NDA Government: ಕೃಷಿ ಖಾತೆ ಮೇಲೆ ಕಣ್ಣಿಟ್ಟಿರುವ ಎಚ್ಡಿ ಕುಮಾರಸ್ವಾಮಿ
ಲೋಕಸಭಾ ಚುನಾವಣೆ 2024ರ ಚುನಾವಣೆಯಲ್ಲಿ ಎನ್ಡಿಎ ಬಹುಮತ ಪಡೆದಿದ್ದು ಸರ್ಕಾರ ರಚನೆಗೆ ತಯಾರಿ ಆರಂಭಿಸಿದೆ. ಬುಧವಾರ ನಡೆದ ಎನ್ಡಿಎ ಸಭೆಯಲ್ಲಿ ನರೇಂದ್ರ ಮೋದಿಯನ್ನು ಮುಂದಿನ ಪ್ರಧಾನಿ ಮಾಡಲು ಎಲ್ಲ ನಾಯಕರೂ ಒಪ್ಪಿಗೆ ಸೂಚಿಸಿದ್ದಾರೆ.
ಜೂನ್ 8ರಂದು ಶನಿವಾರ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಿಜೆಪಿಗೆ ಬೆಂಬಲ ಕೊಟ್ಟಿರುವ ಚಂದ್ರಬಾಬು ನಾಯ್ಡು ಮತ್ತು ನಿತೀಶ್ ಕುಮಾರ್ ಹಲವು ಬೇಡಿಕೆಗಳನ್ನು ಇಟ್ಟಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿದೆ. ಜೆಡಿಎಸ್ 2 ಸ್ಥಾನಗಳಲ್ಲಿ ಗೆದ್ದರೆ, ಬಿಜೆಪಿ 17 ಸ್ಥಾನಗಳನ್ನು ಗೆದ್ದುಕೊಂಡಿದೆ.
ಮಂಡ್ಯದಿಂದ ಸ್ಫರ್ಧೆ ಮಾಡಿ ಭರ್ಜರಿ ಗೆಲುವು ಸಾಧಿಸಿರುವ ಎಚ್ಡಿ ಕುಮಾರಸ್ವಾಮಿ ಇಂದು ನಡೆದ ಎನ್ಡಿಎ ಸಭೆಯಲ್ಲಿ ಭಾಗವಹಿಸಿದ್ದರು. ನರೇಂದ್ರ ಮೋದಿ ಸರ್ಕಾರದಲ್ಲಿ ಕೇಂದ್ರ ಸಚಿವ ಸ್ಥಾನ ಪಡೆಯಲು ಕುಮಾರಸ್ವಾಮಿ ಆಸಕ್ತಿ ಹೊಂದಿದ್ದಾರೆ.
ಕೃಷಿ ಖಾತೆ ಮೇಲೆ ಕಣ್ಣು
ದೆಹಲಿಯಲ್ಲಿ ಎನ್ಡಿಎ ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಎಚ್ಡಿ ಕುಮಾರಸ್ವಾಮಿ, "ನಮ್ಮಿಂದ ಯಾವುದೇ ಬೇಡಿಕೆಗಳು ಇಲ್ಲ, ಹಲವು ವರ್ಷಗಳಿಂದ ಕರ್ನಾಟಕ ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವುದು ನಮ್ಮ ಆದ್ಯತೆಯಾಗಿದೆ. ಕರ್ನಾಟಕ ರಾಜ್ಯಕ್ಕೆ ಕ್ಯಾಬಿನೆಟ್ ಸ್ಥಾನ ನೀಡುವ ಬಗ್ಗೆ ನರೇಂದ್ರ ಮೋದಿ ನಿರ್ಧಾರ ಮಾಡುತ್ತಾರೆ" ಎಂದು ಹೇಳಿದ್ದಾರೆ.
ಕೃಷಿ ಸಚಿವರಾಗುತ್ತಾರೆ ಎನ್ನುವ ಊಹಾಪೋಹಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಪಕ್ಷದ ಹಲವು ನಾಯಕರು ಇದೇ ಆಸೆ ಇಟ್ಟುಕೊಂಡಿದ್ದಾರೆ. ಆದರೆ ಎನ್ಡಿಎ ಏನು ನಿರ್ಧಾರ ಮಾಡುತ್ತದೆ ಕಾದು ನೋಡೋಣ ಎಂದು ಹೇಳುವ ಮೂಲಕ ಪರೋಕ್ಷವಾಗಿ ತನಗೆ ಕೃಷಿ ಸಚಿವನಾಗುವ ಆಸಕ್ತಿ ಇದೆ ಎಂದು ಸೂಚನೆ ಕೊಟ್ಟಿದ್ದಾರೆ.
ನಮ್ಮ ಕುಟುಂಬ ಮೊದಲಿನಿಂದ ರೈತ ಸಮುದಾಯದ ಅಭಿವೃದ್ಧಿಗೆ ಹೋರಾಡಿದೆ. ಕೃಷಿ ಸಮಸ್ಯೆಗಳ ಬಗ್ಗೆ ಸಾಕಷ್ಟು ಮಾಹಿತಿ ಹೊಂದಿರುವ ಎಚ್ಡಿಕೆ ಅವರಿಗೆ ಕೃಷಿ ಖಾತೆ ಕೊಡಬೇಕು ಎಂದು ಜೆಡಿಎಸ್ ಬೆಂಬಲಿಗರು ಕೂಡ ಆಗ್ರಹಿಸಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications