ಡಿ ಕೆ ಶಿವಕುಮಾರ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಹೆಚ್ ಡಿ ದೇವೇಗೌಡ
ಬೆಂಗಳೂರು: ಉಪಮುಖ್ಯಮಂತ್ರಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ನೈಸ್ ರೋಡ್ ವಿಚಾರದ ಬಗ್ಗೆ ಕಠಿಣವಾಗಿ ಮಾತಾಡಿದ್ದಾರೆ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯ, ಅವರದ್ದು ಅತಿಯಾಗಿದೆ ಎಂದು ಡಿಎಂಸಿ ಹೇಳಿದ್ದಾರೆ. ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೆ ಹೇಳಿದ್ದು ತುಂಬಾ ಸಂತೋಷ. ಅವರು ಕ್ರಮ ಕೈಗೊಂಡರೆ ಬಹಳ ಸಂತೋಷ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದರು.
ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿ, ನಾವು ದೇವೇಗೌಡರ ಮೇಲೆ ಯಾವುದೇ ರಿಟ್ ಹಾಕಿಲ್ಲಾ ಎಂದು ಅಶೋಕ್ ಖೇಣಿ ಹೇಳ್ತಾರೆ. ಜನವರಿ 21ರಂದು ಸುಪ್ರೀಂ ಕೋರ್ಟ್ ನಲ್ಲಿ ನೈಸ್ ಕೇಸ್ ಇದೆ. ಮುಖ್ಯ ಕಾರ್ಯದರ್ಶಿ ಅವರನ್ನು ಪಾರ್ಟಿ ಮಾಡಿಲ್ಲಾ. ಬಾಬಾ ಕಲ್ಯಾಣಿ ಅರ್ಜಿದಾರರಾಗಿದ್ದಾರೆ. ರಾಜ್ಯ ಸರ್ಕಾರ ಏನು ಕ್ರಮ ತೆಗೆದುಕೊಳ್ಳುತ್ತೆ ಎಂದು ನೋಡೋಣ. ಡಿಸಿಎಂ ತುಂಬಾ ಕಠಿಣವಾಗಿ ಹೇಳಿದ್ದಾರೆ. ಅವರ ಹೇಳಿಕೆಯನ್ನು ನಾನು ಸ್ವಾಗತಿಸುತ್ತೇನೆ ಎಂದರು.

2024ರಲ್ಲಿ ನಾನು ಸಿಎಂಗೆ ಪತ್ರ ಬರೆದಿದ್ದೇನೆ. ಎಷ್ಟು ಎಕರೆ ಯಾವ ಯಾವ ಜಾಗದಲ್ಲಿ ಭೂಮಿ ತೆಗೆದುಕೊಂಡಿದ್ದಾರೆ? ಇದರ ಮೇಲೆ ಕ್ರಮ ಕೈಗೊಳ್ಳಿ ಎಂದು ಪತ್ರ ಬರೆದಿದ್ದೇನೆ. ಖೇಣಿ ಮೇಲೆ ಏನು ಕ್ರಮ ತೆಗೆದುಕೊಳ್ತಾರೆ ಎಂಬುದನ್ನು ನೋಡೋಣ. ಅವರು ಕ್ರಮ ತೆಗೆದುಕೊಂಡರೆ ತುಂಬಾ ಸಂತೋಷ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ತಿಳಿಸಿದರು.
ಬಳ್ಳಾರಿಯಲ್ಲಿ ನಡೆದಿರುವ ಗುಂಡಿನ ದಾಳಿ, ಗಲಭೆ ಪ್ರಕರಣದ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಬಳ್ಳಾರಿ ಘಟನೆಯನ್ನು ಟಿವಿಯಲ್ಲಿ ನೋಡಿದ್ದೇನೆ. ಗುಂಪು ಘರ್ಷಣೆ ಆಗಿದೆ. ಶಾಸಕರು, ಇನ್ನೂ ಯಾರು ಯಾರು ಭಾಗಿ ಆಗಿದ್ದಾರೆ ಎನ್ನುವುದು ಗೊತ್ತಿಲ್ಲ ಎಂದರು.
ಗಲಭೆಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ. ಗುಂಡು ಹೊಡೆದವರು ಯಾರು ಎಂದು ಗೊತ್ತಿಲ್ಲ. ಜನಾರ್ದನ ರೆಡ್ಡಿ ಅವರು ಮನೆಯಲ್ಲಿ ಇದ್ದಿದ್ದರೆ ಅಪಾಯ ಆಗ್ತಿತ್ತು ಎನ್ನುವ ಸುದ್ದಿ ನೋಡಿದೆ. ಎಲ್ಲಾ ವರದಿ ಬಂದ ಮೇಲೆ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಈಗಾಗಲೇ ನಾಲ್ಕು FIR ಗಳು ಆಗಿವೆಯಂತೆ. ಖಾಸಗಿ ವ್ಯಕ್ತಿ ಹೊರಗಡೆಯಿಂದ ಗುಂಡು ಹೊಡೆದಿದ್ದು ಎಂದು ಸುದ್ದಿ ನೋಡಿದೆ. ನಿಖರವಾಗಿ ಹೀಗೆ ಎಂದು ಹೇಳಲು ನನಗೆ ಕಷ್ಟ. ಶ್ರೀರಾಮುಲು ಅವರು ಜನಾರ್ಧನ ರೆಡ್ಡಿ ಅವರಿಗೆ ಗೆ ರಕ್ಷಣೆ ಕೊಡಬೇಕು ಎಂದು ಹೇಳಿದ್ದನ್ನು ಕೇಳಿದ್ದೇನೆ ಎಂದರು.
ಗನ್ ಸಂಸ್ಕೃತಿ ರಾಜ್ಯಕ್ಕೂ ಬಂತು ಎಂಬ ಬಗ್ಗೆ ಕೇಳಿದ ಪ್ರಶ್ನೆಗೆ; ಈ ಬಗ್ಗೆ ನಾನೇನು ಹೇಳಲ್ಲ. ಕುಮಾರಸ್ವಾಮಿ ಎರಡು ಸಲ ಸಿಎಂ ಆಗಿ ಸಾಕಷ್ಟು ಕ್ರಮ ತಗೊಂಡಿದ್ದಾರೆ. ವಿಪಕ್ಷನಾಯಕನಾಗಿಯೂ ಹೋರಾಟ ಮಾಡಿದ್ದಾರೆ. ಬಳ್ಳಾರಿ ಘಟನೆ ಬಗ್ಗೆ ನಾನು ಏನೂ ಮಾತಾಡಲ್ಲ. ಗೃಹ ಸಚಿವರು ಸಮಯಕ್ಕೆ ಸರಿಯಾಗಿ ಕ್ರಮ ತಗೋತಾರೆ. ಅವಕಾಶ ಕೊಟ್ರೆ ಸಿಎಂ ಆಗ್ತಿನಿ ಎಂದು ಪರಮೇಶ್ವರ್ ಅವರು ಹೇಳಿದ್ದಾರೆ. ಆ ಕಡೆ ಜಾಸ್ತಿ ಗಮನ ಕೊಡ್ತಿದಾರೆ ಎಂದು ದೇವೇಗೌಡರು ಹೇಳಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications