Get Updates
Get notified of breaking news, exclusive insights, and must-see stories!

ಜೆಡಿಎಸ್‌ ರಾಜ್ಯಾಧ್ಯಕ್ಷೆಯಾಗಿ ಭವಾನಿ ರೇವಣ್ಣ ನೇಮಕ? ದೇವೇಗೌಡರಿಂದ ಅಚ್ಚರಿ ನಿರ್ಧಾರ? ಇನ್‌ಸೈಡ್‌ ರಿಪೋರ್ಟ್‌

ಬೆಂಗಳೂರು, ಮೇ 25: ಜೆಡಿಎಸ್ ಸೋಲಿನ ನೈತಿಕ ಹೊಣೆ ಹೊತ್ತು ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಫಲಿತಾಂಶ ಬಂದ ಒಂದು ದಿನದ ನಂತರ ರಾಜೀನಾಮೆ ಕಳುಹಿಸಿರುವುದಾಗಿ ಇಬ್ರಾಹಿಂ ಹೇಳಿದ್ದಾರೆ. ಇದೇ ವೇಳೆ ಮಾಜಿ ಸಚಿವ, ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ, ಇಬ್ರಾಹಿಂ ರಾಜೀನಾಮೆ ಅಗತ್ಯವಿಲ್ಲ, ಈ ನಿಟ್ಟಿನಲ್ಲಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಜತೆ ಚರ್ಚೆ ನಡೆಸುವುದಾಗಿ ಹೇಳಿದ್ದಾರೆ.

ಜೆಡಿಎಸ್‌ಗೆ ಮತ ಹಾಕಿದರೆ ಪಕ್ಷ ಬಿಜೆಪಿಗೆ ಬೆಂಬಲ ನೀಡಲಿದೆ ಎಂಬ ವದಂತಿ ಹಬ್ಬಿಸಲಾಗಿದ್ದು, ಇದು ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಸೋಲಿಗೆ ಕಾರಣವಾಯಿತು ಎಂದು ಜಿಟಿ ದೇವೇಗೌಡ ಹೇಳಿದ್ದಾರೆ.

Bhavani Revanna as the New JDS State President

ದೇವೇಗೌಡರು ಬುಧವಾರ ಬೆಂಗಳೂರಿನ ಪದ್ಮನಾಭನಗರದ ನಿವಾಸದಲ್ಲಿ ಪಕ್ಷದ ನೂತನ ಶಾಸಕರನ್ನು ಭೇಟಿ ಮಾಡಿ ಆತ್ಮಾವಲೋಕನ ನಡೆಸುವಂತೆ ಪಕ್ಷದ ಮುಖಂಡರಿಗೆ ಸೂಚಿಸಿದರು.

ಜೆಡಿಎಸ್‌ನ ನೂತನ ಶಾಸಕರು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರನ್ನು ನೂತನ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ.

ಬುಧವಾರ ಸಭಾಧ್ಯಕ್ಷರ ಕ್ಯಾಬಿನ್‌ನಲ್ಲಿ ಜೆಡಿಎಸ್‌ನ ಇತರ ನಾಯಕರೊಂದಿಗೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಕುಮಾರಸ್ವಾಮಿ ಅವರು, ಶೀಘ್ರದಲ್ಲೇ ಆತ್ಮಾವಲೋಕನ ಸಭೆ ನಡೆಸಲಿದ್ದು, ಎಲ್ಲ ನಾಯಕರಿಗೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ನೀಡಲಾಗುವುದು ಎಂದು ಹೇಳಿದರು.

Bhavani Revanna as the New JDS State President

ಇದೇ ವೇಳೆ ಹಲವಾರು ಯುವ ನಾಯಕರಿಗೆ ಪಕ್ಷವನ್ನು ಬಲಪಡಿಸುವ ಜವಾಬ್ದಾರಿಯನ್ನು ನೀಡಲಾಗುವುದು ಎಂದು ಕುಮಾರಸ್ವಾಮಿ ಸುಳಿವು ನೀಡಿದರು.

ಪಕ್ಷದ ಯುವ ಘಟಕದ ರಾಜ್ಯಧ್ಯಕ್ಷರಾಗಿದ್ದ ನಿಖಿಲ್‌ ಕುಮಾರಸ್ವಾಮಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ರಾಮನಗರ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿ ಕಾಂಗ್ರೆಸ್‌ ಅಭ್ಯರ್ಥಿ ವಿರುದ್ಧ ಸೋಲು ಅನುಭವಿಸಿದ್ದಾರೆ.

ಜೆಡಿಎಸ್‌ ರಾಜ್ಯಾಧ್ಯಕ್ಷೆಯಾಗಿ ಭವಾನಿ ರೇವಣ್ಣ ನೇಮಕ?

ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಅವರನ್ನು ಪರಿಗಣಿಸಬಹುದು ಎಂಬ ಊಹಾಪೋಹಗಳ ನಡುವೆ ಮಾಜಿ ಸಚಿವ ಎಚ್.ಡಿ.ರೇವಣ್ಣ, ಅಂತಹ ಯಾವುದೇ ಪ್ರಸ್ತಾಪವಿಲ್ಲ, ದೇವೇಗೌಡ ಮತ್ತು ಕುಮಾರಸ್ವಾಮಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.

Bhavani Revanna as the New JDS State President

ಆದರೆ, ಪಕ್ಷದ ಹಲವು ಮುಖಂಡರು ಭವಾನಿ ರೇವಣ್ಣ ಅವರ ನಾಮನಿರ್ದೇಶನಕ್ಕೆ ಒಲವು ತೋರಿದ್ದಾರೆ. ಭವಾನಿ ಅವರು ಪಕ್ಷವನ್ನು ಮುನ್ನಡೆಸುವ ಸಾಮರ್ಥ್ಯ ಹೊಂದಿದ್ದಾರೆ ಎಂಬುದು ಹಲವು ನಾಯಕರ ಅಭಿಪ್ರಾಯವಾಗಿದೆ.

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಭವಾನಿ ರೇವಣ್ಣ ಅವರು ಸ್ಪರ್ಧಿಸಲು ಬಯಸಿದ್ದರು. ಆದರೆ, ಅವರಿಗೆ ಟಿಕೆಟ್‌ ನಿರಾಕರಿಸಿ ಸ್ವರೂಪ್‌ ಅವರಿಗೆ ಟಿಕೆಟ್‌ ನೀಡಲಾಯಿತು. ಇದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರು ಮಧ್ಯಸ್ಥಿಕೆ ವಹಿಸಿದ್ದರು. ಟಿಕೆಟ್‌ ಸಿಗದಿದ್ದರೂ, ಹಾಸನದಲ್ಲಿ ಸ್ವರೂಪ್‌ ಅವರ ಗೆಲುವಿಗೆ ಭವಾನಿ ಸಾಕಷ್ಟು ಶ್ರಮ ವಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಪಕ್ಷದ ವರಿಷ್ಠರಾದ ದೇವೇಗೌಡ ಅವರು ಅಚ್ಚರಿಯ ನಿರ್ಧಾರವನ್ನು ತೆಗೆದುಕೊಂಡರೂ ಅಚ್ಚರಿ ಪಡಬೇಕಿಲ್ಲ.

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ 19 ಕ್ಷೇತ್ರಗಳನ್ನು ಮಾತ್ರ ಪಡೆಯುವಲ್ಲಿ ಯಶಸ್ವಿಯಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+