JDS-BJP Alliance: ಮಗ ಕೊಡುವ ಹಿಂಸೆಯಿಂದ ದೇವೆಗೌಡರು ಮೈತ್ರಿಗೆ ಒಪ್ಪಿಕೊಂಡಿದ್ದಾರೆ: ಚಲುವರಾಯಸ್ವಾಮಿ
ಕಲಬುರಗಿ, ಅಕ್ಟೋಬರ್ 03: ಜೆಡಿಎಸ್- ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್ ಗೆ ಲಾಭ ಆಗುತ್ತೆ. ಮಾಜಿ ಪ್ರಧಾನಿ ಹೆಚ್ ಡಿ ದೇವೆಗೌಡರು ಯಾವತ್ತಾದ್ರು ಬಿಜೆಪಿ ಬಗ್ಗೆ ಒಲವು ತೋರಿಸಿದ್ರಾ ? ಮಗನ ಬಲವಂತ, ಮಗ ಕೊಡುವ ಹಿಂಸೆಯಿಂದ ದೇವೆಗೌಡರು ಮೈತ್ರಿಗೆ ಒಪ್ಪಿಕೊಂಡಿದ್ದಾರೆ ಎಂದು ಚಲುವರಾಮಸ್ವಾಮಿ ಹೇಳಿದರು
ಈ ಕುರಿತು ಮಂಗಳವಾರ ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಣೆ ಬರಹ ಬರೆಯಲು ಎಚ್ ಡಿ ಕುಮಾರಸ್ವಾಮಿ ಆಗಲಿ, ಸಿ ಪಿ ಯೋಗೇಶ್ವರ್ ನಿಂದ ಸಾಧ್ಯವಿಲ್ಲ. ಹೀಗೆ ಮಾತಾಡಿ ಮಾತಾಡಿ ಯೋಗೇಶ್ವರ ಪರಿಸ್ಥಿತಿ ಈ ಮಟ್ಟಕ್ಕೆ ಬಂದಿದೆ ಎಂದು ಚಲುವರಾಮಸ್ವಾಮಿ ತಿಳಿಸಿದ್ದಾರೆ.

ಸಂಕ್ರಾಂತಿ ನಂತರ ಸರ್ಕಾರ ಪತನ ಆಗುತ್ತೆ ಅನ್ನೋ ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಸಿ ಪಿ ಯೋಗೇಶ್ವರ್ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದರು. ಸಿ ಪಿ ಯೋಗೇಶ್ವರ ಹಣೆ ಬರ ಅವರೇ ಬರೆಯೋಕೆ ಆಗಿಲ್ಲ. ಪ್ರಧಾನಿ ಮೋದಿ ಅವರು ಯೋಗೇಶ್ವರ ಕ್ಷೇತ್ರಕ್ಕೆ ಬಂದು ಬೆಂಬಲ ಮಾಡಿದ್ರು ಸೋತಿದ್ದಾನೆ. ಹಾಗಾಗಿ ಬೇರೆ ಅವರ ಹಣೆ ಬಹರ ಬರೆಯೋಕೆ ಯೋಗೇಶ್ವರ್ ಗೆ ಆಗುತ್ತಾ ? ಎಂದು ಪ್ರಶ್ನಿಸಿದ್ದಾರೆ.
ಇನ್ನೂ ಸಿ ಪಿ ಯೋಗೇಶ್ವರ್ ಹೀಗೆ ಮಾತಾಡಿ ಮಾತಾಡಿ ಅವರ ಪರಿಸ್ಥಿತಿ ಈ ಮಟ್ಟಕ್ಕೆ ಆಗಿದೆ. ಕಾಂಗ್ರೆಸ್ ಹಣೆ ಬರಹ ಬರೆಯಲು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಗಲಿ, ಸಿ ಪಿ ಯೋಗೇಶ್ವರ್ ಗೆ ಸಾಧ್ಯವಿಲ್ಲ. ಇಡೀ ರಾಜ್ಯವನ್ನ ಪ್ರಧಾನಿ ನರೇಂದ್ರ ಮೋದಿ ಅವರು ಸುತ್ತಾಡಿಸಿದ್ರು, ಆದರೆ, 60-65 ಸೀಟ್ ಗೆಲ್ಲುತ್ತೆ ಅಂತಾ ಅವ್ರು ಅಂದುಕೊಂಡಿರಲಿಲ್ಲ. ನಾವು ಜನರ ಆಶೀರ್ವಾದಿಂದ ಗೆದ್ದಿದ್ದೆವೆ ಎಂದು ಹೇಳಿದರು.
ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಗೆ ಮುಳುಗಿ ಹೋಗುವ ಪರಿಸ್ಥಿತಿ ಬಂದಿದೆ ಹಾಗಾಗಿ ಒಬ್ಬರ ಕೈ ಒಬ್ಬರು ಹಿಡಿದುಕೊಂಡಿದ್ದಾರೆ. ಅವರ ನಡವಳಿಕೆಯಿಂದ ಜೆಡಿಎಸ್ ಅಧಿಕಾರ ಕಳೆದುಕೊಂಡಿದೆ. ಕಾಂಗ್ರೆಸ್ ಯಾವುದೇ ಕಾಲಕ್ಕೂ ಜೆಡಿಎಸ್ ಗೆ ಸಹಾಯ ಮಾಡುತ್ತಾ ಬಂದಿದೆ. ಆದರೆ, ಇವರು ಲಘುವಾಗಿ ಮಾತಾಡಬಾರದು ಎಂದು ಬಿಜೆಪಿ ಜೆಡಿಎಸ್ ನಾಯಕರ ವಿರುದ್ದ ಕಿಡಿಕಾರಿದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications