಿಷ್ಕ್ರಿಯೆಗೊಂಡಿದೆ. ಆದರೂ, ನ್ಯಾಯಾಲಯಕ್ಕೆ ಹಣ ವಹಿವಾಟು ನಡೆಸಿರುವ ಸಂಬಂಧ ದಾಖಲೆಗಳು ಅತ್ಯಂತ ಮುಖ್ಯವಾಗಿರುತ್ತದೆ. ಈ ಎಲ್ಲ ಗಂಭೀರವಾದ ಪ್ರಶ್ನೆಗಳಿಗೆ ನ್ಯಾಯಾಲಯಕ್ಕೆ ಸೂಕ್ತ ರೀತಿಯ ಪ್ರತಿಕ್ರಿಯೆ ಅಗತ್ಯವಿದ್ದು, ಅರ್ಜಿ ವಜಾಗೊಳಿಸಲಾಗುತ್ತಿದೆ ಎಂದು ಪೀಠ ತಿಳಿಸಿದೆ.
ಪ್ರಕರಣದ ಹಿನ್ನೆಲೆ
ಟಿ.ಎನ್ ಚಿಕ್ಕರಾಯಪ್ಪ ಅವರು ಕಾವೇರಿ ನಿರಾವರಿ ನಗಮ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಸಂದರ್ಭದಲ್ಲಿ ಅಕ್ರಮ ಆಸ್ತಿ ಗಳಿಕೆ ಸಂಬಂಧ ಆರೋಪ ಎದುರಾಗಿತ್ತು. ಈ ಕುರಿತಂತೆ ಚಿಕ್ಕರಾಯಪ್ಪ ಮತ್ತು ಅವರ ಆಪ್ತರ ಮನೆಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಳಿ ನಡೆಸಿ ಸುಮಾರು 3.58 ಕೋಟಿ ರು.ಗಳ ಅಕ್ರಮ ಆಸ್ತಿ ವಶಕ್ಕೆ ಪಡೆದಿತ್ತು.
ಈ ಪ್ರಕರಣ ಸಂಬಂಧ ದಾಖಲೆಗಳನ್ನು ಪರಿಶೀಲನೆ ವೇಳೆ ಅರ್ಜಿದಾರ ಎಂ.ಆರ್.ಸಿತಾರಾಮ್ ಅಧ್ಯಕ್ಷರಾಗಿದ್ದ ಎಂ.ಎಸ್.ರಾಮಯ್ಯ ಎಜುಕೇಷನ್ ಸೊಸೈಟಿಯಿಂದ ಚಿಕ್ಕರಾಯಪ್ಪ ಮಗಳ ಸ್ನಾತಕೋತರ ವೈದ್ಯಕೀಯ ಕೋರ್ಸ್ಗೆ ಶುಲ್ಕವಾಗಿ ಎಂ.ಎಸ್.ರಾಮಯ್ಯ ಮೆಡಿಕಲ್ ಕಾಲೇಜಿಗೆ 50 ಲಕ್ಷ ರು.ಗಳ ಪಾವತಿ ಸಂಬಂಧದ ದಾಖಲೆಗಳು ಪತ್ತೆಯಾಗಿದ್ದವು. ಈ ಮೊತ್ತವನ್ನು ಚಿಕ್ಕರಾಯಪ್ಪ ಅವರ ಮಗಳ ಎಂಡಿ ಕೋರ್ಸ್ಗಾಗಿ ಬಡ್ಡಿ ರಹಿತವಾಗಿ ಸಾಲ ನೀಡಲಾಗಿದೆ ಎಂಬುದಾಗಿ ವಿವರಿಸಲಾಗಿತ್ತು.
ಈ ಸಂಬಂಧ ವಿವರಣೆ ಕೋರಿ ಎಸಿಬಿ ಅಧಿಕಾರಿಗಳು2018ರ ಮೇ 13 ರಂದು ಎಂ.ಎಸ್.ರಾಮಯ್ಯ ಎಜುಕೇಶ್ ಸೊಸೈಟಿಗೆ ನೋಟಿಸ್ ಜಾರಿ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಸೋಸೈಟಿ, ಚಿಕ್ಕರಾಯಪ್ಪ ಅವರ ಮಗಳ ಶಿಕ್ಷಣಕ್ಕಾಗಿ ಬಡ್ಡಿ ರಹಿತ ಸಾಲ ನೀಡಿರುವುದಾಗಿ ತಿಳಿಸಿತ್ತು.
ಮುಂದುವರೆದ ಭಾಗವಾಗಿ ಚಿಕ್ಕರಾಯಪ್ಪ ಮಗಳ ಶಿಕ್ಷಣಕ್ಕೆ ಸಂಬಂಧಿಸಿದಂತೆ ದಾಖಲೆಗಳೊಂದಿಗೆ ಸಂಪೂರ್ಣ ವಿವರಣೆ ನೀಡುವಂತೆ ಎಸಿಬಿ 2018ರ ಏಪ್ರಿಲ್ 27ರಂದು ಮತ್ತೊಂದು ನೋಟಿಸ್ ಜಾರಿ ಮಾಡಿತ್ತು ಇದಕ್ಕೆ ಉತ್ತರಿಸಿದ್ದ ರಾಮಯ್ಯ ಶಿಕ್ಷಣ ಸಂಸ್ಥೆ, ಇದೀಗ ಸಾಲ ನೀಡಿರುವ ಸೊಸೈಟಿ ನಿರ್ಜೀವವಾಗಿದೆ, 2011-12ನೇ ಸಾಲಿನಲ್ಲಿ ನಡೆಯುತ್ತಿದ್ದ ಕಾಲೇಜನ್ನು ನಿವೇಶನ ಸಹಿತ ಮರಾಟ ಮಾಡಲಾಗಿದೆ. ಅಲ್ಲದೆ, ಪ್ರಸ್ತುತ ಕಚೇರಿ ನಡೆಸುತ್ತಿಲ್ಲ. ಸಿಬ್ಬಂದಿಯೂ ಇಲ್ಲ. ಹೀಗಾಗಿ ಹಳೆಯ ದಾಖಲೆಗಳನ್ನು ಪತ್ತೆಹಚ್ಚಲು ಸಾಧ್ಯವಾಗುತ್ತಿಲ್ಲ ಎಂದು ವಿವರಿಸಿತ್ತು. ಈ ಸಂಬಂಧ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು ಪ್ರಕರಣದಲ್ಲಿ ಸೀತಾರಾಮ್ ಅವರನ್ನು ಮೂರನೇ ಆರೋಪಿಯನ್ನಾಗಿಸಿ ಆರೋಪ ಪಟ್ಟಿ ಸಲ್ಲಿಸಿದ್ದರು.
-
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications