ಅಖಾಡಕ್ಕಿಳಿದ ಗೌಡರು; ಭಾವುಕರಾಗಿ ಮಹತ್ವದ ಘೋಷಣೆ ಮಾಡಿದ ಜಿಟಿಡಿ!
ಬೆಂಗಳೂರು, ಅಕ್ಟೋಬರ್ 20; ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ. ಟಿ. ದೇವೇಗೌಡ ಕಾಂಗ್ರೆಸ್ ಸೇರಲಿದ್ದಾರೆ, ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿಗಳಿಗೆ ದೀಪಾವಳಿ ಹಬ್ಬಕ್ಕೂ ಮುನ್ನವೇ ಸ್ಪಷ್ಟನೆ ಸಿಕ್ಕಿದೆ. ಅಖಾಡಕ್ಕೆ ಇಳಿದ ದೊಡ್ಡ ಗೌಡರು ಜಿ. ಟಿ. ದೇವೇಗೌಡರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಯಶಸ್ವಿಯಾಗಿದ್ದಾರೆ.
ಗುರುವಾರ ಮೈಸೂರಿನ ವಿವಿ ಮೊಹಲ್ಲಾದಲ್ಲಿರುವ ಜಿ. ಟಿ. ದೇವೇಗೌಡರ ನಿವಾಸಕ್ಕೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಭೇಟಿ ನೀಡಿದ್ದರು. ಬಳಿಕ ಪಕ್ಷದ ನಾಯಕರು ಅಲ್ಲಿಯೇ ಮಧ್ಯಾಹ್ನದ ಭೋಜನ ಸವಿದರು. ಬಳಿಕ ಭಾವುಕರಾಗಿ ಜಿ. ಟಿ. ದೇವೇಗೌಡರು ದೊಡ್ಡ ಘೋಷಣೆ ಮಾಡಿದರು.
ಮುಂದಿನ ಚುನಾವಣೆಯಲ್ಲಿ 123 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಸ್ವತಂತ್ರವಾಗಿ ಸರ್ಕಾರ ರಚನೆ ಮಾಡಬೇಕು ಎಂಬುದು ಜೆಡಿಎಸ್ ಗುರಿ. ಅದಕ್ಕಾಗಿ ಪಕ್ಷ ಹಲವಾರು ಕಾರ್ಯಕ್ರಮ ರೂಪಿಸಿದೆ. ಇದರ ಭಾಗವಾಗಿಯೇ ತನ್ನ ಪ್ರಭಾವ ಹೆಚ್ಚಿರುವ ಜಿಲ್ಲೆಯಲ್ಲಿ ಕ್ಷೇತ್ರ, ನಾಯಕರನ್ನು ಉಳಿಸಿಕೊಳ್ಳುವ ಕಾರ್ಯ ಮಾಡುತ್ತಿದೆ.
ಜಿ. ಟಿ. ದೇವೇಗೌಡರ ಮನವೊಲಿಕೆಗೆ ಎಚ್. ಡಿ. ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಮಾಡಿದ ಪ್ರಯತ್ನಗಳು ಫಲ ಕೊಟ್ಟಿರಲಿಲ್ಲ. ಅಂತಿಮವಾಗಿ ದೇವೇಗೌಡರು ಉರುಳಿಸಿದ ದಾಳ ಫಲ ಕೊಟ್ಟಿದೆ. ಜಿ. ಟಿ. ದೇವೇಗೌಡರನ್ನು ಪಕ್ಷದಲ್ಲಿ ಉಳಿಸಿಕೊಳ್ಳುವಲ್ಲಿ ದೊಡ್ಡ ಗೌಡರು ಯಶಸ್ವಿಯಾಗಿದ್ದಾರೆ. ಮುಂದಿನ ಚುನಾವಣೆಯಲ್ಲಿ ಈ ತಂತ್ರ ಹೇಗೆ ಫಲ ಕೊಡಲಿದೆ? ಎಂದು ಕಾದು ನೋಡಬೇಕು.

ಭಾವುಕರಾದ ಜಿ. ಟಿ. ದೇವೇಗೌಡರು
ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡರು ಮನೆಗೆ ಆಗಮಿಸುತ್ತಲೇ ಜಿ. ಟಿ. ದೇವೇಗೌಡರು ಭಾವುಕರಾಗಿದ್ದರು. ಎಚ್. ಡಿ. ಕುಮಾರಸ್ವಾಮಿ ಜೊತೆ ಕೆಲವು ವಿಚಾರದಲ್ಲಿ ಜಿ. ಟಿ. ದೇವೇಗೌಡರು ಅಸಮಾಧಾನ ಹೊಂದಿದ್ದರೂ ಸಹ ದೇವೇಗೌಡ ಮಾತಿಗೆ ಇಲ್ಲ ಎಂದು ಜಿಟಿಡಿ ಹೇಳಲು ಸಾಧ್ಯವೇ ಇರಲಿಲ್ಲ.
ದೇವೇಗೌಡ, ಕುಮಾರಸ್ವಾಮಿ, ಸಿ. ಎಂ. ಇಬ್ರಾಹಿಂ ಸೇರಿದಂತೆ ಪಕ್ಷದ ನಾಯಕರು ಮನೆ ಬಾಗಿಲಿಗೆ ಬಂದಾಗ ಜಿ. ಟಿ. ದೇವೇಗೌಡ ಎಲ್ಲಾ ಅಸಮಾಧಾನಗಳನ್ನು ಮರೆತರು. ದೇವೇಗೌಡರ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು. ಎಚ್. ಡಿ. ಕುಮಾರಸ್ವಾಮಿ ಹಾರ ಹಾಕಲು ಬಂದಾಗ ಭಾವುಕರಾದರು.

ಕಣ್ಣೀರು ಹಾಕಿದ ಜಿ. ಟಿ. ದೇವೇಗೌಡ
ದೇವೇಗೌಡರೊಂದಿಗೆ ಮಾಧ್ಯಮಗಳ ಜೊತೆ ಮಾತನಾಡುವಾಗ ಜಿ. ಟಿ. ದೇವೇಗೌಡ ಕಣ್ಣೀರು ಹಾಕಿದರು. "ದೇವೇಗೌಡರಿಗೆ ನನ್ನ ಬಗ್ಗೆ ಪ್ರೀತಿ ಇದೆ. ಅವರು ನನ್ನನ್ನು ಮರಿ ದೇವೇಗೌಡ ಎಂದೇ ಕರೆಯುತ್ತಿದ್ದರು. ಹಿಂದೆ ಹಲವು ಸ್ಥಾನವನ್ನು ಕೊಟ್ಟಿದ್ದರು. ಮೂರು ವರ್ಷಗಳಿಂದ ದೂರವಿದ್ದರೂ ನನ್ನ ಬಗ್ಗೆ ಪ್ರೀತಿ ಕಡಿಮೆಯಾಗಿಲ್ಲ" ಎಂದರು.
"ನಾನು ಜೆಡಿಎಸ್ ಬಿಡುವುದಿಲ್ಲ. ಇಲ್ಲೇ ಇರುತ್ತೇನೆ. ದೇವೇಗೌಡರು ಪ್ರಾದೇಶಿಕ ಪಕ್ಷ ಉಳಿಸಿದರು. ಅವರ ಕನಸು ನನಸು ಮಾಡುತ್ತೇವೆ. ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುತ್ತೇನೆ" ಎಂದು ಜಿ. ಟಿ. ದೇವೇಗೌಡರು ಭಾವುಕರಾಗಿ ಘೋಷಣೆ ಮಾಡಿದರು.

ಜೆಡಿಎಸ್ ಚಟುವಟಿಕೆಗಳಿಂದ ದೂರ
ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ 2019ರಲ್ಲಿ ಪತನಗೊಂಡ ಬಳಿಕ ಜಿ. ಟಿ. ದೇವೇಗೌಡ ಜೆಡಿಎಸ್ ಪಕ್ಷದ ಚಟುವಟಿಕೆಗಳಿಂದ ದೂರವಾಗಿದ್ದರು. ಅವರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿಗಳು ಬಲವಾಗಿ ಹಬ್ಬಿದ್ದವು. ಕಾಂಗ್ರೆಸ್ ನಾಯಕರನ್ನು ಅವರು ಭೇಟಿಯಾಗಿದ್ದರು.
2021ರ ಆಗಸ್ಟ್ 31ರಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, 'ಜೆಡಿಎಸ್ ಶಾಸಕ ಜಿ. ಟಿ. ದೇವೇಗೌಡ ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಜತೆ ಚರ್ಚಿಸಿದ್ದಾರೆ. ಈ ಬಗ್ಗೆ ಹೈಕಮಾಂಡ್ ಜತೆಗೆ ಚರ್ಚಿಸುವುದಾಗಿ ತಿಳಿಸಿದ್ದೇನೆ. ಸದ್ಯಕ್ಕೆ ನಡೆದಿರುವುದು ಇಷ್ಟೇ ಬೆಳವಣಿಗೆ. ಹೈಕಮಾಂಡ್ ಜತೆ ಚರ್ಚಿಸಿದ ಬಳಿಕ ಮುಂದಿನ ಬೆಳವಣಿಗೆ' ಎಂದು ಟ್ವೀಟ್ ಮಾಡಿದ್ದರು.

ಪ್ರಭಾವ ಉಳಿಸಿಕೊಳ್ಳಲು ಕಸರತ್ತು
2023ರ ವಿಧಾನಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ಜೆಡಿಎಸ್ ತನ್ನ ಪ್ರಭಾವ ಹೆಚ್ಚಿರುವ ಹಳೆ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಿದೆ. ಇದಕ್ಕಾಗಿ ಈ ಭಾಗದಲ್ಲಿ ಮುನಿಸಿಕೊಂಡಿರುವ ನಾಯಕರ ಮನವೊಲಿಕೆಗೆ ದೇವೇಗೌಡರೇ ಮುಂದಾಗಿದ್ದಾರೆ. ಅದರ ಭಾಗವಾಗಿಯೇ ಮೈಸೂರಿನಲ್ಲಿ ಎರಡು ದಿನಗಳ ಪಕ್ಷದ ಕಾರ್ಯಾಗಾರ ಆಯೋಜನೆ ಮಾಡಲಾಗಿತ್ತು.
ಜಿ. ಟಿ. ದೇವೇಗೌಡರು ಮಾಧ್ಯಮಗಳ ಜೊತೆ ಮಾತನಾಡಿ, "ಕಾಂಗ್ರೆಸ್ ಸೇರುವಂತೆ ನನ್ನನ್ನು ಸಿದ್ದರಾಮಯ್ಯ ಕರೆದಿದ್ದರು, ಬಿಜೆಪಿಯವರು ನನ್ನನ್ನು ಕರೆದಿದ್ದರು. ನಾನು ಅವರ ಕ್ಷಮೆ ಕೇಳುತ್ತೇನೆ" ಎಂದು ಹೇಳಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications