Get Updates
Get notified of breaking news, exclusive insights, and must-see stories!

HD Kumaraswamy Birthday: ಹೆಚ್.ಡಿ. ಕುಮಾರಸ್ವಾಮಿ 66 ನೇ ಜನ್ಮದಿನ: ಮೋದಿ ಶುಭ ಹಾರೈಸಿದ್ದು ಹೀಗೆ

ಬೆಂಗಳೂರು, ಡಿಸೆಂಬರ್ 16: ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕೆ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಅವರು ಇಂದು(ಮಂಗಳವಾರ) 66 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡ ಅವರು ಸೇರಿದಂತೆ ಹಲವು ರಾಜಕೀಯ ನಾಯಕರು ಜನ್ಮದಿನಕ್ಕೆ ಶುಭ ಕೋರಿದ್ದಾರೆ.

ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಉಕ್ಕು ಮತ್ತು ಭಾರೀ ಕೈಗಾರಿಕೆಗಳಲ್ಲಿ ತಮ್ಮ ಕೆಲಸದ ಮೂಲಕ ಆತ್ಮನಿರ್ಭರತೆಯತ್ತ ನಮ್ಮ ಪ್ರಯತ್ನಗಳನ್ನು ಅವರು ಬಲಪಡಿಸುತ್ತಿದ್ದಾರೆ. ಸಮಾಜ ಸೇವೆಯಲ್ಲಿ ಅವರಿಗೆ ದೀರ್ಘ ಮತ್ತು ಆರೋಗ್ಯಕರ ಜೀವನ ದಯಪಾಲಿಸಲಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್‌ ಮೂಲಕ ಶುಭ ಕೋರಿದ್ದಾರೆ.

HD Kumaraswamy celebrates 66th birthday BJP Leaders wishes

ಹೆಚ್‌ ಡಿ ಕುಮಾರಸ್ವಾಮಿ ಅವರ ಜನ್ಮ ದಿನಕ್ಕೆ ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡ ಅವರ ಶುಭಕೋರಿದ್ದು, ನನ್ನ ಮಗ ಮತ್ತು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ. ಅವರ ತಾಳ್ಮೆ ಮತ್ತು ಶಕ್ತಿ ಹೆಚ್ಚಲಿ. ಅವರು ಕರ್ನಾಟಕ ಮತ್ತು ಭಾರತದ ಧ್ಯೇಯಕ್ಕಾಗಿ ಹೆಚ್ಚಿನ ಸಮರ್ಪಣಾಭಾವದಿಂದ ಸೇವೆ ಸಲ್ಲಿಸಲಿ ಎಂದು ಹೇಳಿದ್ದಾರೆ.

ಇನ್ನೂ ಜನ್ಮ ದಿನಕ್ಕೆ ಶುಭಕೋದಿದ ಮೋದಿ ಅವರಿಗೆ ಹೆಚ್‌ ಡಿ ಕುಮಾರಸ್ವಾಮಿ ಅವರು ಟ್ವೀಟ್‌ ಮೂಲಕ ಧನ್ಯವಾದ ತಿಳಿಸಿದ್ದಾರೆ. ಹುಟ್ಟುಹಬ್ಬದ ಶುಭಾಶಯ ಕೋರಿ ನಿರಂತರವಾಗಿ ನನಗೆ ಮಾರ್ಗದರ್ಶನ ಮಾಡುತ್ತಿರುವ ರಾಷ್ಟ್ರದ ಗೌರವಾನ್ವಿತ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರಿಗೆ ನಾನು ಹೃದಯಪೂರ್ವಕವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಈ ಸಂದರ್ಭದಲ್ಲಿ ನಾನು ಸನ್ಮಾನ್ಯರನ್ನು ಸಂಸತ್ ಭವನದ ಅವರ ಕಚೇರಿಯಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡೆ ಹಾಗೂ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವಾಲಯಗಳ ವ್ಯಾಪ್ತಿಯಲ್ಲಿ ಆಗಿರುವ ಗುರುತರ ಅಭಿವೃದ್ಧಿ ಹಾಗೂ ಪ್ರಗತಿಯ ಬಗ್ಗೆ ವಿವರಿಸಲು ಅವಕಾಶ ಸಿಕ್ಕಿತು.

ಗೌರವಾನ್ವಿತ ಪ್ರಧಾನಮಂತ್ರಿಗಳು ನಮ್ಮ ಪ್ರಯತ್ನಗಳು ಹಾಗೂ ಕಾರ್ಯಚಟುವಟಿಕೆ ಮತ್ತು ಫಲಿತಾಂಶಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು, ಇದು ನನಗೆ ಮತ್ತು ನನ್ನ ಇಡೀ ತಂಡಕ್ಕೆ ಅಪಾರ ಪ್ರೋತ್ಸಾಹದ ಶಕ್ತಿಯಾಗಿದೆ ಎಂದು ಭಾವಿಸುತ್ತೇನೆ. ಪ್ರಧಾನಿಗಳ ದೂರದೃಷ್ಟಿಯ ನಾಯಕತ್ವದಲ್ಲಿ ನಾವು ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆಯನ್ನು (RINL) ಪುನರುಜ್ಜೀವನಗೊಳಿಸುವ ಕಡೆಗೆ ನಿರ್ಣಾಯಕ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಬೊಕಾರೊ ಮತ್ತು ರೂರ್ಕೆಲಾದಂತಹ ಪ್ರಮುಖ ಉಕ್ಕಿನ ಸ್ಥಾವರಗಳಲ್ಲಿ ಬೃಹತ್ ಪ್ರಮಾಣದ ವಿಸ್ತರಣೆ ಮತ್ತು ಆಧುನೀಕರಣವನ್ನು ಪ್ರಾರಂಭಿಸಿದ್ದೇವೆ ಹಾಗೂ ಪ್ರಧಾನಿಗಳ ಕನಸಿನ ಆತ್ಮನಿರ್ಭರ ಭಾರತ ಸಾಕಾರದ ಭಾಗವಾಗಿ ಭೂಮಿಯಲ್ಲಿನ ಅಪರೂಪದ ಶಾಶ್ವತ ಅಯಸ್ಕಾಂತಗಳ ಬಳಕೆ ಯೋಜನೆ ಜಾರಿಗೆ ತಂದಿದ್ದೇವೆ. ಇದು ಅತ್ಯಂತ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದೆ.

2047ಕ್ಕೆ ವಿಕಸಿತ ಭಾರತ ಸಾಧನೆ ಸಂಕಲ್ಪ ತೊಟ್ಟಿರುವ ಮಾನ್ಯ ಪ್ರಧಾನಮಂತ್ರಿಗಳ ಪರಿವರ್ತನಾತ್ಮಕ ದೃಷ್ಟಿಕೋನದಿಂದ ನಾವು ಪ್ರೇರಣೆ ಪಡೆದಿದ್ದೇವೆ. 2070ರ ವೇಳೆಗೆ ಭಾರತದ ಉಕ್ಕು ವಲಯದಲ್ಲಿ ಇಂಗಾಲ ಹೊರಸೂಸುವಿಕೆಯನ್ನು ನಿವ್ವಳ ಶೂನ್ಯಕ್ಕೆ ತರುವ ಬದ್ಧತೆಯಿಂದ ಕರ್ತವ್ಯ ನಿರ್ವಹಿಸುತ್ತಿದ್ದೇವೆ. ಗೌರವಾನ್ವಿತ ಪ್ರಧಾನಿಗಳ ದೃಢ ನಾಯಕತ್ವದಲ್ಲಿ ಪ್ರಾಮಾಣಿಕತೆ, ಜವಾಬ್ದಾರಿ ಮತ್ತು ಅಚಲ ಸಂಕಲ್ಪದೊಂದಿಗೆ ಈ ರಾಷ್ಟ್ರೀಯ ಧ್ಯೇಯವನ್ನು ಮುನ್ನಡೆಸಲು ನಾನು ಸಮರ್ಪಿತನಾಗಿದ್ದೇನೆ ಎಂದು ಹೆಚ್‌ ಡಿ ಕುಮಾರಸ್ವಾಮಿ ಬರೆದುಕೊಂಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+