ಮೋದಿ-ದೇವೇಗೌಡ ಭೇಟಿಯ ಸ್ಪೋಟಕ ಮಾಹಿತಿ ಹಂಚಿಕೊಂಡ ಬೊಮ್ಮಾಯಿ!
ಹುಬ್ಬಳ್ಳಿ, ಡಿ. 01: ಕೋವಿಡ್ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲ ಅಂತರರಾಷ್ಟ್ರೀಯ ಪ್ರಯಾಣಿಕರ ತಪಾಸಣೆ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬುಧವಾರ ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಬೆಂಗಳೂರು ವಿಮಾನ ನಿಲ್ದಾಣಕ್ಕೆ ಪ್ರತಿನಿತ್ಯ ಸುಮಾರು 2500 ಅಂತರರಾಷ್ಟ್ರೀಯ ಪ್ರಯಾಣಿಕರು ಬರುತ್ತಾರೆ. ಜೊತೆಗೆ ಕೆಲವರು ಮಂಗಳೂರು ವಿಮಾನ ನಿಲ್ದಾಣಕ್ಕೂ ಬಂದಿಳಿಯುತ್ತಾರೆ. ಕೊರೊನಾ ವೈರಸ್ ಕಳೆದ ಬಾರಿ ಸೃಷ್ಟಿಸಿದ್ದ ಸಂಕಷ್ಟದ ಅನುಭವದ ಮೇರೆಗೆ ಈಗಿನಿಂದಲೇ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿವರಿಸಿದರು.
ಕೊರೊನಾ ವೈರಸ್ ಕುರಿತು ಜನರಿಗೆ ಅನಗತ್ಯ ಆತಂಕ ಬೇಡ, ಜೊತೆಗೆ ಕೋವಿಡ್ ಹೊಸ ತಳಿಯ ಕುರಿತು ಜನತೆ ಅನಗತ್ಯ ಆತಂಕಕ್ಕೆ ಒಳಗಾಗಬಾರದು. ಜನರು ಈಗ ತಾನೇ ಆರ್ಥಿಕವಾಗಿ, ಸಾಮಾಜಿಕ ವಾಗಿ ಸುಧಾರಿಸಿಕೊಂಡು ಕೆಲಸ ಮಾಡುತ್ತಿದ್ದಾರೆ. ಲಾಕ್ಡೌನ್ ಪ್ರಸ್ತಾವ ನಮ್ಮ ಮುಂದಿಲ್ಲ ಎಂದು ಇದೇ ವೇಳೆ ಮತ್ತೊಮ್ಮೆ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಇದೇ ವೇಳೆ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಫೋಟಕ ಮಾಹಿತಿ ಹಂಚಿಕೊಂಡಿದ್ದಾರೆ.

ಗುರುವಾರ ದೆಹಲಿಗೆ ಹೋಗುತ್ತೇನೆ!
ನಾಳೆ ಡಿಸೆಂಬರ್ 2 ರಂದು ದೆಹಲಿಗೆ ತೆರಳುವುದಾಗಿ ಹುಬ್ಬಳ್ಳಿಯಲ್ಲಿ ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. "ದೆಹಲಿ ಪ್ರವಾಸದ ಸಂದರ್ಭದಲ್ಲಿ ಕೇಂದ್ರ ಆರೋಗ್ಯ ಸಚಿವರನ್ನು ಭೇಟಿಯಾಗಿ ಬೂಸ್ಟರ್ ಡೋಸ್ ಬಗ್ಗೆ ಚರ್ಚೆ ನಡೆಸುತ್ತೇನೆ. ಆರೋಗ್ಯ ಕಾರ್ಯಕರ್ತರು ಹಾಗೂ ಮುಂಚೂಣಿಯಲ್ಲಿರುವ ಕೋವಿಡ್ ಕಾರ್ಯಕರ್ತರು ಲಸಿಕೆ ಪಡೆದು 6 ತಿಂಗಳಾಗಿವೆ. ಈ ಹಿನ್ನೆಲೆಯಲ್ಲಿ ಅವರಿಗೆ ಬೂಸ್ಟರ್ ಡೋಸ್ ನೀಡುವ ಬಗ್ಗೆ ವೈಜ್ಞಾನಿಕವಾಗಿ ಆಗಿರುವ ಪ್ರಗತಿ ಹಾಗೂ ಕೇಂದ್ರ ಸರ್ಕಾರದ ಶಿಫಾರಸುಗಳ ಬಗ್ಗೆ ಚರ್ಚಿಸುತ್ತೇನೆ" ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಪ್ರಧಾನಿ ಮೋದಿ ಭೇಟಿ ಮಾಡಿರುವ ಬಗ್ಗೆ ಮಾತನಾಡಿರುವ ಸಿಎಂ ಬೊಮ್ಮಾಯಿ, "ಮಾಜಿ ಪ್ರಧಾನಿ ದೇವೇಗೌಡ ಹಾಗೂ ಪ್ರಧಾನಿ ಮೋದಿ ಅವರು ಹಲವಾರು ವಿಷಯಗಳ ಕುರಿತು ಚರ್ಚಿಸಿದ್ದಾರೆ. ಅದರಲ್ಲಿ ಸ್ಥಳೀಯವಾಗಿ ಮೈತ್ರಿ ಮಾಡಿಕೊಳ್ಳುವುದೂ ಸೇರಿದೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಹೆಚ್.ಡಿ. ಕುಮಾರಸ್ವಾಮಿ ಅವರು ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
ಆದರೆ ಈ ಮೈತ್ರಿ ವಿಧಾನ ಪರಿಷತ್ ಚುನಾವಣೆಗೆ ಮಾತ್ರ ಎಂಬ ಮಾಹಿತಿ 'ಒನ್ಇಂಡಿಯಾ ಕನ್ನಡ'ಕ್ಕೆ ಲಭ್ಯವಾಗಿದೆ. ಇದೇ ವೇಳೆ ಕೊರೊನಾ ವೈರಸ್ ತಡೆಯ ಬಗ್ಗೆಯೂ ಸಿಎಂ ಬೊಮ್ಮಾಯಿ ಮಾತನಾಡಿದ್ದಾರೆ.

ಯಾರಿಗೆ ಕೊರೊನಾ ಬೂಸ್ಟರ್ ಡೋಸ್?
ಯಾರಿಗೆ ಕೊರೊನಾ ಬೂಸ್ಟರ್ ಡೋಸ್ ಲಸಿಕೆಯನ್ನು ಯಾರಿಗೆ ಕೊಡಲಾಗುತ್ತದೆ ಎಂಬುದರ ಬಗ್ಗೆ ಸಿಎಂ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. "ಫ್ರಂಟ್ಲೈನ್ ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡುವುದು ಸೂಕ್ತ ಎನ್ನುವುದು ತಜ್ಞರ ಅನಿಸಿಕೆ ಕೂಡ ಆಗಿದೆ" ಎಂದು ಅವರು ತಿಳಿಸಿದ್ದಾರೆ.
ಇನ್ನು ಕೊರೊನಾ ರೂಪಾಂತರ ತಳಿ ವೈರಸ್ ಬಗ್ಗೆ ಮಾತನಾಡಿರುವ ಬೊಮ್ಮಾಯಿ, "ಈಗಾಗಲೇ ಒಂದು ಮಾದರಿಯನ್ನು ಕೇಂದ್ರದ ಎನ್.ಸಿ.ಬಿ.ಎಸ್ಗೆ ಪರೀಕ್ಷೆಗಾಗಿ ಕಳುಹಿಸಲಾಗಿದೆ. ವರದಿ ಬಂದ ತಕ್ಷಣ ಕ್ರಮ ಜರುಗಿಸಲಾಗುವುದು. ಕೇರಳ ಗಡಿಯಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ ಹಾಗೂ ಲಸಿಕೆ ಹಾಕುವುದನ್ನು ತೀವ್ರಗೊಳಿಸಲಾಗಿದೆ" ಎಂದು ಹೇಳಿದ್ದಾರೆ.

ವಿದೇಶಿ ಪ್ರಯಾಣಿಕರ ಮೇಲೆ ನಿಗಾ!
ವಿದೇಶಿ ಪ್ರಯಾಣಿಕರು ಹಾಗೂ ಕೇರಳ ಜಿಲ್ಲೆಯ ವಿದ್ಯಾರ್ಥಿಗಳ ಪರೀಕ್ಷೆಗೆ ಮುಖ್ಯವಾಗಿ ನಿಗಾ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲಿ ಕೇರಳದ ಅರೆ ವೈದ್ಯಕೀಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿದ್ದಾರೆ. ಹೀಗಾಗಿ ಅವರೆಲ್ಲರ ಮೇಲೆ ನಿಗಾ ಇಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಧಾರವಾಡದ ಜಿಲ್ಲೆಯಲ್ಲಿ 306 ಜನರು ಪಾಸಿಟಿವ್ ಬಂದಿದ್ದು, 7 ದಿನಗಳ ನಂತರದ ಪರೀಕ್ಷೆಯಲ್ಲಿ ಇಬ್ಬರು ಮಾತ್ರ ಪಾಸಿಟಿವ್ ಇದ್ದಾರೆ ಎಂದರು. ಯಾರಿಗೂ ತೀವ್ರ ಲಕ್ಷಣಗಳಿಲ್ಲದೇ, ಪರಿಸ್ಥಿತಿ ನಿಯಂತ್ರಣದಲ್ಲಿದೆ. ಈಗಾಗಲೇ ಸುಮಾರು 7 ಸಾವಿರ ಜನರಿಗೆ ಈಗಾಗಲೇ ಪರೀಕ್ಷೆ ಮಾಡಿದ್ದು, 500 ಮೀಟರ್ ವ್ಯಾಪ್ತಿಯೊಳಗೆ 1000 ಕ್ಕೂ ಹೆಚ್ಚು ಜನರ ಪರೀಕ್ಷೆ ಮಾಡಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

2-3 ದಿನಗಳಲ್ಲಿ ಎಲ್ಲರಿಗೂ ಹಣ ಬಿಡುಗಡೆ!
ರಾಜ್ಯದಲ್ಲಿನ ಕಿರಿಯ ವೈದ್ಯರು ಮಾಡಲು ನಿರ್ಧರಿಸಿರುವ ಮುಷ್ಕರದ ಬಗ್ಗೆ ಪ್ರತಿಕ್ರಿಯೆ ಕೊಟ್ಟಿರುವ ಸಿಎಂ ಬೊಮ್ಮಾಯಿ ಅವರು, "ಈಗಾಗಲೇ ಹಣವನ್ನು ಬಿಡುಗಡೆ ಮಾಡಲಾಗಿದೆ. ಕೆಲವು ಕಾಲೇಜುಗಳಲ್ಲಿ ದಾಖಲೆಗಳಿಲ್ಲದೆ ಪಾವತಿಗೆ ತೊಂದರೆಯಾಗಿದೆ. ದಾಖಲೆಗಳಿದ್ದವರಿಗೆ ಕೋವಿಡ್ 19 ಹಾಗೂ ಶಿಷ್ಯವೇತನ ಪಾವತಿಸಲು ಈಗಾಗಲೇ ಸೂಚಿಸಲಾಗಿದೆ. ಮುಂದಿನ 2-3 ದಿನಗಳಲ್ಲಿ ಎಲ್ಲರಿಗೂ ಹಣವನ್ನು ಬಿಡುಗಡೆ ಮಾಡಲಾಗುವುದು" ಎಂದು ಭರವಸೆ ನೀಡಿದ್ದಾರೆ.
Recommended Video
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications