'ಫರೋಸ್ ಇನ್ ಎ ಫೀಲ್ಡ್: ದಿ ಅನ್ಎಕ್ಸ್ಪ್ಲೋರ್ಡ್ ಲೈಫ್ ಆಫ್ ಹೆಚ್.ಡಿ.ದೇವೇಗೌಡʼ ಪುಸ್ತಕ ಬಿಡುಗಡೆ
ನವದೆಹಲಿ, ಡಿ.14: ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರ ಜೀವನಾಧಾರಿತ ಕೃತಿ 'ಫರೋಸ್ ಇನ್ ಎ ಫೀಲ್ಡ್: ದಿ ಅನ್ಎಕ್ಸ್ಪ್ಲೋರ್ಡ್ ಲೈಫ್ ಆಫ್ ಹೆಚ್.ಡಿ.ದೇವೇಗೌಡʼ (Furrows in a Field: The Unexplored Life of H.D. Deve Gowda) ಕೃತಿಯನ್ನು ಖ್ಯಾತ ವಕೀಲ ಫಾಲಿ ಎಫ್ ನಾರಿಮನ್ ಅವರು ಸೋಮವಾರ ಲೋಕಾರ್ಪಣೆ ಮಾಡಿದರು.
ಇಲ್ಲಿನ ಮಲ್ಟಿಪರ್ಪೋಸ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆದ ಸರಳ ಸಮಾರಂಭದಲ್ಲಿ ಆನ್ಲೈನ್ ವೇದಿಕೆಯ ಮೂಲಕ ನಾರಿಮನ್ ಅವರು ಕೃತಿಯನ್ನು ದೇವೇಗೌಡರ ಸಮಕ್ಷಮದಲ್ಲಿ ಬಿಡುಗಡೆ ಮಾಡಿದರು. ಹಿರಿಯ ಪತ್ರಕರ್ತ ಸುಗತಾ ಶ್ರೀನಿವಾಸರಾಜು ಅವರು ಈ ಪುಸ್ತಕವನ್ನು ಬರೆದಿದ್ದಾರೆ.
ಗೌಡರ ರಾಜಕೀಯ ಜೀವನ ಮೆಲುಕು
ಈ ಸಂದರ್ಭದಲ್ಲಿ ಮಾತನಾಡಿದ ನಾರಿಮನ್ ಅವರು, ದೇವೇಗೌಡರ ಸುದೀರ್ಘ ರಾಜಕೀಯ ಜೀವನದ ಮಜಲುಗಳನ್ನು ಮೆಲುಕು ಹಾಕಿದರು. ಮುಖ್ಯವಾಗಿ ನೆರೆ ರಾಜ್ಯಗಳೊಂದಿಗೆ ಸಂಘರ್ಷಕ್ಕೆ ಕಾರಣವಾಗಿದ್ದ ಕೃಷ್ಣಾ ಮತ್ತು ಕಾವೇರಿ ಕೊಳ್ಳಗಳ ಜಲವಿವಾದಗಳ ಬಗ್ಗೆ ಗೌಡರು ಕೈಗೊಂಡ ಕಠಿಣ ಕ್ರಮಗಳ ಬಗ್ಗೆ ಮುಖ್ಯವಾಗಿ ಉಲ್ಲೇಖ ಮಾಡಿದರು.

60 ವರ್ಷಗಳ ಸುದೀರ್ಘ ರಾಜಕೀಯ ಜೀವನವುಳ್ಳ ದೇವೇಗೌಡರನ್ನು ಪುಸ್ತಕದಲ್ಲಿ ದೊಡ್ಡ ಜೀವ ಎಂದು ಕರೆಯಲಾಗಿದೆ. ದೊಡ್ಡ ಜೀವದ ಜತೆ ಸಂಭ್ರಮಿಸುತ್ತಿದ್ದೇವೆ ಎಂದು ಬರೆಯಲಾಗಿದೆ. ಆದರೆ, ಅವರು ತಾವು ರಾಜಕೀಯ ಜೀವನ ಆರಂಭಿಸಿದಾಗ ಅವರಿಗೆ ತಾವೊಬ್ಬ ದೊಡ್ಡ ಜೀವ ಆಗುತ್ತೇನೆಂಬ ಕಲ್ಪನೆಯೇ ಇರಲಿಲ್ಲ. ಆದರೆ ದೇವೇಗೌಡರು ಹಾಗೆ ಬೆಳೆದು ಸಾಧಿಸಿದರು ಎಂದು ನಾರಿಮನ್ ಅವರು ಅಭಿಪ್ರಾಯಪಟ್ಟರು.
1962ರಲ್ಲಿ ಪಕ್ಷೇತರ ಶಾಸಕರಾಗಿ ಗೌಡರು ರಾಜ್ಯ ವಿಧಾನಸಭೆಗೆ ಕಾಲಿಟ್ಟ ಕೂಡಲೇ ಅವರು ಪ್ರಸ್ತಾಪ ಮಾಡಿದ್ದು, ರಾಜ್ಯಕ್ಕೆ ಹಂಚಿಕೆಯಾಗಿರುವ ಕಾವೇರಿ ನೀರನ್ನು ಸದ್ಬಳಕೆ ಮಾಡಿಕೊಳ್ಳುವ ಬಗ್ಗೆ. ಜತೆಗೆ ಒಂದು ನಿರ್ಣಯವನ್ನೂ ಮಂಡಿಸಿದರು. ಅದಾದ ಮೇಲೆ ಕರ್ನಾಟಕ ಸರಕಾರವು ಕಾವೇರಿ ಕೊಳ್ಳದ ತನ್ನ ಪಾಲಿನ ನೀರನ್ನು ಸಮರ್ಪಕವಾಗಿ ಬಳಿಸಿಕೊಳ್ಳುವ ನಿರ್ಧಾರ ಕೈಗೊಂಡಿತು ಎಂದು ಅವರು ವಿವರಿಸಿದರು.

ಆ ನಿರ್ಣಯ ಮಂಡಿಸಿ ಗೌಡರು ಮಾಡಿದ ಭಾಷಣವನ್ನು ಉಲ್ಲೇಖಿಸಿದ ನಾರಿಮನ್ ಅವರು; ಹಾಸನ, ಮೈಸೂರು, ಕೊಡಗು, ಮಂಡ್ಯ, ಚಿತ್ರದುರ್ಗ, ಬೆಂಗಳೂರು ಮುಂತಾದ ಜಿಲ್ಲೆಗಳ ನೀರಿನ ಬವಣೆಯನ್ನು ಹಾಗೂ ಕಾವೇರಿ ನೀರನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದ್ದರು. ಅವರ ಮಾತುಗಳನ್ನು ಹಿರಿಯ ನಾಯಕರಾದ ನಿಜಲಿಂಗಪ್ಪ, ವೀರೇಂದ್ರ ಪಾಟೀಲ್ ಅವರುಗಳೆಲ್ಲ ಆಲಿಸಿ ನೀರಿನ ಬಳಕೆ ಬಗ್ಗೆ ನಿರ್ಧಾರ ಕೈಗೊಂಡಿದ್ದರು ಎಂದರು.
ಇಷ್ಟೇ ಅಲ್ಲದೆ, ರಾಜ್ಯದಲ್ಲಿ ಬಲಿಷ್ಠ ಸಮುದಾಯಗಳ ನಡುವೆ ನಡೆಯುತ್ತಿದ್ದ ರಾಜಕೀಯ ಮೇಲಾಟ, ಕೊನೆಗೆ ಹೋರಾಟಕ್ಕೆ ಮನ್ನಣೆ ಸಿಕ್ಕಿ ದೇವೇಗೌಡರು ರಾಜ್ಯದ ಮುಖ್ಯಮಂತ್ರಿಗಳಾದ ಘಟನಾವಳಿಗಳ ಬಗ್ಗೆ ನಾರಿಮನ್ ಅವರು ಪ್ರಸ್ತಾಪ ಮಾಡಿದರು.
ಫಾರೂಕ್ ಅಬ್ದುಲ್ಲಾ ಕಂಬನಿ:
ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು, ಕಣೆವೆಯಲ್ಲಿ ಬಹಳ ದುಸ್ತರ ಸಂದರ್ಭವಿದ್ದ ವೇಳೆಯಲ್ಲಿ ಗೌಡರು ಈ ದೇಶದ ಪ್ರಧಾನಿ ಆಗಿದ್ದರು. ಆಗ ನಮ್ಮ ರಾಜ್ಯದಲ್ಲಿ ಪರಿಸ್ಥಿತಿ ವಿಪರೀತ ವಿಷಮವಾಗಿತ್ತು ಎಂದರು.

ಕಾಶ್ಮೀರದ ಸಮಸ್ಯೆಯನ್ನು ಬಗೆಹರಿಸಲು ಗೌಡರು ಬಹುದೊಡ್ಡ ರಿಸ್ಕ್ ತೆಗೆದುಕೊಂಡಿದ್ದರು. ಆ ಸಂದರ್ಭದಲ್ಲಿ ಅನೇಕ ಸಲ ಅವರನ್ನು ಪ್ರಧಾನಿ ಕಚೇರಿಯಲ್ಲಿ ಭೇಟಿಯಾಗಿದ್ದೆ. ಅಂಥ ಕಠಿಣ ಸಂದರ್ಭದಲ್ಲಿ ಕಣಿವೆ ರಾಜ್ಯವನ್ನು ಗೌಡರು ನಿರ್ವಹಿಸಿದ ರೀತಿ ಕೆಚ್ಚೆದೆಯಿಂದ ಕೂಡಿತ್ತು. ಆಗ ದೇವೇಗೌಡರು ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದರು. ಅದು ನನ್ನ ಪಾಲಿಗೆ ಹೊಸ ಆರಂಭ. ಆಗ ಗೌಡರ ದೃಢ ನಿರ್ಧಾರದಿಂದ ಅಷ್ಟು ವಿಷಮ ಸ್ಥಿತಿಯಲ್ಲಿದ್ದ ಜಮ್ಮು ಕಾಶ್ಮೀರದಲ್ಲಿ ಚುನಾವಣೆ ನಡೆದು ನಾನು ಅಧಿಕಾರಕ್ಕೆ ಬಂದೆ ಎಂದು ಫಾರೂಕ್ ಅಬ್ದುಲ್ಲಾ ಅವರು ಗದ್ಗದಿತರಾದರು.
ಈ ಕಾರಣಕ್ಕೆ ಜಮ್ಮು, ಕಾಶ್ಮೀರ, ಲಡಾಖ್ ಜನರು ಎಂದೆಂದಿಗೂ ದೇವೇಗೌಡರಿಗೆ ಋಣಿಯಾಗಿರುತ್ತಾರೆಂದು ಅವರು ಕಣ್ಣಂಚಿನಲ್ಲಿ ನೀರು ತುಂಬಿಕೊಂಡೇ ಹೇಳಿದರು.

ಕೇಂದ್ರದ ಮಾಜಿ ಸಚಿವ ಜೈರಾಂ ರಮೇಶ್ ಗೌಡರು ಮತ್ತು ಕೃತಿಯ ಬಗ್ಗೆ ಮಾತನಾಡಿದರು. ಸಿಪಿಎಂ ಮುಖಂಡ ಸೀತಾರಾಂ ಯೆಚೂರಿಯವರು ಗೌಡರ ಜತೆಗಿನ ತಮ್ಮ ಬಾಂಧವ್ಯವನ್ನು ಮೆಲುಕು ಹಾಕಿದರು. ಲೇಖಕ ಸುಗತಾ ಶ್ರೀನಿವಾಸ ರಾಜು ಪ್ರಾಸ್ತಾವಿಕವಾಗಿ ಮಾತನಾಡಿದರು.
ದೇವೇಗೌಡರ ಸಂಪುಟದಲ್ಲಿ ವಿತ್ತ ಸಚಿವರಾಗಿದ್ದ ಪಿ.ಚಿದಂಬರಂ, ಜನರಲ್ ಧಿಲ್ಲೋನ್, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಚನ್ನಮ್ಮ ದೇವೇಗೌಡರು ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
Recommended Video
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications