ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೈತರ ಬಗ್ಗೆ ಮೋದಿಯನ್ನು ಪ್ರಶ್ನಿಸಿದ ಎಚ್.ಡಿ.ದೇವೇಗೌಡ

|
Google Oneindia Kannada News

ಬೆಂಗಳೂರು, ಜನವರಿ 02 : 'ರೈತರು ದೆಹಲಿಯಲ್ಲೇ ಬೀಡು ಬಿಟ್ಟು ಪ್ರತಿಭಟನೆ ‌ನಡೆಸಿದಾಗ ನೀವೇನು ಮಾಡಿದ್ದೀರಿ? ಎಂದು ಒಮ್ಮೆ ನೆನಪಿಸಿಕೊಳ್ಳಿ' ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದ್ದಾರೆ.

ಬುಧವಾರ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು @H_D_Devegowda ಅಕೌಂಟ್‌ನಿಂದ ಟ್ವೀಟ್ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.

ನಾನೂ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್ ಎಂದ ಮಾಜಿ ಪಿಎಂ ದೇವೇಗೌಡರು ನಾನೂ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್ ಎಂದ ಮಾಜಿ ಪಿಎಂ ದೇವೇಗೌಡರು

ನರೇಂದ್ರ ಮೋದಿ ಅವರೇ, ನಿಮ್ಮ ತೋರ್ಬೆರಳು ನಮ್ಮನ್ನು ಪ್ರಶ್ನೆ ಮಾಡುತ್ತಿದ್ದರೆ ಕಪ್ಪು ಹಣ,ನೋಟು ಅಪನಗದೀಕರಣ, ಗಂಗಾ ನದಿ ಸ್ವಚ್ಛತೆ, ನದಿ ಜೋಡಣೆ, ರಾಮಮಂದಿರ ಇಂತಹ ಅನೇಕ ವಿಚಾರವಾಗಿ ಉಳಿದ ಬೆರಳುಗಳು ನಿಮ್ಮನ್ನೇ ಪ್ರಶ್ನಿಸುತ್ತವೆ ಎಂದು ಹೇಳಿದ್ದಾರೆ.

HD Deve Gowda against PM Narendra Modi

ರೈತರು ದೆಹಲಿಯಲ್ಲೇ ಬೀಡು ಬಿಟ್ಟು ಪ್ರತಿಭಟನೆ ‌ನಡೆಸಿದಾಗ ನೀವೇನು ಮಾಡಿದ್ದೀರಿ? ಎಂದು ಒಮ್ಮೆ ನೆನಪಿಸಿಕೊಳ್ಳಿ ಎಂದು ದೇವೇಗೌಡರು ಪ್ರಶ್ನೆ ಮಾಡಿದ್ದಾರೆ.

ಬೋಗಿಬಿಲ್ ಸೇತುವೆ ಉದ್ಘಾಟನೆ : ಮೋದಿ ವಿರುದ್ಧ ಗೌಡರ ಗುಡುಗು ಬೋಗಿಬಿಲ್ ಸೇತುವೆ ಉದ್ಘಾಟನೆ : ಮೋದಿ ವಿರುದ್ಧ ಗೌಡರ ಗುಡುಗು

ಸಾಲಮನ್ನಾ : ಕರ್ನಾಟಕದ ಸಾಲಮನ್ನಾ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಹೇಳಿಕೆ ಗಮನಿಸಿದ್ದೇನೆ. ಪ್ರೀತಿಯ ಪ್ರಧಾನಿಗಳೇ 60 ಸಾವಿರಕ್ಕೂ ಅಧಿಕ ರೈತರು ಹಣವನ್ನು ನೇರವಾಗಿ ಬ್ಯಾಂಕ್‌ ಖಾತೆಗೆ ಪಡೆದಿದ್ದಾರೆ. ನಮ್ಮ ಭರವಸೆಯನ್ನು ಈಡೇರಿಸಲು ನಾವು ಬದ್ಧವಾಗಿದ್ದೇವೆ' ಎಂದು ಹೇಳಿದ್ದಾರೆ.

English summary
Former Prime Minister H.D.Deve Gowda said that dear Narendra Modi your index finger is busy questioning us, the other fingers are questioning you.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X