ಮೈತ್ರಿ ಶಾಸಕರು ನನ್ನನ್ನು ಸಿಎಂ ಮಾಡಿ ಅಂದಾಗ ಕುಮಾರಸ್ವಾಮಿ ಒಪ್ಪಲಿಲ್ಲ: ರಹಸ್ಯ ಬಿಚ್ಚಿಟ್ಟ ಡಿ ಕೆ ಶಿವಕುಮಾರ್‌

ಬೆಂಗಳೂರು, ನವೆಂಬರ್‌ 15: ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಎಂದು ಘೋಷಣೆ ಮಾಡಿದರೆ, ಮುಂಬೈಯಿಂದ ಮರಳಿ ಬರುವುದಾಗಿ ಗೋಪಾಲಯ್ಯ ಮತ್ತು ಎಸ್.ಟಿ.ಸೋಮಶೇಖರ್ ಫೋನ್ ಮಾಡಿ ಹೇಳಿದ್ದರು. ಆದರೆ ಕುಮಾರಸ್ವಾಮಿ ಅವರು ನನ್ನ ಹೆಸರು ಹೇಳಲಿಲ್ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪರೋಕ್ಷವಾಗಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಪಕ್ಷದ 40 ಜನ ಬಿಜೆಪಿ ಸಂಪರ್ಕದಲ್ಲಿ ಇದ್ದಾರೆ ಅನ್ನುವ ಕುಮಾರಸ್ವಾಮಿ ಇನ್ನೊಂದೆಡೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದಾದರೆ ಜೆಡಿಎಸ್ ಪಕ್ಷದ 19 ಶಾಸಕರ ಬೆಂಬಲ ನೀಡುತ್ತೇವೆ ಅನ್ನುತ್ತಾರೆ. ಅವರ ಮಾತು ಕೇಳಲು ನಾವೇನು ದಡ್ಡರೇ? ಎಂದು ಪ್ರಶ್ನಿಸಿದರು.

dk-shivakumar

ಸರ್ಕಾರಕ್ಕೆ ನಮ್ಮ ಪಕ್ಷದ 136 ಜನ ಶಾಸಕರು ಮತ್ತು ಪಕ್ಷೇತರರ ಬೆಂಬಲವಿದೆ. ಕುಮಾರಸ್ವಾಮಿ ಅವರೇ ಎನ್ ಡಿಎಯಿಂದ ಮೊದಲು ಹೊರಬನ್ನಿ, ಒಬ್ಬ ವ್ಯಕ್ತಿಗೆ ಸ್ಪಷ್ಟವಾದ ರಾಜಕೀಯ ನಿಲುವು ಇರಬೇಕು ಎಂದು ಅವರಿಗೆ ಹೇಳಿದೆ. ನಂತರ ಈ ಕುರಿತು ನಾನು ಹೆಚ್ಚು ಪ್ರತಿಕ್ರಿಯೆ ನೀಡಲು ಹೋಗಲೇಇಲ್ಲ.

ಕುಮಾರಸ್ವಾಮಿ ಅವರ ದ್ವಂದ್ವ ನಿಲುವು ಅವರಿಗೆ ಅರ್ಥವಾಗುತ್ತಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಜೊತೆ ಸೇರಿದ್ದಾರೆ, ತೆಲಂಗಾಣದಲ್ಲಿ ಕೆಸಿಆರ್ಗೆ ಪರವಾಗಿ ಮಾತನಾಡುತ್ತಾರೆ. ಕೆಸಿಆರ್ ಅವರ ಮಗ ಮೋದಿ ಅವರನ್ನು ಸುಳ್ಳ ಎಂದು ಕರೆಯುತ್ತಾರೆ. 18 ಜನ ಶಾಸಕರನ್ನು ಕರೆದುಕೊಂಡು, ಅವರನ್ನು ಖುರ್ಚಿಯಿಂದ ಇಳಿಸಿದವರ ಜತೆಗೆ ಮಿಲನವಾಗಿದ್ದೇವೆ, ಸಂಸಾರ ನಡೆಸುತ್ತೇವೆ ಎಂದರೆ ಸಿದ್ದಾಂತ ಎನ್ನುವುದು ಎಲ್ಲಿಗೆ ಹೋಯಿತು?

ಜೆಡಿಎಸ್ ಜಾತ್ಯಾತೀತ ಸಿದ್ಧಾಂತಗಳ ಮೇಲೆ ನಂಬಿಕೆ ಇಟ್ಟ ಪಕ್ಷ ಎನ್ನುವ ಕಾರಣಕ್ಕೆ 80 ಜನ ಕಾಂಗ್ರೆಸ್ ಶಾಸಕರು ಇದ್ದರೂ 30 ಸ್ಥಾನ ಗೆದ್ದಂತಹ ಅವರ ಪಕ್ಷಕ್ಕೆ ಬೆಂಬಲ ನೀಡಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ದೆವು. ಈಗ ಸರ್ಕಾರ ಬೀಳಿಸಿದವರ ಜತೆಗೇ ಅವರು ನೆಂಟಸ್ಥನ ಮಾಡಿದ್ದಾರೆ.

dk-shivakumar

ಕುಮಾರಸ್ವಾಮಿ ಅವರೇ, ನೀವು ಸಹ 20 ಮತ್ತು 14 ತಿಂಗಳು ಮುಖ್ಯಮಂತ್ರಿಗಳಾಗಿ ಕೆಲಸ ಮಾಡಿದ್ದೀರಿ. ನಿಮಗೆ ಆಡಳಿತ ಮಾಡಲು ಬಿಡಲಿಲ್ಲವೇ? ವಿರೋಧ ಪಕ್ಷವಾಗಿ ಟೀಕೆಗಳನ್ನು ಮಾಡಿದರೂ ಬಿಜೆಪಿಯವರಿಗೆ ನಾವು ಆಡಳಿತ ಮಾಡಲು ಬಿಡಲಿಲ್ಲವೇ? ಆದರೆ ನೀವು ಅಧಿಕಾರ ನನಗೆ ಸಿಗಲಿಲ್ಲ ಎಂದು ಅಸೂಯೆಯಿಂದ ಕೈ, ಕೈ ಉಜ್ಜಿಕೊಂಡು ಕುಳಿತರೇ ಏನು ಪ್ರಯೋಜನ?.

ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ನಮ್ಮ ಆಡಳಿತವನ್ನು ನೋಡಿಕೊಂಡು ಇರಲು ನಿಮಗೆ ಆಗುತ್ತಿಲ್ಲ. ಗ್ಯಾರಂಟಿಗಳ ಬಗ್ಗೆ, ಆಡಳಿತದ ಬಗ್ಗೆ ಎಲ್ಲದರ ಬಗ್ಗೆಯೂ ಕುಹಕವಾಡುತ್ತಿದ್ದೀರಿ. ನಮ್ಮ ತಪ್ಪುಗಳನ್ನು ಹೇಳಿದರೆ ತಿದ್ದಿಕೊಂಡು ಕೆಲಸ ಮಾಡುತ್ತೇವೆ, ಅನವಶ್ಯಕ ಟೀಕೆಗಳು ಸಲ್ಲದು. ನಮ್ಮ ಆಡಳಿತ ವೈಫಲ್ಯಗಳನ್ನು ಎತ್ತಿ ತೋರಿಸಲಿ, ಅದರ ಬದಲು ನಮ್ಮ ಶಾಸಕರಿಗೆ ಕರೆ ಮಾಡುವುದು ಸೇರಿದಂತೆ ಇತರೇ ಕೆಲಸಗಳನ್ನು ಮಾಡಿದರೆ, ಇದನ್ನು ಏನೆಂದು ಕರೆಯಬೇಕು? ನಮಗೆ ಎಲ್ಲಾ ವಿಚಾರ ಗೊತ್ತಿದೆ! ವಿರೋಧ ಪಕ್ಷಕ್ಕೆ ಅಷ್ಟೊಂದು ಶಕ್ತಿ ಇರುವಾಗ ನಮಗೆ ಇನ್ನೆಷ್ಟು ಶಕ್ತಿ ಇರಬೇಕು.

ಬಿಜೆಪಿಯವರು 6 ತಿಂಗಳ ನಂತರ ನೂತನ ರಾಜ್ಯಾಧ್ಯಕ್ಷನನ್ನು ಆಯ್ಕೆ ಮಾಡಿದ್ದಾರೆ. ಅದು ಅವರ ಪಕ್ಷದ ಆಂತರಿಕ ವಿಚಾರ. ಅವರು ನಮ್ಮನ್ನು ರಚನಾತ್ಮಕವಾಗಿ ಟೀಕೆ ಮಾಡಿದರೆ ಒಪ್ಪಿಕೊಳ್ಳುತ್ತೇವೆ, ಇದೇ ಪ್ರಜಾಪ್ರಭುತ್ವ. ಮಂಜುನಾಥ್, ಗೌರಿಶಂಕರ್ ಸೇರಿದಂತೆ ಜೆಡಿಎಸ್ ಪಕ್ಷದ ಅನೇಕರ ಬಳಿ ಕೇಳಿದ್ದೇನೆ, ʼಕುಮಾರಸ್ವಾಮಿ ಅವರು ಹೇಗೆʼ ಎಂದು. ಒಂದು ನಿಮಿಷ ಇದ್ದ ನಿರ್ಧಾರ ಇನ್ನೊಂದು ನಿಮಿಷ ಇರುವುದಿಲ್ಲ, ಅದಕ್ಕೆ ನಮಗೆ ಅವರ ಬಳಿ ಕೆಲಸ ಮಾಡಲು ಆಗುವುದಿಲ್ಲ. ನಮಗೆ ಕಾಂಗ್ರೆಸ್ ಪಕ್ಷವೇ ಸರಿ ಎಂದು ಪಕ್ಷ ಸೇರ್ಪಡೆಯಾಗುತ್ತಿದ್ದಾರೆ.

ಪಕ್ಷ ಬಿಟ್ಟು ಕಾಂಗ್ರೆಸ್ ಸೇರ್ತೀನಿ ಅಂದವರಿಗೆ ಕುಮಾರಸ್ವಾಮಿ, "ನೀನು ದಳದಲ್ಲೇ ಇರು, ಆದರೆ ಬಿಜೆಪಿಗೆ ಕೆಲಸ ಮಾಡುವ ಬದಲು ಕಾಂಗ್ರೆಸ್ ಪಕ್ಷಕ್ಕೆ ಕೆಲಸ ಮಾಡು" ಎಂದು ಹೇಳಿದ್ದಾರಂತೆ. ಇದು ಹೇಗೆ ಸಾಧ್ಯ? ಮೋಸ ಮಾಡಿದಂತೆ ಅಲ್ಲವೇ? ಇದರ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಗೊತ್ತಿಲ್ಲ. ಗೌರಿಶಂಕರ್ ಮತ್ತು ಮಂಜುನಾಥ್ ಅವರನ್ನೇ ಕೇಳಬೇಕು. ಈ ಕಾರಣಕ್ಕೆ ಇವರಿಬ್ಬರು ಕಾರ್ಯಕರ್ತರ ಅಭಿಪ್ರಾಯ ಪಡೆದುಕೊಂಡು ಕಾಂಗ್ರೆಸ್ ಪಕ್ಷ ಸೇರಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+