ಡಿ ಕೆ ಶಿವಕುಮಾರ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಹೆಚ್ ಡಿ ದೇವೇಗೌಡ
ಬೆಂಗಳೂರು: ಉಪಮುಖ್ಯಮಂತ್ರಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ನೈಸ್ ರೋಡ್ ವಿಚಾರದ ಬಗ್ಗೆ ಕಠಿಣವಾಗಿ ಮಾತಾಡಿದ್ದಾರೆ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯ, ಅವರದ್ದು ಅತಿಯಾಗಿದೆ ಎಂದು ಡಿಎಂಸಿ ಹೇಳಿದ್ದಾರೆ. ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೆ ಹೇಳಿದ್ದು ತುಂಬಾ ಸಂತೋಷ. ಅವರು ಕ್ರಮ ಕೈಗೊಂಡರೆ ಬಹಳ ಸಂತೋಷ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದರು.
ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿ, ನಾವು ದೇವೇಗೌಡರ ಮೇಲೆ ಯಾವುದೇ ರಿಟ್ ಹಾಕಿಲ್ಲಾ ಎಂದು ಅಶೋಕ್ ಖೇಣಿ ಹೇಳ್ತಾರೆ. ಜನವರಿ 21ರಂದು ಸುಪ್ರೀಂ ಕೋರ್ಟ್ ನಲ್ಲಿ ನೈಸ್ ಕೇಸ್ ಇದೆ. ಮುಖ್ಯ ಕಾರ್ಯದರ್ಶಿ ಅವರನ್ನು ಪಾರ್ಟಿ ಮಾಡಿಲ್ಲಾ. ಬಾಬಾ ಕಲ್ಯಾಣಿ ಅರ್ಜಿದಾರರಾಗಿದ್ದಾರೆ. ರಾಜ್ಯ ಸರ್ಕಾರ ಏನು ಕ್ರಮ ತೆಗೆದುಕೊಳ್ಳುತ್ತೆ ಎಂದು ನೋಡೋಣ. ಡಿಸಿಎಂ ತುಂಬಾ ಕಠಿಣವಾಗಿ ಹೇಳಿದ್ದಾರೆ. ಅವರ ಹೇಳಿಕೆಯನ್ನು ನಾನು ಸ್ವಾಗತಿಸುತ್ತೇನೆ ಎಂದರು.

2024ರಲ್ಲಿ ನಾನು ಸಿಎಂಗೆ ಪತ್ರ ಬರೆದಿದ್ದೇನೆ. ಎಷ್ಟು ಎಕರೆ ಯಾವ ಯಾವ ಜಾಗದಲ್ಲಿ ಭೂಮಿ ತೆಗೆದುಕೊಂಡಿದ್ದಾರೆ? ಇದರ ಮೇಲೆ ಕ್ರಮ ಕೈಗೊಳ್ಳಿ ಎಂದು ಪತ್ರ ಬರೆದಿದ್ದೇನೆ. ಖೇಣಿ ಮೇಲೆ ಏನು ಕ್ರಮ ತೆಗೆದುಕೊಳ್ತಾರೆ ಎಂಬುದನ್ನು ನೋಡೋಣ. ಅವರು ಕ್ರಮ ತೆಗೆದುಕೊಂಡರೆ ತುಂಬಾ ಸಂತೋಷ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ತಿಳಿಸಿದರು.
ಬಳ್ಳಾರಿಯಲ್ಲಿ ನಡೆದಿರುವ ಗುಂಡಿನ ದಾಳಿ, ಗಲಭೆ ಪ್ರಕರಣದ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಬಳ್ಳಾರಿ ಘಟನೆಯನ್ನು ಟಿವಿಯಲ್ಲಿ ನೋಡಿದ್ದೇನೆ. ಗುಂಪು ಘರ್ಷಣೆ ಆಗಿದೆ. ಶಾಸಕರು, ಇನ್ನೂ ಯಾರು ಯಾರು ಭಾಗಿ ಆಗಿದ್ದಾರೆ ಎನ್ನುವುದು ಗೊತ್ತಿಲ್ಲ ಎಂದರು.
ಗಲಭೆಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ. ಗುಂಡು ಹೊಡೆದವರು ಯಾರು ಎಂದು ಗೊತ್ತಿಲ್ಲ. ಜನಾರ್ದನ ರೆಡ್ಡಿ ಅವರು ಮನೆಯಲ್ಲಿ ಇದ್ದಿದ್ದರೆ ಅಪಾಯ ಆಗ್ತಿತ್ತು ಎನ್ನುವ ಸುದ್ದಿ ನೋಡಿದೆ. ಎಲ್ಲಾ ವರದಿ ಬಂದ ಮೇಲೆ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಈಗಾಗಲೇ ನಾಲ್ಕು FIR ಗಳು ಆಗಿವೆಯಂತೆ. ಖಾಸಗಿ ವ್ಯಕ್ತಿ ಹೊರಗಡೆಯಿಂದ ಗುಂಡು ಹೊಡೆದಿದ್ದು ಎಂದು ಸುದ್ದಿ ನೋಡಿದೆ. ನಿಖರವಾಗಿ ಹೀಗೆ ಎಂದು ಹೇಳಲು ನನಗೆ ಕಷ್ಟ. ಶ್ರೀರಾಮುಲು ಅವರು ಜನಾರ್ಧನ ರೆಡ್ಡಿ ಅವರಿಗೆ ಗೆ ರಕ್ಷಣೆ ಕೊಡಬೇಕು ಎಂದು ಹೇಳಿದ್ದನ್ನು ಕೇಳಿದ್ದೇನೆ ಎಂದರು.
ಗನ್ ಸಂಸ್ಕೃತಿ ರಾಜ್ಯಕ್ಕೂ ಬಂತು ಎಂಬ ಬಗ್ಗೆ ಕೇಳಿದ ಪ್ರಶ್ನೆಗೆ; ಈ ಬಗ್ಗೆ ನಾನೇನು ಹೇಳಲ್ಲ. ಕುಮಾರಸ್ವಾಮಿ ಎರಡು ಸಲ ಸಿಎಂ ಆಗಿ ಸಾಕಷ್ಟು ಕ್ರಮ ತಗೊಂಡಿದ್ದಾರೆ. ವಿಪಕ್ಷನಾಯಕನಾಗಿಯೂ ಹೋರಾಟ ಮಾಡಿದ್ದಾರೆ. ಬಳ್ಳಾರಿ ಘಟನೆ ಬಗ್ಗೆ ನಾನು ಏನೂ ಮಾತಾಡಲ್ಲ. ಗೃಹ ಸಚಿವರು ಸಮಯಕ್ಕೆ ಸರಿಯಾಗಿ ಕ್ರಮ ತಗೋತಾರೆ. ಅವಕಾಶ ಕೊಟ್ರೆ ಸಿಎಂ ಆಗ್ತಿನಿ ಎಂದು ಪರಮೇಶ್ವರ್ ಅವರು ಹೇಳಿದ್ದಾರೆ. ಆ ಕಡೆ ಜಾಸ್ತಿ ಗಮನ ಕೊಡ್ತಿದಾರೆ ಎಂದು ದೇವೇಗೌಡರು ಹೇಳಿದರು.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications