ಕರಾವಳಿ ಕುರಿತ ಹೇಳಿಕೆ: ಮುಖ್ಯಮಂತ್ರಿ ಕುಮಾರಸ್ವಾಮಿ ಸ್ಪಷ್ಟನೆ

ಬೆಂಗಳೂರು, ಮಾರ್ಚ್ 20: ಕರಾವಳಿ ಭಾಗದ ಜನರಿಗೆ ತಿಳಿವಳಿಕೆ ಕಮ್ಮಿ ಎಂಬ ಹೇಳಿಕೆಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸ್ಪಷ್ಟೀಕರಣ ನೀಡಿದ್ದಾರೆ.

ತಾವು ಕರಾವಳಿಯ ಜನತೆಯ ವಿರುದ್ಧ ಯಾವುದೇ ಹೇಳಿಕೆ ನೀಡಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ತಮ್ಮ ಹೇಳಿಕೆಯನ್ನು ಬಿಜೆಪಿ ತಿರುಚಿದೆ ಎಂದು ಆರೋಪಿಸಿದ್ದಾರೆ.

HD Kumaraswamy clarification to his controversial remarks on coastal Karnataka people

ಸತ್ಯವನ್ನು ತಿರುಚುವುದರಲ್ಲಿ ಮತ್ತು ಸುಳ್ಳು ಹೇಳುವ ವಿಚಾರದಲ್ಲಿ ಬಿಜೆಪಿ ಮತ್ತು ಅವರ ಐಟಿ ಸೆಲ್ ಅನ್ನು ಮೀರಿಸಲು ಯಾರಿಗೂ ಸಾಧ್ಯವಿಲ್ಲ ಎಂದು ಅವರು ಟ್ವಿಟ್ಟರ್‌ನಲ್ಲಿ ಲೇವಡಿ ಮಾಡಿದ್ದಾರೆ.

ಸುಳ್ಳು ಹೇಳುವುದರಲ್ಲಿ, ಸತ್ಯವನ್ನು ತಿರುಚುವುದರಲ್ಲಿ ಮತ್ತು ಅವರ ಐಟಿಸೆಲ್ ಮೀರಿಸಲು ಯಾರಿಗೂ ಸಾಧ್ಯವಿಲ್ಲ.ಇದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.ನಾನು ಕರಾವಳಿಯ ಜನತೆ ಬುದ್ದಿವಂತರಲ್ಲ ಎಂದು ಹೇಳಿಲ್ಲ.ಶಿಕ್ಷಣದಲ್ಲಿ, ಬೌದ್ಧಿಕತೆಯಲ್ಲಿ ಕರಾವಳಿ ದೇಶಕ್ಕೇ ಮಾದರಿ. ಬಿಜೆಪಿ ಸುಳ್ಳು ಹೇಳಿ ಜನರನ್ನು ದಾರಿತಪ್ಪಿಸಲು ಯತ್ನಿಸುತ್ತಿದೆ ಎಂದು ಕುಮಾರಸ್ವಾಮಿ ಟ್ವಿಟ್ಟರ್‌ನಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಉಡುಪಿ, ಕಾಪು, ಬ್ರಹ್ಮಾವರ ಕಾರ್ಕಳದಲ್ಲಿ ಜನರು ಬಿಜೆಪಿಗೆ ಬಹುಮತ ಕೊಡುತ್ತಾರೆ. ಅಲ್ಲಿನ ಜನರಿಗೆ ತಿಳಿವಳಿಕೆ ಕಡಿಮೆ. ಅಲ್ಲಿ ಒಂದು ಕಾಲೇಜು, ಶಾಲೆ ಬೇಕು ಅಂದರೆ ನಾನು ಬೇಕು, ರೇವಣ್ಣ ಬೇಕು. ಆದರೆ, ಅಲ್ಲಿನ ಜನರು ಬಿಜೆಪಿ, ನರೇಂದ್ರ ಮೋದಿ ಅಂತಾರೆ ಎಂದು ಕುಮಾರಸ್ವಾಮಿ ಕಿಡಿಕಾರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+