ಅತಿವೃಷ್ಟಿ ಪರಿಸ್ಥಿತಿ ನಿರ್ವಹಿಸಲು ಸರ್ಕಾರಕ್ಕೆ ಸಲಹೆ ನೀಡಿದ ಎಚ್ಡಿಕೆ
ಬೆಂಗಳೂರು, ಆಗಸ್ಟ 7: ಕರ್ನಾಟಕ ರಾಜ್ಯದಲ್ಲಿ ಭಾರಿ ಮಳಯಾಗುತ್ತಿದ್ದು, ಇದರಿಂದ ಕೊಡಗು, ಕರಾವಳಿ ಹಾಗೂ ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಪ್ರವಾಹದ ಭೀತಿ ಉಂಟಾಗಿದೆ.
Recommended Video
ಮಳೆಯಿಂದ ಕಳೆದ ವರ್ಷ ಸೃಷ್ಟಿಯಾಗಿದ್ದ ಅವಾಂತರ ಮತ್ತೆ ಉದ್ಬವವಾಗಿಬಿಡುತ್ತಾ ಎಂಬ ಆತಂಕ ಎದುರಾಗಿದೆ. ಈ ಕುರಿತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ಎಚ್ಚರಿಕೆ ನೀಡಿದ್ದಾರೆ.
'ಮುಂಗಾರು ಮಳೆಗೆ ನಲುಗಿರುವ ರಾಜ್ಯದ ಜನತೆ ಮತ್ತು ಜಾನುವಾರುಗಳ ರಕ್ಷಣೆಗೆ ಸರ್ಕಾರ ಸಮರೋಪಾದಿಯಲ್ಲಿ ಸ್ಪಂದಿಸುವ ಪರಿಹಾರ ಕಾಮಗಾರಿಗಳನ್ನು ಅನುಷ್ಠಾನ ಮಾಡುವಂತೆ' ಆಗ್ರಹಿಸಿದ್ದಾರೆ. ಮುಂದೆ ಓದಿ...

ಜಿಲ್ಲಾವಾರು ವಿಶೇಷ ಕಾರ್ಯಪಡೆ ರಚಿಸಿ
ಈ ಬಾರಿಯೂ ರಾಜ್ಯ ಅತಿವೃಷ್ಟಿಯ ಸಂಕಷ್ಟಕ್ಕೆ ಸಿಲುಕಿದ್ದು, ವಿಶೇಷವಾಗಿ ರೈತರು ಕಂಗಾಲಾಗಿದ್ದಾರೆ. ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಮುಂಗಾರಿನ ಅಬ್ಬರ ಭೀತಿಯ ವಾತಾವರಣ ಸೃಷ್ಟಿಸಿದೆ. ಜಿಲ್ಲಾವಾರು ವಿಶೇಷ ಕಾರ್ಯಪಡೆ ರಚಿಸುವ ಮೂಲಕ ನೆರೆ ಪರಿಸ್ಥಿತಿಯನ್ನು ನಿಭಾಯಿಸಬೇಕಿದೆ ಎಂದು ತಿಳಿಸಿದ್ದಾರೆ..

ಕೇಂದ್ರದಿಂದ ಪರಿಹಾರಕ್ಕೆ ಆಗ್ರಹ
- ಸತತ ನೆರೆಯಿಂದ ಸಂತ್ರಸ್ತರಾಗಿರುವ ಕುಟುಂಬಗಳಿಗೆ ಹೆಚ್ಚಿನ ಪರಿಹಾರ ನೀಡಲು ಕೇಂದ್ರ ಸರ್ಕಾರವು ರಾಜ್ಯಕ್ಕೆ ವಿಶೇಷ ಅರ್ಥಿಕ ನೆರವು ನೀಡಬೇಕು. ರಾಜ್ಯ ಸರ್ಕಾರ ಕೂಡ ಈ ಸಂಬಂಧ ಕೇಂದ್ರದ ಮೇಲೆ ಒತ್ತಡ ತರಬೇಕು ಎಂದು ಒತ್ತಾಯಿಸುತ್ತೇನೆ.
- ಅತಿವೃಷ್ಟಿ ಸಂತ್ರಸ್ತರಿಗೆ ಕೂಡಲೇ ಆಸರೆ ಕೇಂದ್ರಗಳನ್ನು ಸ್ಥಾಪಿಸಬೇಕು. ಬೆಳೆ ಹಾನಿಗೊಳಗಾದ ರೈತರಿಗೆ ಹಾಗೂ ಮನೆ-ಮಠ ಕಳೆದುಕೊಂಡವರಿಗೆ, ಜೀವ ಹಾನಿಗೊಳಗಾದವರಿಗೆ ತಡಮಾಡದೆ ಸರ್ಕಾರ ಸಹಾಯಹಸ್ತ ಚಾಚಬೇಕು ಎಂದು ಸಲಹೆ ನೀಡಿದ್ದಾರೆ.

ಸರ್ಕಾರಕ್ಕೆ ಅಗ್ನಿಪರೀಕ್ಷೆ
'ಅತಿವೃಷ್ಟಿ ಸಂತ್ರಸ್ತರ ಪರಿಹಾರ ಕಾಮಗಾರಿಗಳಿಗೆ ಹಣಕಾಸಿನ ಕೊರತೆಯಾಗದಂತೆ ಸಕಾಲಿಕ ಎಚ್ಚರಿಕೆಯನ್ನು ಸರ್ಕಾರ ತೆಗೆದುಕೊಳ್ಳದಿದ್ದರೆ ಪರಿಸ್ಥಿತಿ ಬಿಗಡಾಯಿಸುತ್ತದೆ. ಒಂದು ಕಡೆ ಕೊರೋನಾ ಸೋಂಕಿನ ಭೀತಿ ಈಗ ನೆರೆಪೀಡಿತ ಪರಿಸ್ಥಿತಿ ಸರ್ಕಾರಕ್ಕೊಂದು ಅಗ್ನಿಪರೀಕ್ಷೆ. ಎಚ್ಚರ ತಪ್ಪಿದರೆ ಜನರ ಬದುಕು ಮೂರಾಬಟ್ಟೆಯಾಗುತ್ತದೆ' ಎಂದು ಎಚ್ಚರಿಕೆ ನೀಡಿದ್ದಾರೆ.

ಸಚಿವರು, ಅಧಿಕಾರಿಗಳು ಮೊಕ್ಕಾಂ ಮಾಡಿ
'ಸಚಿವರು ಮತ್ತು ಅಧಿಕಾರಿಗಳು ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ತೆರಳಿ ಅಲ್ಲಿಯೇ ಮೊಕ್ಕಾಂ ಮಾಡಿ ಪರಿಸ್ಥಿತಿಯ ಉಸ್ತುವಾರಿ ನೋಡಿಕೊಳ್ಳುವ ಮೂಲಕ ನೆರೆ ಸಂತ್ರಸ್ತರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕಿದೆ' ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications