Get Updates
Get notified of breaking news, exclusive insights, and must-see stories!

ತಾಯಿ, ಧರ್ಮಪತ್ನಿ ನೆನೆದು ಕಣ್ಣೀರಿಟ್ಟ ಹೆಚ್.ಡಿ. ದೇವೇಗೌಡ

ಬೆಂಗಳೂರು, ಜೂನ್‌ 23: ನಾಡಿನ ಸಂತಶ್ರೇಷ್ಟರ ಸಾನ್ನಿಧ್ಯದಲ್ಲಿ ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡ ಅವರಿಗೆ ಶ್ರೀ ಗಂಗ ಸಾಮ್ರಾಟ ಶ್ರಿಪುರುಷ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಯಿತು. ಪ್ರಶಸ್ತಿ ಸ್ವೀಕರಿಸಿ ತೀವ್ರ ಭಾವೋದ್ವೇಗಕ್ಕೆ ಒಳಗಾದ ದೇವೇಗೌಡರು, ತಮಗೆ ನೀಡಲಾದ ಈ ಪ್ರಶಸ್ತಿಗೆ ಸಮಸ್ತ ಕನ್ನಡಿಗರ ಪ್ರೀತಿ, ವಿಶ್ವಾಸ ಕಾರಣ ಹಾಗೂ ನನ್ನ ಬದುಕಿನುದ್ದಕ್ಕೂ ನನ್ನ ಪಾಲಿನ ಶಕ್ತಿಯಾಗಿ ಉಳಿದಿರುವ ನನ್ನ ಶ್ರೀಮತಿ ಚನ್ನಮ್ಮ ಅವರಿಗೆ ಹಾಗೂ ನನ್ನ ತಂದೆ ತಾಯಿಗೆ ನನ್ನ ಯಶಸ್ಸಿನ ಶ್ರೇಯಸ್ಸು ಸಲ್ಲಬೇಕು ಎಂದು ಹೇಳಿದರು.

ಶ್ರೀಮತಿ ಚನ್ನಮ್ಮ ಅವರು ಎಲ್ಲಾ ಹಂತದಲ್ಲಿ ನನ್ನ ಜೊತೆ ನಿಂತಿದ್ದಾರೆ. ಅನೇಕ ಕಷ್ಟಗಳ ಜೊತೆಗೆ ನನ್ನ ಗೌರವ ಉಳಿಸಿದ್ದಾರೆ. ಅವರ ಕೊಡುಗೆ ನೆನೆಸಿಕೊಳ್ಳುತ್ತೇನೆ ಎಂದು ಪತ್ನಿಯನ್ನು ನೆನೆದು ಕಣ್ಣೀರು ಹಾಕಿದ ದೇವೇಗೌಡರು, ಎಲ್ಲ ಮುಂದೆ ನಮ್ಮನ್ನು ನಿಲ್ಲುವಂತೆ ಶಕ್ತಿ ತಂದುಕೊಟ್ಟವರು ಶ್ರೀ ಬಾಲಗಂಗಾಧರ ಸ್ವಾಮೀಜಿ ಅವರು ಎಂದು ಗದ್ಗದಿತರಾದರು.

HD Deve Gowda was in tears remembering his mother and wife

ನಾನು ಮುಖ್ಯಮಂತ್ರಿ ಆಗಿದ್ದಾಗ ಎಲ್ಲಾ ಕನ್ನಡಿಗರು ಸೇರಿ ಹದಿನಾರು ಲೋಕಸಭೆ ಕ್ಷೇತ್ರಗಳನ್ನು ಗೆಲ್ಲಿಸಿಕೊಟ್ಟಿದ್ದರು. ಅದರ ಪರಿಣಾಮವಾಗಿ ನಾನು ಪ್ರಧಾನಿಯಾಗಲು ಸಾಧ್ಯವಾಯಿತು ಎಂದ ದೇವೇಗೌಡರು, ಇದು ನನ್ನ ಜೀವನದ ಸಂದ್ಯಾಕಾಲ. ನಾನು ಇನ್ನೇನು ಮಾಡಲು ಸಾಧ್ಯ. ಆದರೂ ರಾಷ್ಟ್ರದ, ನಾಡಿನ ಜನರಿಗೆ ಏನಾದರೂ ಕಿಂಚಿತ್ತಾದರೂ ಅಳಿಲು ಸೇವೆ ಮಾಡಬೇಕು ಎನ್ನುವುದು ನನ್ನ ಮಹದಾಸೆ. ಅದಕ್ಕಾಗಿ ಗೋದಾವರಿ ನದಿ ನೀರು ಹಂಚಿಕೆಯಲ್ಲಿ ಕರ್ನಾಟಕಕ್ಕೆ ನ್ಯಾಯ ಮಾಡುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇನೆ ಹಾಗೂ ಮಾವಿಗೆ ಬೆಂಬಲ ಬೆಲೆ ಕೊಡಬೇಕು ಎಂದು ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೆ ಪತ್ರ ಬರೆದಿದ್ದೇನೆ ಎಂದು ಹೆಚ್‌ ಡಿ ದೇವೇಗೌಡರು ಹೇಳಿದರು.

ನನಗೆ 93ನೇ ವಯಸ್ಸಿನಲ್ಲಿ, ಜೀವನದ ಕೊನೆ ದಿನಗಳಲ್ಲಿ ಈ ಹಂತದಲ್ಲಿ ನಿಮ್ಮ ಆಶೀರ್ವಾದ ನನಗೆ ಬಹಳ ಸಮಾಧಾನ ತಂದಿದೆ. 65 ವರ್ಷಗಳ ರಾಜಕಾರಣದಲ್ಲಿ ನನ್ನನ್ನು ಎಲ್ಲಾ ಸಮಾಜದವರು ಬೆಳೆಸಿದ್ದಾರೆ. ಯಾವುದೇ ಒಂದು ಸಮಾಜ ಅಲ್ಲ, ಎಲ್ಲರೂ ನನ್ನನ್ನು ಎತ್ತಿ ಆಡಿಸಿಕೊಂಡಿ ಬಂದಿದ್ದಾರೆ. ಪ್ರಧಾನಿಯಾಗಿ ರೈತನ ಮಗ ಕೆಲಸ ಮಾಡಿದ್ದಾನೆ. ನಾಲ್ಕು ಎಕರೆ ಜಮೀನು ಇಟ್ಟುಕೊಂಡಿದ್ದ ರೈತನ ಮಗ ಆ ಸ್ಥಾನಕ್ಕೆ ಹೋಗಬೇಕಾದರೆ ಈ ರಾಜ್ಯದ ಎಲ್ಲ ಸಮಾಜಗಳು ಸಹಾಯ ಮಾಡಿದ್ದಾರೆ. ಇದನ್ನು ನಾನು ಎಂದಿಗೂ ಮರೆಯುವುದಿಲ್ಲ ಎಂದು ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡರು ಭಾವುಕರಾಗಿ ಹೇಳಿದರು.

ರಾಮಕೃಷ್ಣ ಹೆಗಡೆ ಅವರಿಗೆ ಒಮ್ಮೆ ಕಾಲಿಗೆ ನಮಸ್ಕಾರ ಮಾಡಿ, ಪಕ್ಷ ಉಳಿಸೋಣ. ನಡೆಯಿರಿ ಎಂದು ಹೇಳಿದ್ದೆ. ಆದರೆ ಅವರು, "ನೀನು ಶತ್ರುಗಳನ್ನು ಸೃಷ್ಟಿ ಮಾಡಿಕೊಳ್ತೀಯಾ ಎಂದರು. ನೀನು ಸತ್ಯ ಹೇಳ್ತೀಯಾ, ಅದರ ಜೊತೆಗ ನಗ್ನಸತ್ಯಗಳನ್ನ ಹೇಳ್ತೀಯಾ. ಅದಕ್ಕೆ ನಿನಗೆ ಹೆಚ್ಚು ಶತ್ರುಗಳು ಹುಟ್ಟಿಕೊಳ್ಳತ್ತಾರೆ" ಎಂದು ಹೇಳಿದ್ದರು. ಅವರ ಮಾತು ನನಗೆ ಚೆನ್ನಾಗಿ ನೆನಪಿದೆ. ಆದರೆ ಸತ್ಯಕ್ಕೆ ನಾನು ಯಾವತ್ತೂ ಬೆನ್ನು ತೋರಿಸಿದವನಲ್ಲ ಎಂದು ದೇವೇಗೌಡರು ಹಳೆಯ ರಾಜಕಾರಣವನ್ನು ನೆನಪು ಮಾಡಿಕೊಂಡರು.

ಇನ್ನೂ ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ಡಾ. ನಿರ್ಮಲಾನಂದ ನಾಥ ಮಹಾಸ್ವಾಮೀಜಿ, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಸಿದ್ದಗಂಗಾ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿ, ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಶ್ರೀ ನಂಜಾವಧೂತ ಮಹಾಸ್ವಾಮೀಜಿ, ಶ್ರೀ ರಾಮಕೃಷ್ಣ ಆಶ್ರಮದ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ, ಆದಿಚುಂಚನಗಿರಿ ವಿಜಯನಗರ ಶಾಖಾ ಮಠದ ಶ್ರೀ ಸೌಮ್ಯನಾಥ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಠದ ಶ್ರೀ ನಿಶ್ಚಲಾನಂದ ಸ್ವಾಮೀಜಿ ಅವರುಗಳೆಲ್ಲರೂ ದೇವೇಗೌಡರಿಗೆ ಗಂಗ ಸಾಮ್ರಾಟ ಶ್ರಿಪುರುಷ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಿದರು. ಈ ವೇಳೆ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರು, ದೇವೆಗೌಡರ ಕುಟುಂಬ ಸದಸ್ಯರು, ಸಾರ್ವಜನಿಕರು ಈ ಅರ್ಥಪೂರ್ಣ ಸಮಾರಂಭಕ್ಕೆ ಸಾಕ್ಷಿಯಾದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+