ತಾಯಿ, ಧರ್ಮಪತ್ನಿ ನೆನೆದು ಕಣ್ಣೀರಿಟ್ಟ ಹೆಚ್.ಡಿ. ದೇವೇಗೌಡ
ಬೆಂಗಳೂರು, ಜೂನ್ 23: ನಾಡಿನ ಸಂತಶ್ರೇಷ್ಟರ ಸಾನ್ನಿಧ್ಯದಲ್ಲಿ ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡ ಅವರಿಗೆ ಶ್ರೀ ಗಂಗ ಸಾಮ್ರಾಟ ಶ್ರಿಪುರುಷ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಯಿತು. ಪ್ರಶಸ್ತಿ ಸ್ವೀಕರಿಸಿ ತೀವ್ರ ಭಾವೋದ್ವೇಗಕ್ಕೆ ಒಳಗಾದ ದೇವೇಗೌಡರು, ತಮಗೆ ನೀಡಲಾದ ಈ ಪ್ರಶಸ್ತಿಗೆ ಸಮಸ್ತ ಕನ್ನಡಿಗರ ಪ್ರೀತಿ, ವಿಶ್ವಾಸ ಕಾರಣ ಹಾಗೂ ನನ್ನ ಬದುಕಿನುದ್ದಕ್ಕೂ ನನ್ನ ಪಾಲಿನ ಶಕ್ತಿಯಾಗಿ ಉಳಿದಿರುವ ನನ್ನ ಶ್ರೀಮತಿ ಚನ್ನಮ್ಮ ಅವರಿಗೆ ಹಾಗೂ ನನ್ನ ತಂದೆ ತಾಯಿಗೆ ನನ್ನ ಯಶಸ್ಸಿನ ಶ್ರೇಯಸ್ಸು ಸಲ್ಲಬೇಕು ಎಂದು ಹೇಳಿದರು.
ಶ್ರೀಮತಿ ಚನ್ನಮ್ಮ ಅವರು ಎಲ್ಲಾ ಹಂತದಲ್ಲಿ ನನ್ನ ಜೊತೆ ನಿಂತಿದ್ದಾರೆ. ಅನೇಕ ಕಷ್ಟಗಳ ಜೊತೆಗೆ ನನ್ನ ಗೌರವ ಉಳಿಸಿದ್ದಾರೆ. ಅವರ ಕೊಡುಗೆ ನೆನೆಸಿಕೊಳ್ಳುತ್ತೇನೆ ಎಂದು ಪತ್ನಿಯನ್ನು ನೆನೆದು ಕಣ್ಣೀರು ಹಾಕಿದ ದೇವೇಗೌಡರು, ಎಲ್ಲ ಮುಂದೆ ನಮ್ಮನ್ನು ನಿಲ್ಲುವಂತೆ ಶಕ್ತಿ ತಂದುಕೊಟ್ಟವರು ಶ್ರೀ ಬಾಲಗಂಗಾಧರ ಸ್ವಾಮೀಜಿ ಅವರು ಎಂದು ಗದ್ಗದಿತರಾದರು.

ನಾನು ಮುಖ್ಯಮಂತ್ರಿ ಆಗಿದ್ದಾಗ ಎಲ್ಲಾ ಕನ್ನಡಿಗರು ಸೇರಿ ಹದಿನಾರು ಲೋಕಸಭೆ ಕ್ಷೇತ್ರಗಳನ್ನು ಗೆಲ್ಲಿಸಿಕೊಟ್ಟಿದ್ದರು. ಅದರ ಪರಿಣಾಮವಾಗಿ ನಾನು ಪ್ರಧಾನಿಯಾಗಲು ಸಾಧ್ಯವಾಯಿತು ಎಂದ ದೇವೇಗೌಡರು, ಇದು ನನ್ನ ಜೀವನದ ಸಂದ್ಯಾಕಾಲ. ನಾನು ಇನ್ನೇನು ಮಾಡಲು ಸಾಧ್ಯ. ಆದರೂ ರಾಷ್ಟ್ರದ, ನಾಡಿನ ಜನರಿಗೆ ಏನಾದರೂ ಕಿಂಚಿತ್ತಾದರೂ ಅಳಿಲು ಸೇವೆ ಮಾಡಬೇಕು ಎನ್ನುವುದು ನನ್ನ ಮಹದಾಸೆ. ಅದಕ್ಕಾಗಿ ಗೋದಾವರಿ ನದಿ ನೀರು ಹಂಚಿಕೆಯಲ್ಲಿ ಕರ್ನಾಟಕಕ್ಕೆ ನ್ಯಾಯ ಮಾಡುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇನೆ ಹಾಗೂ ಮಾವಿಗೆ ಬೆಂಬಲ ಬೆಲೆ ಕೊಡಬೇಕು ಎಂದು ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೆ ಪತ್ರ ಬರೆದಿದ್ದೇನೆ ಎಂದು ಹೆಚ್ ಡಿ ದೇವೇಗೌಡರು ಹೇಳಿದರು.
ನನಗೆ 93ನೇ ವಯಸ್ಸಿನಲ್ಲಿ, ಜೀವನದ ಕೊನೆ ದಿನಗಳಲ್ಲಿ ಈ ಹಂತದಲ್ಲಿ ನಿಮ್ಮ ಆಶೀರ್ವಾದ ನನಗೆ ಬಹಳ ಸಮಾಧಾನ ತಂದಿದೆ. 65 ವರ್ಷಗಳ ರಾಜಕಾರಣದಲ್ಲಿ ನನ್ನನ್ನು ಎಲ್ಲಾ ಸಮಾಜದವರು ಬೆಳೆಸಿದ್ದಾರೆ. ಯಾವುದೇ ಒಂದು ಸಮಾಜ ಅಲ್ಲ, ಎಲ್ಲರೂ ನನ್ನನ್ನು ಎತ್ತಿ ಆಡಿಸಿಕೊಂಡಿ ಬಂದಿದ್ದಾರೆ. ಪ್ರಧಾನಿಯಾಗಿ ರೈತನ ಮಗ ಕೆಲಸ ಮಾಡಿದ್ದಾನೆ. ನಾಲ್ಕು ಎಕರೆ ಜಮೀನು ಇಟ್ಟುಕೊಂಡಿದ್ದ ರೈತನ ಮಗ ಆ ಸ್ಥಾನಕ್ಕೆ ಹೋಗಬೇಕಾದರೆ ಈ ರಾಜ್ಯದ ಎಲ್ಲ ಸಮಾಜಗಳು ಸಹಾಯ ಮಾಡಿದ್ದಾರೆ. ಇದನ್ನು ನಾನು ಎಂದಿಗೂ ಮರೆಯುವುದಿಲ್ಲ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಭಾವುಕರಾಗಿ ಹೇಳಿದರು.
ರಾಮಕೃಷ್ಣ ಹೆಗಡೆ ಅವರಿಗೆ ಒಮ್ಮೆ ಕಾಲಿಗೆ ನಮಸ್ಕಾರ ಮಾಡಿ, ಪಕ್ಷ ಉಳಿಸೋಣ. ನಡೆಯಿರಿ ಎಂದು ಹೇಳಿದ್ದೆ. ಆದರೆ ಅವರು, "ನೀನು ಶತ್ರುಗಳನ್ನು ಸೃಷ್ಟಿ ಮಾಡಿಕೊಳ್ತೀಯಾ ಎಂದರು. ನೀನು ಸತ್ಯ ಹೇಳ್ತೀಯಾ, ಅದರ ಜೊತೆಗ ನಗ್ನಸತ್ಯಗಳನ್ನ ಹೇಳ್ತೀಯಾ. ಅದಕ್ಕೆ ನಿನಗೆ ಹೆಚ್ಚು ಶತ್ರುಗಳು ಹುಟ್ಟಿಕೊಳ್ಳತ್ತಾರೆ" ಎಂದು ಹೇಳಿದ್ದರು. ಅವರ ಮಾತು ನನಗೆ ಚೆನ್ನಾಗಿ ನೆನಪಿದೆ. ಆದರೆ ಸತ್ಯಕ್ಕೆ ನಾನು ಯಾವತ್ತೂ ಬೆನ್ನು ತೋರಿಸಿದವನಲ್ಲ ಎಂದು ದೇವೇಗೌಡರು ಹಳೆಯ ರಾಜಕಾರಣವನ್ನು ನೆನಪು ಮಾಡಿಕೊಂಡರು.
ಇನ್ನೂ ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ಡಾ. ನಿರ್ಮಲಾನಂದ ನಾಥ ಮಹಾಸ್ವಾಮೀಜಿ, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಸಿದ್ದಗಂಗಾ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿ, ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಶ್ರೀ ನಂಜಾವಧೂತ ಮಹಾಸ್ವಾಮೀಜಿ, ಶ್ರೀ ರಾಮಕೃಷ್ಣ ಆಶ್ರಮದ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ, ಆದಿಚುಂಚನಗಿರಿ ವಿಜಯನಗರ ಶಾಖಾ ಮಠದ ಶ್ರೀ ಸೌಮ್ಯನಾಥ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಠದ ಶ್ರೀ ನಿಶ್ಚಲಾನಂದ ಸ್ವಾಮೀಜಿ ಅವರುಗಳೆಲ್ಲರೂ ದೇವೇಗೌಡರಿಗೆ ಗಂಗ ಸಾಮ್ರಾಟ ಶ್ರಿಪುರುಷ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಿದರು. ಈ ವೇಳೆ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರು, ದೇವೆಗೌಡರ ಕುಟುಂಬ ಸದಸ್ಯರು, ಸಾರ್ವಜನಿಕರು ಈ ಅರ್ಥಪೂರ್ಣ ಸಮಾರಂಭಕ್ಕೆ ಸಾಕ್ಷಿಯಾದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications